ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ತೆರೆ ಕಂಡ ನಂತರದಲ್ಲಿ ಸಮಂತಾ ಬೇಡಿಕೆ ಹೆಚ್ಚಿದೆ. ಎಲ್ಲರೂ ಸಮಂತಾ ಕಾಲ್​ಶೀಟ್​ ಪಡೆಯೋಕೆ ಮುಂದೆ ಬಂದಿದ್ದಾರೆ. ಸಮಂತಾ ಮತ್ತೆ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ.

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​
ಸಮಂತಾ ಅಕ್ಕಿನೇನಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Nov 04, 2021 | 7:41 PM

ಸಮಂತಾ ಅಕ್ಕಿನೇನಿ ಅವರು ವಿಚ್ಛೇದನದ ನಂತರ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಶ್ವಾನಗಳನ್ನು ಸಾಕಿ, ಅದರ ಆರೈಕೆಯಲ್ಲಿ ಸಮಯ ಕಳೆಯುತ್ತಾ ನೋವನ್ನು ಮರೆಯುತ್ತಿದ್ದಾರೆ. ಇದರ ಜತೆ ರಿಷಿಕೇಷ, ದುಬೈ ಸೇರಿ ನಾನಾ ಕಡೆ ಪ್ರವಾಸ ತೆರಳಿದ್ದಾರೆ. ಈ ಮಧ್ಯೆ ಸಮಂತಾ ಬಗ್ಗೆ ಹೊಸ ಗಾಸಿಪ್​ ಒಂದು ಹುಟ್ಟಿಕೊಂಡಿದೆ. ಕೆಲ ಖ್ಯಾತ ನಿರ್ದೇಶಕರು ಸಮಂತಾ ಜತೆ ಕೆಲಸ ಮಾಡೋಕೆ ಮುಂದೆ ಬಂದಿದ್ದರು. ಆದರೆ, ಅವರು ಬೇಡಿಕೆ ಇಟ್ಟ ಸಂಭಾವನೆ ಕೇಳಿ ನಿರ್ಮಾಪಕರು ನೋ ಎಂದಿದ್ದಾರೆ ಎನ್ನಲಾಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ತೆರೆ ಕಂಡ ನಂತರದಲ್ಲಿ ಸಮಂತಾ ಬೇಡಿಕೆ ಹೆಚ್ಚಿದೆ. ಎಲ್ಲರೂ ಸಮಂತಾ ಕಾಲ್​ಶೀಟ್​ ಪಡೆಯೋಕೆ ಮುಂದೆ ಬಂದಿದ್ದಾರೆ. ಸಮಂತಾ ಮತ್ತೆ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಆದರೆ, ಅವರು ದೊಡ್ಡ ಮೊತ್ತದ ಬೇಡಿಕೆ ಇಡುತ್ತಿದ್ದಾರೆ. ಇದು ಸಹಜವಾಗಿಯೇ ನಿರ್ಮಾಪಕರನ್ನು ಚಿಂತೆಗೀಡು ಮಾಡಿದೆ.

ಸಮಂತಾ ಅವರು ದಸರಾಗೆ ದೊಡ್ಡ ಘೋಷಣೆ ಒಂದನ್ನು ಮಾಡಿದ್ದರು. ‘ಖಿಲಾಡಿ’ ಸಿನಿಮಾ ನಿರ್ಮಾಪಕರು ಸಮಂತಾ ಜತೆ ಸಿನಿಮಾ ಘೋಷಣೆ ಮಾಡಿದರೆ, ತೆಲುಗಿನ ಶಿವಲೆಂಕಾ ಕೃಷ್ಣ ಪ್ರಸಾದ್​ ಅವರು ಸಮಂತಾ ಜತೆ ಸಿನಿಮಾ ಮಾಡುವುದಾಗಿ ಅನೌನ್ಸ್​ ಮಾಡಿದ್ದರು. ಈ ಎರಡೂ ಸಿನಿಮಾ ತೆಲುಗು ಹಾಗೂ ತಮಿಳಲ್ಲಿ ಮೂಡಿ ಬರುತ್ತಿದೆ. ಈ ಚಿತ್ರಕ್ಕೆ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಎನ್ನುವ ವಿಚಾರ ಹೊರ ಬಿದ್ದಿಲ್ಲ. ಆದರೆ, ನಾನಿ ನಟಿಸುತ್ತಿರುವ ತೆಲುಗಿನ ‘ದಸರಾ’ ಚಿತ್ರಕ್ಕೆ ಸಮಂತಾ 3 ಕೋಟಿ ಸಂಭಾವನೆ ಕೇಳಿದ್ದಾರೆ ಎನ್ನುತ್ತಿವೆ ಮೂಲಗಳು.

ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ ಸೇರಿ ಅನೇಕ ಸ್ಟಾರ್​ ಹೀರೋಯಿನ್​ಗಳು ಒಂದು ಸಿನಿಮಾಗೆ 2-2.5 ಕೋಟಿ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಹೀಗಿರುವಾಗ ಸಮಂತಾ ಇಷ್ಟು ದೊಡ್ಡ ಮೊತ್ತಕ್ಕೆ ಬೇಡಿಕೆ ಇಟ್ಟರೆ ಅದನ್ನು ಒಪ್ಪಿಕೊಳ್ಳೋದು ಹೇಗೆ ಎನ್ನುವ ಚಿಂತೆ ನಿರ್ಮಾಪಕರನ್ನು ಕಾಡುತ್ತಿದೆ. ಹೀರೋಯಿನ್​ಗೆ ಇಷ್ಟು ಸಂಭಾವನೆ ನೀಡಿದರೆ ಸಿನಿಮಾದ ಬಜೆಟ್​ ಕೂಡ ಹೆಚ್ಚಲಿದೆ. ಈ ಬಗ್ಗೆಯೂ ನಿರ್ಮಾಪಕರು ಆಲೋಚಿಸುತ್ತಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ