AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೂ ಬಲವಾಯ್ತು ಸಮಂತಾ-ನಾಗ ಚೈತನ್ಯ ವಿಚ್ಛೇದನ ವಿಚಾರ; ದೊಡ್ಡ ಸಾಕ್ಷಿ ತಂದ ಫ್ಯಾನ್ಸ್​

ಕಳೆದ ಕೆಲ ದಿನಗಳಿಂದ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ.

ಮತ್ತೂ ಬಲವಾಯ್ತು ಸಮಂತಾ-ನಾಗ ಚೈತನ್ಯ ವಿಚ್ಛೇದನ ವಿಚಾರ; ದೊಡ್ಡ ಸಾಕ್ಷಿ ತಂದ ಫ್ಯಾನ್ಸ್​
ನಾಗ ಚೈತ್ರನ್ಯ - ಸಮಂತಾ
TV9 Web
| Edited By: |

Updated on: Aug 30, 2021 | 9:51 PM

Share

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ಚರ್ಚೆ ಜೋರಾಗಿದೆ. ಇತ್ತೀಚೆಗೆ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್​​ನೇಮ್​ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಹೊಸ ಫೋಟೋ ಒಂದು ವೈರಲ್​ ಆಗಿದೆ. ಇದು ಡಿವೋರ್ಸ್​ ವಿಚಾರದ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಕಳೆದ ಕೆಲ ದಿನಗಳಿಂದ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ. ಆಗಸ್ಟ್ 29ರಂದು ನಾಗ ಚೈತನ್ಯ ತಂದೆ ಅಕ್ಕಿನೇನಿ ನಾಗರ್ಜುನ​ ಜನ್ಮದಿನ. ಈ ವಿಶೇಷ ದಿನದಂದು ಸಮಂತಾ ಟ್ವೀಟ್​ ಮಾಡಿ ನಾಗರ್ಜುನ್​ಗೆ ವಿಶ್​ ಮಾಡಿದ್ದರು. ‘ಹುಟ್ಟು ಹಬ್ಬದ ಶುಭಾಶಯಗಳು ಮಾಮ’ ಎಂದಿದ್ದರು ಸಮಂತಾ. ಈ ಮೂಲಕ ಗಾಸಿಪ್​ ಮಂದಿಯ ಬಾಯಿ ಮುಚ್ಚಿಸಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ಮತ್ತೆ ಚಿತ್ರಣ ಬದಲಾಗಿತ್ತು.

ನಾಗಾರ್ಜುನ ಇಡೀ ಕುಟುಂಬದ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ಮೀಡಿಯಾದಲ್ಲಿ ವೈರಲ್​ ಆಗಿದೆ. ಆದರೆ, ಇಲ್ಲಿ ಸಮಂತಾ ಕಾಣಿಸುತ್ತಿಲ್ಲ. ಇದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಮಂತಾ ಈ ಪಾರ್ಟಿಯಲ್ಲಿ ಕಾಣಿಸಿಕೊಳ್ಳದೆ ಇರಲು ಇವರು ಬೇರೆ ಆಗಿದ್ದೇ ಕಾರಣ ಎಂದು ಕೆಲ ಫ್ಯಾನ್ಸ್​ ವಾದ ಮಂಡಿಸಿದ್ದಾರೆ.

ತಮಿಳಿನ ವಿಘ್ನೇಶ್​ ಶಿವನ್​ ನಿರ್ದೇಶನದ ‘ಕಾದು ವಾಕುಲಾ ರೆಂಡು ಕಾದು’ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ ಹಾಗೂ ಸಮಂತಾ ನಟಿಸುತ್ತಿದ್ದಾರೆ. ಈ ಮೂವರನ್ನು ಇದೇ ಮೊದಲ ಬಾರಿಗೆ ಒಂದೇ ಫ್ರೇಮ್​ನಲ್ಲಿ ತರಲಾಗಿದೆ. ಈ ಚಿತ್ರದ ಶೂಟಿಂಗ್​ನಲ್ಲಿ ಸಮಂತಾ ಬ್ಯುಸಿ ಆಗಿದ್ದಾರೆ. ಈ ಕಾರಣಕ್ಕೆ ಅವರು ಪಾರ್ಟಿಗೆ ಹಾಜರಿ ಹಾಕಿಲ್ಲ ಎಂದೂ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಎಲ್ಲರೂ ತಮಗೆ ಬೇಕಾದಂತೆ ಇದನ್ನು ಅರ್ಥೈಸುತ್ತಿದ್ದಾರೆ.

‘ನಾನು ಮುಂದಿನ ಕೆಲ ತಿಂಗಳು ಸಿನಿಮಾ ಕೆಲಸದಿಂದ ಬ್ರೇಕ್​ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಸಮಂತಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಇದು ಕೂಡ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿತ್ತು. ಅನೇಕ ವರ್ಷಗಳ ಕಾಲ ಸಮಂತಾ-ನಾಗಚೈತನ್ಯ ಪ್ರೀತಿಸುತ್ತಿದ್ದರು. ನಂತರ ಇಬ್ಬರೂ ಮದುವೆ ಆದರು.

ಇದನ್ನೂ ಓದಿ: ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು