AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ ಕೊಟ್ಟ ನಾಗ ಚೈತನ್ಯ; ಸಮಂತಾ ಅಕ್ಕಿನೇನಿ ಮಿಸ್ಸಿಂಗ್​

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ರಿಲೀಸ್​ ಆಗುವುದಕ್ಕೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಆಮಿರ್​ ಖಾನ್​ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ ಕೊಟ್ಟ ನಾಗ ಚೈತನ್ಯ; ಸಮಂತಾ ಅಕ್ಕಿನೇನಿ ಮಿಸ್ಸಿಂಗ್​
ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ
TV9 Web
| Edited By: |

Updated on:Sep 25, 2021 | 10:04 PM

Share

ಸಮಂತಾ ಅಕ್ಕಿನೇನಿ ಕೌಟುಂಬಿಕ ವಿಚಾರದ ಬಗ್ಗೆ ಕೇಳಿ ಬರುತ್ತಿರುವ ಮಾಹಿತಿ ಒಂದೆರಡಲ್ಲ. ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ನೀಡಿದ್ದಾರೆ ಎಂಬುದನ್ನು ಪುಷ್ಟೀಕರಿಸುವ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಬ್ರೇಕ್​ ಹಾಕೋಕೆ ಅಕ್ಕಿನೇನಿ ಕುಟುಂಬ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ, ಇದೆಲ್ಲ ವ್ಯರ್ಥವಾಗುತ್ತಿದೆ. ಹೀಗಿರುವಾಗಲೇ ನಾಗ ಚೈತನ್ಯ ಕೊಟ್ಟ ಪಾರ್ಟಿ ಫೋಟೋ ವೈರಲ್​ ಆಗಿದೆ.

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ರಿಲೀಸ್​ ಆಗುವುದಕ್ಕೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಆಮಿರ್​ ಖಾನ್​ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಆಮಿರ್​ ಖಾನ್​ ಮತ್ತು ನಾಗ ಚೈತನ್ಯ ಒಟ್ಟಿಗೆ ಅಭಿನಯಿಸಿದ್ದಾರೆ. ಆ ಸ್ನೇಹದ ಮೇರೆಗೆ ಆಮಿರ್​ ಖಾನ್​ ಅವರು ‘ಲವ್​ ಸ್ಟೋರಿ’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬಂದಿದ್ದರು. ಆ ಕಾರ್ಯಕ್ರಮ ಮುಗಿದ ಬಳಿಕ ನಾಗಾರ್ಜುನ ಅವರ ಮನೆಯಲ್ಲಿ ಆಮಿರ್​ ಖಾನ್​ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಾಗಾರ್ಜುನ, ನಾಗ ಚೈತನ್ಯ, ಆಮೀರ್​ ಖಾನ್​ ಒಟ್ಟಿಗೆ ಕುಳಿತು ಭೋಜನ ಸವಿದರು. ಈ ಫೋಟೋ ಈಗ ಸಾಕಷ್ಟು ವೈರಲ್​ ಆಗುತ್ತಿದೆ. ಅಚ್ಚರಿ ಎಂದರೆ, ಈ ಫೋಟೋದಲ್ಲಿ ಸಮಂತಾ ಕಾಣುತ್ತಿಲ್ಲ.

ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

ಸದ್ಯ, ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ. ಅಕ್ಕಿನೇನಿ ಮನೆಯಲ್ಲಿ ಆಮಿರ್​ ಊಟ ಸವಿದರು ಎಂಬುದಕ್ಕಿಂತ ಈ ಫೋಟದಲ್ಲಿ ಸಮಂತಾ ಇಲ್ಲ ಎನ್ನುವುದೇ ಹೆಚ್ಚು ಹೈಲೈಟ್​ ಆಗುತ್ತಿದೆ. ಅಲ್ಲದೆ, ವಿಚ್ಛೇದನ ವದಂತಿಗೆ ಇದು ಮತ್ತಷ್ಟು ಪುಷ್ಟಿ ನೀಡಿದೆ.

ಇದನ್ನೂ ಓದಿ: ಸಮಂತಾ-ನಾಗ ಚೈತನ್ಯ ಫ್ಯಾಮಿಲಿಯ ಇನ್ನೊಂದು ಗುಟ್ಟು ಬಯಲು; ಮಗನ ಸಿನಿಮಾಗೆ ನಾಗಾರ್ಜುನ ತಲೆ ಹಾಕುತ್ತಿಲ್ಲ

ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ

Published On - 10:03 pm, Sat, 25 September 21

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ