AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ ಕೊಟ್ಟ ನಾಗ ಚೈತನ್ಯ; ಸಮಂತಾ ಅಕ್ಕಿನೇನಿ ಮಿಸ್ಸಿಂಗ್​

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ರಿಲೀಸ್​ ಆಗುವುದಕ್ಕೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಆಮಿರ್​ ಖಾನ್​ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ ಕೊಟ್ಟ ನಾಗ ಚೈತನ್ಯ; ಸಮಂತಾ ಅಕ್ಕಿನೇನಿ ಮಿಸ್ಸಿಂಗ್​
ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ
TV9 Web
| Edited By: |

Updated on:Sep 25, 2021 | 10:04 PM

Share

ಸಮಂತಾ ಅಕ್ಕಿನೇನಿ ಕೌಟುಂಬಿಕ ವಿಚಾರದ ಬಗ್ಗೆ ಕೇಳಿ ಬರುತ್ತಿರುವ ಮಾಹಿತಿ ಒಂದೆರಡಲ್ಲ. ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ನೀಡಿದ್ದಾರೆ ಎಂಬುದನ್ನು ಪುಷ್ಟೀಕರಿಸುವ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಬ್ರೇಕ್​ ಹಾಕೋಕೆ ಅಕ್ಕಿನೇನಿ ಕುಟುಂಬ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ, ಇದೆಲ್ಲ ವ್ಯರ್ಥವಾಗುತ್ತಿದೆ. ಹೀಗಿರುವಾಗಲೇ ನಾಗ ಚೈತನ್ಯ ಕೊಟ್ಟ ಪಾರ್ಟಿ ಫೋಟೋ ವೈರಲ್​ ಆಗಿದೆ.

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ರಿಲೀಸ್​ ಆಗುವುದಕ್ಕೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಆಮಿರ್​ ಖಾನ್​ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಆಮಿರ್​ ಖಾನ್​ ಮತ್ತು ನಾಗ ಚೈತನ್ಯ ಒಟ್ಟಿಗೆ ಅಭಿನಯಿಸಿದ್ದಾರೆ. ಆ ಸ್ನೇಹದ ಮೇರೆಗೆ ಆಮಿರ್​ ಖಾನ್​ ಅವರು ‘ಲವ್​ ಸ್ಟೋರಿ’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬಂದಿದ್ದರು. ಆ ಕಾರ್ಯಕ್ರಮ ಮುಗಿದ ಬಳಿಕ ನಾಗಾರ್ಜುನ ಅವರ ಮನೆಯಲ್ಲಿ ಆಮಿರ್​ ಖಾನ್​ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಾಗಾರ್ಜುನ, ನಾಗ ಚೈತನ್ಯ, ಆಮೀರ್​ ಖಾನ್​ ಒಟ್ಟಿಗೆ ಕುಳಿತು ಭೋಜನ ಸವಿದರು. ಈ ಫೋಟೋ ಈಗ ಸಾಕಷ್ಟು ವೈರಲ್​ ಆಗುತ್ತಿದೆ. ಅಚ್ಚರಿ ಎಂದರೆ, ಈ ಫೋಟೋದಲ್ಲಿ ಸಮಂತಾ ಕಾಣುತ್ತಿಲ್ಲ.

ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

ಸದ್ಯ, ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ. ಅಕ್ಕಿನೇನಿ ಮನೆಯಲ್ಲಿ ಆಮಿರ್​ ಊಟ ಸವಿದರು ಎಂಬುದಕ್ಕಿಂತ ಈ ಫೋಟದಲ್ಲಿ ಸಮಂತಾ ಇಲ್ಲ ಎನ್ನುವುದೇ ಹೆಚ್ಚು ಹೈಲೈಟ್​ ಆಗುತ್ತಿದೆ. ಅಲ್ಲದೆ, ವಿಚ್ಛೇದನ ವದಂತಿಗೆ ಇದು ಮತ್ತಷ್ಟು ಪುಷ್ಟಿ ನೀಡಿದೆ.

ಇದನ್ನೂ ಓದಿ: ಸಮಂತಾ-ನಾಗ ಚೈತನ್ಯ ಫ್ಯಾಮಿಲಿಯ ಇನ್ನೊಂದು ಗುಟ್ಟು ಬಯಲು; ಮಗನ ಸಿನಿಮಾಗೆ ನಾಗಾರ್ಜುನ ತಲೆ ಹಾಕುತ್ತಿಲ್ಲ

ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ

Published On - 10:03 pm, Sat, 25 September 21

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!