AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ವದಂತಿ ಬೆನ್ನಲ್ಲೇ ನಟಿ ಸಮಂತಾ ತೆಗೆದುಕೊಂಡ್ರು ಎರಡು ಮಹತ್ವದ ನಿರ್ಧಾರ

ಸಮಂತಾ ಅಕ್ಕಿನೇನಿ ಇತ್ತೀಚೆಗೆ ಮಾಧ್ಯಮದ ಜತೆ ಮಾತನಾಡುತ್ತಾ, ಚಿತ್ರರಂಗದಿಂದ ಬ್ರೇಕ್​ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಇದು ನಿಜಕ್ಕೂ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು.

ವಿಚ್ಛೇದನದ ವದಂತಿ ಬೆನ್ನಲ್ಲೇ ನಟಿ ಸಮಂತಾ ತೆಗೆದುಕೊಂಡ್ರು ಎರಡು ಮಹತ್ವದ ನಿರ್ಧಾರ
ನಟಿ ಸಮಂತಾ- ನಾಗ ಚೈತನ್ಯ
TV9 Web
| Edited By: |

Updated on:Sep 10, 2021 | 5:59 PM

Share

ನಾಗ ಚೈತನ್ಯ ಜತೆ ನಟಿ ಸಮಂತಾ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದಾರೆ, ಅವರ ಸಂಬಂಧ ಶೀಘ್ರವೇ ಮುರಿದು ಬೀಳಲಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಲೇ ಇವೆ. ಆದರೆ, ಇದಕ್ಕೆ ಅವರ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಸಮಂತಾ ಅವರಂತೂ ಆ ಬಗ್ಗೆ ಉತ್ತರಿಸುವ ಗೋಜಿಗೆ ಹೋಗಿಲ್ಲ. ಇನ್ನು, ಅಕ್ಕಿನೇನಿ ಕುಟುಂಬ ಮಾಧ್ಯಮದ ಎದುರು ಬರುತ್ತಿಲ್ಲ. ಈ ವದಂತಿಗಳ ಮಧ್ಯೆಯೇ ಸಮಂತಾ ಎರಡು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದು ಫ್ಯಾನ್ಸ್​ ಖುಷಿಯಾಗಿದ್ದಾರೆ.

ಸಮಂತಾ ಅಕ್ಕಿನೇನಿ ಇತ್ತೀಚೆಗೆ ಮಾಧ್ಯಮದ ಜತೆ ಮಾತನಾಡುತ್ತಾ, ಚಿತ್ರರಂಗದಿಂದ ಬ್ರೇಕ್​ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಇದು ನಿಜಕ್ಕೂ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಆದರೆ, ಈಗ ಅವರು ಈ ಆಲೋಚನೆ ಕೈಬಿಟ್ಟಿದ್ದಾರೆ. ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಬ್ಯುಸಿ ಇರುವ ಸಮಂತಾ, ಈಗ ಬಾಲಿವುಡ್​ನಿಂದ ಬರುತ್ತಿರುವ ಪ್ರಾಜೆಕ್ಟ್​ಗೂ ಒಕೆ ಎಂದಿದ್ದಾರೆ ಎನ್ನಲಾಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ಸಮಂತಾ ನಟಿಸಿದ್ದರು. ಅವರ ಅದ್ಭುತ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅಲ್ಲದೆ, ಹಿಂದಿ ಮಂದಿ ಸಮಂತಾ ನಟನೆಯನ್ನು ಇಷ್ಟಪಟ್ಟಿದ್ದರು. ಇದರ ಲಾಭ ಪಡೆಯೋಕೆ ಬಾಲಿವುಡ್​ನ ಕೆಲ ನಿರ್ಮಾಪಕರು ಪ್ಲ್ಯಾನ್​ ಹಾಕಿಕೊಂಡಿದ್ದಾರೆ. ಹೀಗಾಗಿ, ಸಮಂತಾಗೆ ಬಾಲಿವುಡ್​ ಕಡೆಯಿಂದ ಸಾಕಷ್ಟು ಆಫರ್​ಗಳು ಬರೋಕೆ ಆರಂಭವಾಗಿದೆ.

ರಾಜ್​ ಮತ್ತು ಡಿಕೆ ನಿರ್ದೇಶನ ಮಾಡುತ್ತಿರುವ ವೆಬ್​ ಸೀರಿಸ್​ ಒಂದರಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸೋಕೆ ಸಮಂತಾಗೆ ಆಫರ್​ ನೀಡಲಾಗಿದೆ. ಇದನ್ನು ದೊಡ್ಡ ಒಟಿಟಿ ಪ್ಲಾಟ್​ಫಾರ್ಮ್​ ನಿರ್ಮಾಣ ಮಾಡಲಿದೆಯಂತೆ. ಈ ಕಾರಣಕ್ಕೆ ಸಮಂತಾಗೆ ದೊಡ್ಡ ಸಂಭಾವನೆ ಕೂಡ ಸಿಗುವ ಸಾಧ್ಯತೆ ಇದೆ. ಇದರ ಜತೆಗೆ ಇನ್ನೂ ಒಂದೆರಡು ಪ್ರಾಜೆಕ್ಟ್​ಗಳ ಜತೆ ಮಾತುಕತೆ ನಡೆದಿದೆ.

ಎರಡು ಮೂರು ಹಿಂದಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡರೆ ಬಹಳ ಸಮಯ ಮುಂಬೈನಲ್ಲೇ ಉಳಿಯಬೇಕಾಗುತ್ತದೆ. ಈ ಕಾರಣಕ್ಕೆ ಸಮಂತಾ ಮುಂಬೈನಲ್ಲಿ ಮನೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇತ್ತೀಚೆಗೆ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್​​ನೇಮ್​ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ನಾಗಾರ್ಜುನ ಇಡೀ ಕುಟುಂಬದ ಜತೆ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ಮೀಡಿಯಾದಲ್ಲಿ ವೈರಲ್​ ಆಗಿತ್ತು. ಆದರೆ, ಇಲ್ಲಿ ಸಮಂತಾ ಕಾಣಿಸಿರಲಿಲ್ಲ. ಈ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

ಇದನ್ನೂ ಓದಿ: ಡಿವೋರ್ಸ್ ವದಂತಿ ಮಧ್ಯೆಯೇ ಹಾಟ್ ಫೋಟೋಶೂಟ್​ನಲ್ಲಿ ಮಿಂಚಿದ ಸಮಂತಾ

Published On - 5:58 pm, Fri, 10 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?