AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್​ ವದಂತಿ ಸುಳ್ಳು ಮಾಡಲು ಮುಂದಾದ ಸಮಂತಾ; ಅಭಿಮಾನಿಗಳಿಗೆ ಬೇಸರ ತರಿಸಲಿದ ಈ ನಿರ್ಧಾರ

ಮದುವೆ ಆದ ನಂತರದಲ್ಲಿ ಆಫರ್​ಗಳ ಸಂಖ್ಯೆ ಕಡಿಮೆ ಆಗುತ್ತದೆ. ಆದರೆ, ಸಮಂತಾಗೆ ಮದುವೆ ನಂತರವೂ ಆಫರ್​ ಕಡಿಮೆ ಆಗಿಲ್ಲ. ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ.

ಡಿವೋರ್ಸ್​ ವದಂತಿ ಸುಳ್ಳು ಮಾಡಲು ಮುಂದಾದ ಸಮಂತಾ; ಅಭಿಮಾನಿಗಳಿಗೆ ಬೇಸರ ತರಿಸಲಿದ ಈ ನಿರ್ಧಾರ
ಸಮಂತಾ ಅಕ್ಕಿನೇನಿ
TV9 Web
| Updated By: ಮದನ್​ ಕುಮಾರ್​|

Updated on: Sep 17, 2021 | 7:26 AM

Share

ನಟಿ ಸಮಂತಾ ಅಕ್ಕಿನೇನಿ ವಿಚ್ಛೇದನ ವದಂತಿ ಇತ್ತೀಚಿಗೆ ಹಾಟ್​ ಟಾಪಿಕ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇದೆ. ಸಮಂತಾ ಕಡೆಯಿಂದ ಈ ಬಗ್ಗೆ ನೇರವಾಗಿ ಸ್ಪಷ್ಟನೆ ಸಿಗದೆ ಇದ್ದರೂ ಅಭಿಮಾನಿಗಳು ಪಾಸಿಟಿವ್​ ವಿಚಾರಗಳನ್ನು ಹಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಸಮಂತಾ ವಿಚ್ಛೇದನ ವದಂತಿಗೆ ಸಂಪೂರ್ಣವಾಗಿ ಬ್ರೇಕ್​ ಹಾಕಲು ಮುಂದಾಗಿದ್ದಾರೆ. ಆದರೆ, ಈ ವಿಚಾರದಿಂದ ಅಭಿಮಾನಿಗಳಿಗೆ ಕೊಂಚ ಬೇಸರ ಉಂಟಾದರೂ ಅಚ್ಚರಿ ಇಲ್ಲ.

ಮದುವೆ ಆದ ನಂತರದಲ್ಲಿ ಆಫರ್​ಗಳ ಸಂಖ್ಯೆ ಕಡಿಮೆ ಆಗುತ್ತದೆ. ಆದರೆ, ಸಮಂತಾಗೆ ವಿವಾಹದ ನಂತರವೂ ಆಫರ್​ ಕಡಿಮೆ ಆಗಿಲ್ಲ. ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಆಯ್ದ ಸಿನಿಮಾಗಳಿಗೆ ಮಾತ್ರ ಅವರು ಹಸಿರು ನಿಶಾನೆ ತೋರುತ್ತಿದ್ದಾರೆ. ಆದರೆ, ಈಗ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಮಂತಾ ಕೈಯಲ್ಲಿ ಇರುವ ಚಿತ್ರಗಳ ಶೂಟಿಂಗ್​ ಬಹುತೇಕ ಪೂರ್ಣಗೊಂಡಿದೆ. ಸದ್ಯ, ಅವರು ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬೇಕು ಎನ್ನುವ ನಿರ್ಧಾರಕ್ಕೆ ಬಂದಿರುವ ಅವರು ನಟನೆಯಿಂದ ಒಂದು ಬ್ರೇಕ್​ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇನ್ನು, ಸಮಂತಾ ಮಗು ಪಡೆಯೋಕೂ ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಮಂತಾ ಮದುವೆ ಆಗಿ ನಾಲ್ಕು ವರ್ಷ ಕಳೆದಿದೆ. ತಾಯಿ ಆಗೋದು ಯಾವಾಗ ಎಂದು ಅವರಿಗೆ ಸಾಕಷ್ಟು ಬಾರಿ ಪ್ರಶ್ನೆಗಳು ಎದುರಾಗಿದ್ದವು. ಈಗ ಸಮಂತಾ ಮಗು ಹೊಂದೋಕೆ ನಿರ್ಧರಿಸಿದ್ದಾರೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಅವರ ಅಭಿಮಾನಿಗಳು ಖುಷಿಪಡಬಹುದು.

ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಅಕ್ಕಿನೇನಿ ಸರ್​ನೇಮ್​ಅನ್ನು ಸಮಂತಾ ತೆಗೆದು ಹಾಕಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಅವರ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ವದಂತಿ ಜೋರಾಗಿತ್ತು. ಇದಾದ ನಂತರದಲ್ಲಿ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿವೆ. ಆ ಬಗ್ಗೆ ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎನ್ನುವ ಬಗ್ಗೆ ಅಭಿಮಾನಿಗಳು ಇನ್ನೂ ಗೊಂದಲದಲ್ಲಿದ್ದಾರೆ.

ಇದನ್ನೂ ಓದಿ:

ಸಮಂತಾ ಬಗ್ಗೆ ಏನೂ ಪ್ರಶ್ನಿಸಬೇಡಿ; ಮಾಧ್ಯಮಗಳಿಗೆ ನಾಗ ಚೈತನ್ಯ ಖಡಕ್​ ಎಚ್ಚರಿಕೆ?

ಸಮಂತಾ-ನಾಗ ಚೈತನ್ಯ ನಡುವೆ ಎಷ್ಟೊಂದು ಅಗಾಧ ಪ್ರೀತಿ ಇದೆ ಗೊತ್ತಾ? ಇಲ್ಲಿದೆ ಸಾಕ್ಷ್ಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು