AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ವದಂತಿ ಬೆನ್ನಲ್ಲೇ ನಟಿ ಸಮಂತಾ ತೆಗೆದುಕೊಂಡ್ರು ಎರಡು ಮಹತ್ವದ ನಿರ್ಧಾರ

ಸಮಂತಾ ಅಕ್ಕಿನೇನಿ ಇತ್ತೀಚೆಗೆ ಮಾಧ್ಯಮದ ಜತೆ ಮಾತನಾಡುತ್ತಾ, ಚಿತ್ರರಂಗದಿಂದ ಬ್ರೇಕ್​ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಇದು ನಿಜಕ್ಕೂ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು.

ವಿಚ್ಛೇದನದ ವದಂತಿ ಬೆನ್ನಲ್ಲೇ ನಟಿ ಸಮಂತಾ ತೆಗೆದುಕೊಂಡ್ರು ಎರಡು ಮಹತ್ವದ ನಿರ್ಧಾರ
ನಟಿ ಸಮಂತಾ- ನಾಗ ಚೈತನ್ಯ
TV9 Web
| Edited By: |

Updated on:Sep 10, 2021 | 5:59 PM

Share

ನಾಗ ಚೈತನ್ಯ ಜತೆ ನಟಿ ಸಮಂತಾ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದಾರೆ, ಅವರ ಸಂಬಂಧ ಶೀಘ್ರವೇ ಮುರಿದು ಬೀಳಲಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಲೇ ಇವೆ. ಆದರೆ, ಇದಕ್ಕೆ ಅವರ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಸಮಂತಾ ಅವರಂತೂ ಆ ಬಗ್ಗೆ ಉತ್ತರಿಸುವ ಗೋಜಿಗೆ ಹೋಗಿಲ್ಲ. ಇನ್ನು, ಅಕ್ಕಿನೇನಿ ಕುಟುಂಬ ಮಾಧ್ಯಮದ ಎದುರು ಬರುತ್ತಿಲ್ಲ. ಈ ವದಂತಿಗಳ ಮಧ್ಯೆಯೇ ಸಮಂತಾ ಎರಡು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದು ಫ್ಯಾನ್ಸ್​ ಖುಷಿಯಾಗಿದ್ದಾರೆ.

ಸಮಂತಾ ಅಕ್ಕಿನೇನಿ ಇತ್ತೀಚೆಗೆ ಮಾಧ್ಯಮದ ಜತೆ ಮಾತನಾಡುತ್ತಾ, ಚಿತ್ರರಂಗದಿಂದ ಬ್ರೇಕ್​ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಇದು ನಿಜಕ್ಕೂ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಆದರೆ, ಈಗ ಅವರು ಈ ಆಲೋಚನೆ ಕೈಬಿಟ್ಟಿದ್ದಾರೆ. ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಬ್ಯುಸಿ ಇರುವ ಸಮಂತಾ, ಈಗ ಬಾಲಿವುಡ್​ನಿಂದ ಬರುತ್ತಿರುವ ಪ್ರಾಜೆಕ್ಟ್​ಗೂ ಒಕೆ ಎಂದಿದ್ದಾರೆ ಎನ್ನಲಾಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ಸಮಂತಾ ನಟಿಸಿದ್ದರು. ಅವರ ಅದ್ಭುತ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅಲ್ಲದೆ, ಹಿಂದಿ ಮಂದಿ ಸಮಂತಾ ನಟನೆಯನ್ನು ಇಷ್ಟಪಟ್ಟಿದ್ದರು. ಇದರ ಲಾಭ ಪಡೆಯೋಕೆ ಬಾಲಿವುಡ್​ನ ಕೆಲ ನಿರ್ಮಾಪಕರು ಪ್ಲ್ಯಾನ್​ ಹಾಕಿಕೊಂಡಿದ್ದಾರೆ. ಹೀಗಾಗಿ, ಸಮಂತಾಗೆ ಬಾಲಿವುಡ್​ ಕಡೆಯಿಂದ ಸಾಕಷ್ಟು ಆಫರ್​ಗಳು ಬರೋಕೆ ಆರಂಭವಾಗಿದೆ.

ರಾಜ್​ ಮತ್ತು ಡಿಕೆ ನಿರ್ದೇಶನ ಮಾಡುತ್ತಿರುವ ವೆಬ್​ ಸೀರಿಸ್​ ಒಂದರಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸೋಕೆ ಸಮಂತಾಗೆ ಆಫರ್​ ನೀಡಲಾಗಿದೆ. ಇದನ್ನು ದೊಡ್ಡ ಒಟಿಟಿ ಪ್ಲಾಟ್​ಫಾರ್ಮ್​ ನಿರ್ಮಾಣ ಮಾಡಲಿದೆಯಂತೆ. ಈ ಕಾರಣಕ್ಕೆ ಸಮಂತಾಗೆ ದೊಡ್ಡ ಸಂಭಾವನೆ ಕೂಡ ಸಿಗುವ ಸಾಧ್ಯತೆ ಇದೆ. ಇದರ ಜತೆಗೆ ಇನ್ನೂ ಒಂದೆರಡು ಪ್ರಾಜೆಕ್ಟ್​ಗಳ ಜತೆ ಮಾತುಕತೆ ನಡೆದಿದೆ.

ಎರಡು ಮೂರು ಹಿಂದಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡರೆ ಬಹಳ ಸಮಯ ಮುಂಬೈನಲ್ಲೇ ಉಳಿಯಬೇಕಾಗುತ್ತದೆ. ಈ ಕಾರಣಕ್ಕೆ ಸಮಂತಾ ಮುಂಬೈನಲ್ಲಿ ಮನೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇತ್ತೀಚೆಗೆ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್​​ನೇಮ್​ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ನಾಗಾರ್ಜುನ ಇಡೀ ಕುಟುಂಬದ ಜತೆ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ಮೀಡಿಯಾದಲ್ಲಿ ವೈರಲ್​ ಆಗಿತ್ತು. ಆದರೆ, ಇಲ್ಲಿ ಸಮಂತಾ ಕಾಣಿಸಿರಲಿಲ್ಲ. ಈ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

ಇದನ್ನೂ ಓದಿ: ಡಿವೋರ್ಸ್ ವದಂತಿ ಮಧ್ಯೆಯೇ ಹಾಟ್ ಫೋಟೋಶೂಟ್​ನಲ್ಲಿ ಮಿಂಚಿದ ಸಮಂತಾ

Published On - 5:58 pm, Fri, 10 September 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!