AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ತೆರೆ ಕಂಡ ನಂತರದಲ್ಲಿ ಸಮಂತಾ ಬೇಡಿಕೆ ಹೆಚ್ಚಿದೆ. ಎಲ್ಲರೂ ಸಮಂತಾ ಕಾಲ್​ಶೀಟ್​ ಪಡೆಯೋಕೆ ಮುಂದೆ ಬಂದಿದ್ದಾರೆ. ಸಮಂತಾ ಮತ್ತೆ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ.

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​
ಸಮಂತಾ ಅಕ್ಕಿನೇನಿ
TV9 Web
| Edited By: |

Updated on: Nov 04, 2021 | 7:41 PM

Share

ಸಮಂತಾ ಅಕ್ಕಿನೇನಿ ಅವರು ವಿಚ್ಛೇದನದ ನಂತರ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಶ್ವಾನಗಳನ್ನು ಸಾಕಿ, ಅದರ ಆರೈಕೆಯಲ್ಲಿ ಸಮಯ ಕಳೆಯುತ್ತಾ ನೋವನ್ನು ಮರೆಯುತ್ತಿದ್ದಾರೆ. ಇದರ ಜತೆ ರಿಷಿಕೇಷ, ದುಬೈ ಸೇರಿ ನಾನಾ ಕಡೆ ಪ್ರವಾಸ ತೆರಳಿದ್ದಾರೆ. ಈ ಮಧ್ಯೆ ಸಮಂತಾ ಬಗ್ಗೆ ಹೊಸ ಗಾಸಿಪ್​ ಒಂದು ಹುಟ್ಟಿಕೊಂಡಿದೆ. ಕೆಲ ಖ್ಯಾತ ನಿರ್ದೇಶಕರು ಸಮಂತಾ ಜತೆ ಕೆಲಸ ಮಾಡೋಕೆ ಮುಂದೆ ಬಂದಿದ್ದರು. ಆದರೆ, ಅವರು ಬೇಡಿಕೆ ಇಟ್ಟ ಸಂಭಾವನೆ ಕೇಳಿ ನಿರ್ಮಾಪಕರು ನೋ ಎಂದಿದ್ದಾರೆ ಎನ್ನಲಾಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ತೆರೆ ಕಂಡ ನಂತರದಲ್ಲಿ ಸಮಂತಾ ಬೇಡಿಕೆ ಹೆಚ್ಚಿದೆ. ಎಲ್ಲರೂ ಸಮಂತಾ ಕಾಲ್​ಶೀಟ್​ ಪಡೆಯೋಕೆ ಮುಂದೆ ಬಂದಿದ್ದಾರೆ. ಸಮಂತಾ ಮತ್ತೆ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಆದರೆ, ಅವರು ದೊಡ್ಡ ಮೊತ್ತದ ಬೇಡಿಕೆ ಇಡುತ್ತಿದ್ದಾರೆ. ಇದು ಸಹಜವಾಗಿಯೇ ನಿರ್ಮಾಪಕರನ್ನು ಚಿಂತೆಗೀಡು ಮಾಡಿದೆ.

ಸಮಂತಾ ಅವರು ದಸರಾಗೆ ದೊಡ್ಡ ಘೋಷಣೆ ಒಂದನ್ನು ಮಾಡಿದ್ದರು. ‘ಖಿಲಾಡಿ’ ಸಿನಿಮಾ ನಿರ್ಮಾಪಕರು ಸಮಂತಾ ಜತೆ ಸಿನಿಮಾ ಘೋಷಣೆ ಮಾಡಿದರೆ, ತೆಲುಗಿನ ಶಿವಲೆಂಕಾ ಕೃಷ್ಣ ಪ್ರಸಾದ್​ ಅವರು ಸಮಂತಾ ಜತೆ ಸಿನಿಮಾ ಮಾಡುವುದಾಗಿ ಅನೌನ್ಸ್​ ಮಾಡಿದ್ದರು. ಈ ಎರಡೂ ಸಿನಿಮಾ ತೆಲುಗು ಹಾಗೂ ತಮಿಳಲ್ಲಿ ಮೂಡಿ ಬರುತ್ತಿದೆ. ಈ ಚಿತ್ರಕ್ಕೆ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಎನ್ನುವ ವಿಚಾರ ಹೊರ ಬಿದ್ದಿಲ್ಲ. ಆದರೆ, ನಾನಿ ನಟಿಸುತ್ತಿರುವ ತೆಲುಗಿನ ‘ದಸರಾ’ ಚಿತ್ರಕ್ಕೆ ಸಮಂತಾ 3 ಕೋಟಿ ಸಂಭಾವನೆ ಕೇಳಿದ್ದಾರೆ ಎನ್ನುತ್ತಿವೆ ಮೂಲಗಳು.

ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ ಸೇರಿ ಅನೇಕ ಸ್ಟಾರ್​ ಹೀರೋಯಿನ್​ಗಳು ಒಂದು ಸಿನಿಮಾಗೆ 2-2.5 ಕೋಟಿ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಹೀಗಿರುವಾಗ ಸಮಂತಾ ಇಷ್ಟು ದೊಡ್ಡ ಮೊತ್ತಕ್ಕೆ ಬೇಡಿಕೆ ಇಟ್ಟರೆ ಅದನ್ನು ಒಪ್ಪಿಕೊಳ್ಳೋದು ಹೇಗೆ ಎನ್ನುವ ಚಿಂತೆ ನಿರ್ಮಾಪಕರನ್ನು ಕಾಡುತ್ತಿದೆ. ಹೀರೋಯಿನ್​ಗೆ ಇಷ್ಟು ಸಂಭಾವನೆ ನೀಡಿದರೆ ಸಿನಿಮಾದ ಬಜೆಟ್​ ಕೂಡ ಹೆಚ್ಚಲಿದೆ. ಈ ಬಗ್ಗೆಯೂ ನಿರ್ಮಾಪಕರು ಆಲೋಚಿಸುತ್ತಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?