AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿ ಮೂಡಿಸಿದ ಸಮಂತಾ ನಡೆ; ವಿಚ್ಛೇದನವಾಗಿದ್ದು ಖಚಿತ ಎಂದ ಫ್ಯಾನ್ಸ್​

ಸಮಂತಾ ಇನ್​ಸ್ಟಾಗ್ರಾಮ್​ನಲ್ಲಿ ನಾನಾ ರೀತಿಯ ಸ್ಟೇಟಸ್​ಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಆದರೆ, ಅವರು ಎಲ್ಲಿಯೂ ‘ಲವ್​ ಸ್ಟೋರಿ’ ಬಗ್ಗೆ ಉಲ್ಲೇಖ ಮಾಡಿ ಪೋಸ್ಟ್ ಮಾಡಿಲ್ಲ.

TV9 Web
| Edited By: |

Updated on:Sep 13, 2021 | 4:08 PM

Share

ನಟಿ ಸಮಂತಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ ಆ ಬಗ್ಗೆ ಅವರು ಮೌನ ವಹಿಸಿದ್ದಾರೆ. ನಾಗ ಚೈತನ್ಯ ಜತೆ ಸಮಂತಾ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ವದಂತಿ ಅಭಿಮಾನಿಗಳಿಗೆ ಶಾಕ್​ ನೀಡಿದೆ. ಎಲ್ಲಿಯೂ ಈ ಬಗ್ಗೆ ಉತ್ತರ ನೀಡುವ ಗೋಜಿಗೆ ಸಮಂತಾ ಹೋಗಿಲ್ಲ. ಇದು ವದಂತಿ ಎಂದು ಕೆಲವರು ವಾದಿಸುತ್ತಾ ಬರುತ್ತಿದ್ದರೂ ಇದು ಪದೇಪದೇ ಸುಳ್ಳಾಗುತ್ತಿದೆ. ಸಮಂತಾ-ನಾಗ ಚೈತನ್ಯ ವಿಚ್ಛೇದನ ಪಡೆಯಲಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಒದಗಿಸುವ ಸಾಕಷ್ಟು ವಿಷಯಗಳು ಸಿಗುತ್ತಿವೆ. ಇದಕ್ಕೆ ಈಗ ಹೊಸದೊಂದು ಸೇರ್ಪಡೆ ಆಗಿದೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಟ್ರೇಲರ್​ ಇಂದು (ಸೆಪ್ಟೆಂಬರ್​ 13) ರಿಲೀಸ್​ ಆಗಿದೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಟ್ರೇಲರ್ ಪೋಸ್ಟ್​ ಮಾಡಿ, ಅದನ್ನು ವೀಕ್ಷಿಸುವಂತೆ ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ. ಸಮಂತಾ ಕೂಡ ಈ ಬಗ್ಗೆ ಪೋಸ್ಟ್ ಮಾಡುತ್ತಾರೆ, ಈ ಮೂಲಕ ಎಲ್ಲಾ ವದಂತಿಗೆ ತೆರೆ ಎಳೆಯುತ್ತಾರೆ ಎಂದು ಅಭಿಮಾನಿಗಳು ಕಾದು ಕೂತಿದ್ದರು. ಆದರೆ, ಈ ನಿರೀಕ್ಷೆ ಸುಳ್ಳಾಗಿದೆ.

ಸಮಂತಾ ಇನ್​ಸ್ಟಾಗ್ರಾಮ್​ನಲ್ಲಿ ನಾನಾ ರೀತಿಯ ಸ್ಟೇಟಸ್​ಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಆದರೆ, ಅವರು ಎಲ್ಲಿಯೂ ‘ಲವ್​ ಸ್ಟೋರಿ’ ಬಗ್ಗೆ ಉಲ್ಲೇಖ ಮಾಡಿ ಪೋಸ್ಟ್ ಮಾಡಿಲ್ಲ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ. ಅಲ್ಲದೆ, ಇದು ವಿಚ್ಛೇದನ ವದಂತಿಗೆ ಸಾಕ್ಷ್ಯ ಒದಗಿಸಿದಂತಾಗಿದೆ. ಈ ವಿಚಾರವನ್ನು ಅವರ ಅಭಿಮಾನಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ. ‘ಗಂಡ ಎಂದ ಮಾತ್ರಕ್ಕೆ ಈ ಬಗ್ಗೆ ಪೋಸ್ಟ್​ ಮಾಡಲೇಬೇಕೆಂದೇನೂ ಇಲ್ಲ ಎಂದು ಸಮಂತಾ ಪರ ಕೆಲವರು ವಕಾಲತ್ತು ವಹಿಸಿಕೊಂಡು’ ಬಂದಿದ್ದಾರೆ. ಇನ್ನೂ ಕೆಲವರು, ‘ಸಮಂತಾ-ನಾಗಚೈತನ್ಯ ವಿಚ್ಛೇದನ ಖಚಿತ’ ಎನ್ನುತ್ತಿದ್ದಾರೆ. ಸದ್ಯ, ಈ ವಿಚಾರಕ್ಕೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಇತ್ತೀಚೆಗೆ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್​​ನೇಮ್​ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ನಾಗಾರ್ಜುನ ಇಡೀ ಕುಟುಂಬದ ಜತೆ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ಮೀಡಿಯಾದಲ್ಲಿ ವೈರಲ್​ ಆಗಿತ್ತು. ಆದರೆ, ಇಲ್ಲಿ ಸಮಂತಾ ಕಾಣಿಸಿರಲಿಲ್ಲ. ಈ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

ಇದನ್ನೂ ಓದಿ: ಸಮಂತಾ ಡಿವೋರ್ಸ್​ ವದಂತಿ ಬೆನ್ನಲ್ಲೇ ನಾಗ ಚೈತನ್ಯ-ಸಾಯಿ ಪಲ್ಲವಿ ಲವ್​ ಸ್ಟೋರಿ ಮೇಲೆ ಕಣ್ಣಿಟ್ಟ ಸಿನಿಪ್ರಿಯರು

Published On - 3:57 pm, Mon, 13 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!