Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ತೆರೆ ಕಂಡ ನಂತರದಲ್ಲಿ ಸಮಂತಾ ಬೇಡಿಕೆ ಹೆಚ್ಚಿದೆ. ಎಲ್ಲರೂ ಸಮಂತಾ ಕಾಲ್​ಶೀಟ್​ ಪಡೆಯೋಕೆ ಮುಂದೆ ಬಂದಿದ್ದಾರೆ. ಸಮಂತಾ ಮತ್ತೆ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ.

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​
ಸಮಂತಾ ಅಕ್ಕಿನೇನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 04, 2021 | 7:41 PM

ಸಮಂತಾ ಅಕ್ಕಿನೇನಿ ಅವರು ವಿಚ್ಛೇದನದ ನಂತರ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಶ್ವಾನಗಳನ್ನು ಸಾಕಿ, ಅದರ ಆರೈಕೆಯಲ್ಲಿ ಸಮಯ ಕಳೆಯುತ್ತಾ ನೋವನ್ನು ಮರೆಯುತ್ತಿದ್ದಾರೆ. ಇದರ ಜತೆ ರಿಷಿಕೇಷ, ದುಬೈ ಸೇರಿ ನಾನಾ ಕಡೆ ಪ್ರವಾಸ ತೆರಳಿದ್ದಾರೆ. ಈ ಮಧ್ಯೆ ಸಮಂತಾ ಬಗ್ಗೆ ಹೊಸ ಗಾಸಿಪ್​ ಒಂದು ಹುಟ್ಟಿಕೊಂಡಿದೆ. ಕೆಲ ಖ್ಯಾತ ನಿರ್ದೇಶಕರು ಸಮಂತಾ ಜತೆ ಕೆಲಸ ಮಾಡೋಕೆ ಮುಂದೆ ಬಂದಿದ್ದರು. ಆದರೆ, ಅವರು ಬೇಡಿಕೆ ಇಟ್ಟ ಸಂಭಾವನೆ ಕೇಳಿ ನಿರ್ಮಾಪಕರು ನೋ ಎಂದಿದ್ದಾರೆ ಎನ್ನಲಾಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ತೆರೆ ಕಂಡ ನಂತರದಲ್ಲಿ ಸಮಂತಾ ಬೇಡಿಕೆ ಹೆಚ್ಚಿದೆ. ಎಲ್ಲರೂ ಸಮಂತಾ ಕಾಲ್​ಶೀಟ್​ ಪಡೆಯೋಕೆ ಮುಂದೆ ಬಂದಿದ್ದಾರೆ. ಸಮಂತಾ ಮತ್ತೆ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಆದರೆ, ಅವರು ದೊಡ್ಡ ಮೊತ್ತದ ಬೇಡಿಕೆ ಇಡುತ್ತಿದ್ದಾರೆ. ಇದು ಸಹಜವಾಗಿಯೇ ನಿರ್ಮಾಪಕರನ್ನು ಚಿಂತೆಗೀಡು ಮಾಡಿದೆ.

ಸಮಂತಾ ಅವರು ದಸರಾಗೆ ದೊಡ್ಡ ಘೋಷಣೆ ಒಂದನ್ನು ಮಾಡಿದ್ದರು. ‘ಖಿಲಾಡಿ’ ಸಿನಿಮಾ ನಿರ್ಮಾಪಕರು ಸಮಂತಾ ಜತೆ ಸಿನಿಮಾ ಘೋಷಣೆ ಮಾಡಿದರೆ, ತೆಲುಗಿನ ಶಿವಲೆಂಕಾ ಕೃಷ್ಣ ಪ್ರಸಾದ್​ ಅವರು ಸಮಂತಾ ಜತೆ ಸಿನಿಮಾ ಮಾಡುವುದಾಗಿ ಅನೌನ್ಸ್​ ಮಾಡಿದ್ದರು. ಈ ಎರಡೂ ಸಿನಿಮಾ ತೆಲುಗು ಹಾಗೂ ತಮಿಳಲ್ಲಿ ಮೂಡಿ ಬರುತ್ತಿದೆ. ಈ ಚಿತ್ರಕ್ಕೆ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಎನ್ನುವ ವಿಚಾರ ಹೊರ ಬಿದ್ದಿಲ್ಲ. ಆದರೆ, ನಾನಿ ನಟಿಸುತ್ತಿರುವ ತೆಲುಗಿನ ‘ದಸರಾ’ ಚಿತ್ರಕ್ಕೆ ಸಮಂತಾ 3 ಕೋಟಿ ಸಂಭಾವನೆ ಕೇಳಿದ್ದಾರೆ ಎನ್ನುತ್ತಿವೆ ಮೂಲಗಳು.

ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ ಸೇರಿ ಅನೇಕ ಸ್ಟಾರ್​ ಹೀರೋಯಿನ್​ಗಳು ಒಂದು ಸಿನಿಮಾಗೆ 2-2.5 ಕೋಟಿ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಹೀಗಿರುವಾಗ ಸಮಂತಾ ಇಷ್ಟು ದೊಡ್ಡ ಮೊತ್ತಕ್ಕೆ ಬೇಡಿಕೆ ಇಟ್ಟರೆ ಅದನ್ನು ಒಪ್ಪಿಕೊಳ್ಳೋದು ಹೇಗೆ ಎನ್ನುವ ಚಿಂತೆ ನಿರ್ಮಾಪಕರನ್ನು ಕಾಡುತ್ತಿದೆ. ಹೀರೋಯಿನ್​ಗೆ ಇಷ್ಟು ಸಂಭಾವನೆ ನೀಡಿದರೆ ಸಿನಿಮಾದ ಬಜೆಟ್​ ಕೂಡ ಹೆಚ್ಚಲಿದೆ. ಈ ಬಗ್ಗೆಯೂ ನಿರ್ಮಾಪಕರು ಆಲೋಚಿಸುತ್ತಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ