AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್​ ವದಂತಿ ಸುಳ್ಳು ಮಾಡಲು ಮುಂದಾದ ಸಮಂತಾ; ಅಭಿಮಾನಿಗಳಿಗೆ ಬೇಸರ ತರಿಸಲಿದ ಈ ನಿರ್ಧಾರ

ಮದುವೆ ಆದ ನಂತರದಲ್ಲಿ ಆಫರ್​ಗಳ ಸಂಖ್ಯೆ ಕಡಿಮೆ ಆಗುತ್ತದೆ. ಆದರೆ, ಸಮಂತಾಗೆ ಮದುವೆ ನಂತರವೂ ಆಫರ್​ ಕಡಿಮೆ ಆಗಿಲ್ಲ. ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ.

ಡಿವೋರ್ಸ್​ ವದಂತಿ ಸುಳ್ಳು ಮಾಡಲು ಮುಂದಾದ ಸಮಂತಾ; ಅಭಿಮಾನಿಗಳಿಗೆ ಬೇಸರ ತರಿಸಲಿದ ಈ ನಿರ್ಧಾರ
ಸಮಂತಾ ಅಕ್ಕಿನೇನಿ
TV9 Web
| Edited By: |

Updated on: Sep 17, 2021 | 7:26 AM

Share

ನಟಿ ಸಮಂತಾ ಅಕ್ಕಿನೇನಿ ವಿಚ್ಛೇದನ ವದಂತಿ ಇತ್ತೀಚಿಗೆ ಹಾಟ್​ ಟಾಪಿಕ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇದೆ. ಸಮಂತಾ ಕಡೆಯಿಂದ ಈ ಬಗ್ಗೆ ನೇರವಾಗಿ ಸ್ಪಷ್ಟನೆ ಸಿಗದೆ ಇದ್ದರೂ ಅಭಿಮಾನಿಗಳು ಪಾಸಿಟಿವ್​ ವಿಚಾರಗಳನ್ನು ಹಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಸಮಂತಾ ವಿಚ್ಛೇದನ ವದಂತಿಗೆ ಸಂಪೂರ್ಣವಾಗಿ ಬ್ರೇಕ್​ ಹಾಕಲು ಮುಂದಾಗಿದ್ದಾರೆ. ಆದರೆ, ಈ ವಿಚಾರದಿಂದ ಅಭಿಮಾನಿಗಳಿಗೆ ಕೊಂಚ ಬೇಸರ ಉಂಟಾದರೂ ಅಚ್ಚರಿ ಇಲ್ಲ.

ಮದುವೆ ಆದ ನಂತರದಲ್ಲಿ ಆಫರ್​ಗಳ ಸಂಖ್ಯೆ ಕಡಿಮೆ ಆಗುತ್ತದೆ. ಆದರೆ, ಸಮಂತಾಗೆ ವಿವಾಹದ ನಂತರವೂ ಆಫರ್​ ಕಡಿಮೆ ಆಗಿಲ್ಲ. ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಆಯ್ದ ಸಿನಿಮಾಗಳಿಗೆ ಮಾತ್ರ ಅವರು ಹಸಿರು ನಿಶಾನೆ ತೋರುತ್ತಿದ್ದಾರೆ. ಆದರೆ, ಈಗ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಮಂತಾ ಕೈಯಲ್ಲಿ ಇರುವ ಚಿತ್ರಗಳ ಶೂಟಿಂಗ್​ ಬಹುತೇಕ ಪೂರ್ಣಗೊಂಡಿದೆ. ಸದ್ಯ, ಅವರು ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬೇಕು ಎನ್ನುವ ನಿರ್ಧಾರಕ್ಕೆ ಬಂದಿರುವ ಅವರು ನಟನೆಯಿಂದ ಒಂದು ಬ್ರೇಕ್​ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇನ್ನು, ಸಮಂತಾ ಮಗು ಪಡೆಯೋಕೂ ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಮಂತಾ ಮದುವೆ ಆಗಿ ನಾಲ್ಕು ವರ್ಷ ಕಳೆದಿದೆ. ತಾಯಿ ಆಗೋದು ಯಾವಾಗ ಎಂದು ಅವರಿಗೆ ಸಾಕಷ್ಟು ಬಾರಿ ಪ್ರಶ್ನೆಗಳು ಎದುರಾಗಿದ್ದವು. ಈಗ ಸಮಂತಾ ಮಗು ಹೊಂದೋಕೆ ನಿರ್ಧರಿಸಿದ್ದಾರೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಅವರ ಅಭಿಮಾನಿಗಳು ಖುಷಿಪಡಬಹುದು.

ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಅಕ್ಕಿನೇನಿ ಸರ್​ನೇಮ್​ಅನ್ನು ಸಮಂತಾ ತೆಗೆದು ಹಾಕಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಅವರ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ವದಂತಿ ಜೋರಾಗಿತ್ತು. ಇದಾದ ನಂತರದಲ್ಲಿ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿವೆ. ಆ ಬಗ್ಗೆ ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎನ್ನುವ ಬಗ್ಗೆ ಅಭಿಮಾನಿಗಳು ಇನ್ನೂ ಗೊಂದಲದಲ್ಲಿದ್ದಾರೆ.

ಇದನ್ನೂ ಓದಿ:

ಸಮಂತಾ ಬಗ್ಗೆ ಏನೂ ಪ್ರಶ್ನಿಸಬೇಡಿ; ಮಾಧ್ಯಮಗಳಿಗೆ ನಾಗ ಚೈತನ್ಯ ಖಡಕ್​ ಎಚ್ಚರಿಕೆ?

ಸಮಂತಾ-ನಾಗ ಚೈತನ್ಯ ನಡುವೆ ಎಷ್ಟೊಂದು ಅಗಾಧ ಪ್ರೀತಿ ಇದೆ ಗೊತ್ತಾ? ಇಲ್ಲಿದೆ ಸಾಕ್ಷ್ಯ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ