AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಸಮಂತಾ ಅಕ್ಕಿನೇನಿ ತೆರಳಿದ್ದೇಕೆ? ಇದರ ಹಿಂದಿದೆ ಅಚ್ಚರಿಯ ಕಾರಣ

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಇದನ್ನು ಅನೇಕ ಮಾಧ್ಯಮಗಳು ವೈಭವೀಕರಿಸಿವೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತಿಲ್ಲ.

ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಸಮಂತಾ ಅಕ್ಕಿನೇನಿ ತೆರಳಿದ್ದೇಕೆ? ಇದರ ಹಿಂದಿದೆ ಅಚ್ಚರಿಯ ಕಾರಣ
ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಸಮಂತಾ ಅಕ್ಕಿನೇನಿ ತೆರಳಿದ್ದೇಕೆ? ಇದರ ಹಿಂದಿದೆ ಅಚ್ಚರಿಯ ಕಾರಣ
TV9 Web
| Edited By: |

Updated on: Sep 19, 2021 | 1:49 PM

Share

ಸಮಂತಾ ಅಕ್ಕಿನೇನಿ ಶನಿವಾರ (ಸೆಪ್ಟೆಂಬರ್​ 18) ಮುಂಜಾನೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದರು. ತಿರುಪತಿಯ ತಿಮ್ಮಪ್ಪನ ಸನ್ನಿಧಿಯಲ್ಲಿ ಕೆಲ ಕಾಲ ಸಮಯ ಕಳೆದು ಬಂದಿದ್ದರು. ದೇವರ ದರ್ಶನ ಪಡೆದ ನಂತರ ಅವರನ್ನು ನೋಡೋಕೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿತ್ತು. ಸಮಂತಾ ತಿರುಪತಿಗೆ ತೆರಳಿದ್ದೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಕಾಡಿತ್ತು. ಇದಕ್ಕೆ ಅಭಿಮಾನಿಗಳು ಉತ್ತರ ಹುಡುಕಿ ತಂದಿದ್ದಾರೆ.

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಇದನ್ನು ಅನೇಕ ಮಾಧ್ಯಮಗಳು ವೈಭವೀಕರಿಸಿವೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತಿಲ್ಲ. ಹೀಗಾಗಿ, ಸಮಂತಾ ಬಗ್ಗೆ ಪಾಸಿಟಿವ್​ ಆಗಿ ಇರುವಂತೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಪೋಸ್ಟ್ ಮಾಡುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ, ಸಮಂತಾ ತಿರುಪತಿಗೆ ತೆರಳಿದ್ದು ನಾಗ ಚೈತನ್ಯ ಅವರಿಗೋಸ್ಕರ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಸೆಪ್ಟೆಂಬರ್ 24ರಂದು ತೆರೆಗೆ ಬರುತ್ತಿದೆ. ಕೊವಿಡ್​ ಕಾರಣಕ್ಕೆ ಅನೇಕ ಕಡೆಗಳಲ್ಲಿ ಇನ್ನೂ ಚಿತ್ರಮಂದಿರ ಪೂರ್ತಿಯಾಗಿ ಓಪನ್​ ಆಗಿಲ್ಲ. ಆದಾಗ್ಯೂ ಸಿನಿಮಾ ರಿಲೀಸ್​ ಮಾಡುವ ಸಾಹಸಕ್ಕೆ ‘ಲವ್​ ಸ್ಟೋರಿ’ ನಿರ್ಮಾಪಕರು ಮುಂದಾಗಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್​​’ನಂಥ ದೊಡ್ಡ ಸಿನಿಮಾಗಳು ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಹೀನಾಯವಾಗಿ ಸೋಲು ಕಂಡಿವೆ. ಇದರ ನಡುವೆಯೂ ‘ಲವ್​ ಸ್ಟೋರಿ’ ಸಿನಿಮಾ ಅಗ್ನಿ ಪರೀಕ್ಷೆ ಎದುರಿಸಲು ಮುಂದಾಗಿದೆ. ಪತಿಯ ಸಿನಿಮಾ ಗೆಲುವು ಕಾಣಲಿ ಎಂದು ಸಮಂತಾ ಅವರು ತಿರುಪತಿಗೆ ತೆರಳಿದ್ದರು ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ.

‘ಈ ಹಿಂದೆ ಕೂಡ ನಾಗ ಚೈತನ್ಯ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲು ಸಮಂತಾ ತಿರುಪತಿಗೆ ತೆರಳಿದ್ದರು. ಈಗಲೂ ಕೂಡ ಅವರು ಅದನ್ನೇ ಮುಂದುವರಿಸಿದ್ದಾರೆ. ಇಷ್ಟಾದಮೇಲೂ ನಾಗ ಚೈತನ್ಯ-ಸಮಂತಾ ಕುಟುಂಬದ ಬಗ್ಗೆ ಅನುಮಾನ ಪಡೋಕೆ ಏನೂ ಉಳಿದಿಲ್ಲ. ಈ ಬಗ್ಗೆ ಯಾವುದೇ ವದಂತಿ ನಂಬಬೇಡಿ’ ಎಂದು ಸಮಂತಾ ಅಭಿಮಾನಿಗಳು ಹೇಳಿಕೊಳ್ಳುತ್ತಿದ್ದಾರೆ.

ತಿರುಪತಿ ದೇವಸ್ಥಾನಕ್ಕೆ ಸಮಂತಾ ತೆರಳಿದ್ದಾಗ ಅವರ ಸಂಸಾರದ ಬಗ್ಗೆ ಮಾಧ್ಯಮದವರಿಂದ ಪ್ರಶ್ನೆ ಬಂದಿತ್ತು. ಇದಕ್ಕೆ ಸಿಟ್ಟಾಗಿದ್ದ ಅವರು, ಬೈದಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಸಮಂತಾ-ನಾಗ ಚೈತನ್ಯ ಫ್ಯಾಮಿಲಿಯ ಇನ್ನೊಂದು ಗುಟ್ಟು ಬಯಲು; ಮಗನ ಸಿನಿಮಾಗೆ ನಾಗಾರ್ಜುನ ತಲೆ ಹಾಕುತ್ತಿಲ್ಲ

ದೇವಸ್ಥಾನದಲ್ಲೂ ಡಿವೋರ್ಸ್​ ವಿಚಾರ; ಸಿಟ್ಟಾದ ಸಮಂತಾ ರಿಯಾಕ್ಷನ್​ ನೋಡಿ ಚಪ್ಪಾಳೆ ಹೊಡೆದ ಅಭಿಮಾನಿಗಳು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ