AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ನಂತರ ಮೊದಲ ಬಾರಿಗೆ ಒಂದೇ ಕಡೆ ಕಾಣಿಸಿಕೊಂಡ ಸಮಂತಾ-ನಾಗ ಚೈತನ್ಯ; ಹೇಗಿತ್ತು ರಿಯಾಕ್ಷನ್​?

ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ ಹೆಚ್ಚು ಆ್ಯಕ್ಟೀವ್​ ಆಗಿರೋದು ಟಾಲಿವುಡ್​ನಲ್ಲಿ. ಹೀಗಾಗಿ, ಅನೇಕ ಬಾರಿ ಇಬ್ಬರೂ ಒಟ್ಟಿಗೆ ಸಿಗೋ ಸಾಧ್ಯತೆ ಇರುತ್ತದೆ. ಇದನ್ನು ಸಮಂತಾ ಅವಾಯ್ಡ್​ ಮಾಡೋಕೆ ನೋಡುತ್ತಿದ್ದಾರೆ.

ವಿಚ್ಛೇದನದ ನಂತರ ಮೊದಲ ಬಾರಿಗೆ ಒಂದೇ ಕಡೆ ಕಾಣಿಸಿಕೊಂಡ ಸಮಂತಾ-ನಾಗ ಚೈತನ್ಯ; ಹೇಗಿತ್ತು ರಿಯಾಕ್ಷನ್​?
ಸಮಂತಾ-ನಾಗ ಚೈತನ್ಯ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 29, 2021 | 8:36 AM

Share

ಸಮಂತಾ ಹಾಗೂ ನಾಗ ಚೈತನ್ಯ (Samantha And Naga Chaitanya) ಇಬ್ಬರೂ ಪ್ರೀತಿಸಿ ಮದುವೆ ಆದವರು. ಆದರೆ, ದಾಂಪತ್ಯ ಜೀವನ ಹೆಚ್ಚು ವರ್ಷ ಬರಲಿಲ್ಲ. ಕೇವಲ ನಾಲ್ಕು ವರ್ಷಕ್ಕೆ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಈಗ ಇಬ್ಬರೂ ತಮ್ಮದೇ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಮಂತಾ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರು ಹೆಜ್ಜೆ ಹಾಕಿದ ವಿಶೇಷ ಸಾಂಗ್​ ‘ಹೂ ಅಂತೀಯಾ ಮಾವ, ಉಹೂ ಅಂತೀಯಾ ಮಾವ..’ ಸೂಪರ್​​ ಹಿಟ್​ ಆಗಿದೆ. ಈಗ ಸಮಂತಾ ಹಾಗೂ ನಾಗ ಚೈತನ್ಯ ಒಂದೇ ಕಡೆಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಈಗ ಸಾಕಷ್ಟು ಚರ್ಚೆ ಆಗುತ್ತಿದೆ.

ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ ಹೆಚ್ಚು ಆ್ಯಕ್ಟೀವ್​ ಆಗಿರೋದು ಟಾಲಿವುಡ್​ನಲ್ಲಿ. ಹೀಗಾಗಿ, ಅನೇಕ ಬಾರಿ ಇಬ್ಬರೂ ಎದುರು-ಬದುರು ಬರೋ ಸಾಧ್ಯತೆ ಇರುತ್ತದೆ. ಇದನ್ನು ಸಮಂತಾ ಅವಾಯ್ಡ್​ ಮಾಡೋಕೆ ನೋಡುತ್ತಿದ್ದಾರೆ. ವಿಚ್ಛೇದನ ಪಡೆದ ನಂತರ ಇಬ್ಬರೂ ಗೆಳೆಯರಾಗಿ ಇರುತ್ತೇವೆ ಎಂದು ಹೇಳಿಕೊಂಡಿದ್ದರು. ಈ ಕಾರಣಕ್ಕೆ, ಎದುರು ಸಿಕ್ಕರೆ ಮಾತನಾಡಲೇ ಬೇಕು. ಈಗ ಇಬ್ಬರೂ ಒಂದೇ ಕಡೆ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ನಾಗ ಚೈತನ್ಯ ಅವರು ‘ಬಂಗಾರ್ರಾಜು’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅಕ್ಕಿನೇನಿ ನಾಗಾರ್ಜುನ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕಾಗಿ ಅವರು ರಾಮಾ ನಾಯ್ಡು ಸ್ಟುಡಿಯೋಗೆ ತೆರಳಿದ್ದರು. ಈ ವೇಳೆ ಸಮಂತಾ ಕೂಡ ಅಲ್ಲಿಯೇ ಇದ್ದರು ಎನ್ನಲಾಗಿದೆ. ‘ಯಶೋಧಾ’ ಚಿತ್ರದ ಶೂಟಿಂಗ್​ಗಾಗಿ ಅವರು ರಾಮಾ ನಾಯ್ಡು ಸ್ಟುಡಿಯೋಗೆ ತೆರಳಿದ್ದರು. ಹಾಗಾದರೆ, ಇಬ್ಬರೂ ಭೇಟಿ ಆದರಾ? ಆ ಪ್ರಶ್ನೆಗೆ ಇಲ್ಲ ಎನ್ನುತ್ತಿವೆ ಮೂಲಗಳು.

ಸಮಂತಾ ಹಾಗೂ ನಾಗ ಚೈತನ್ಯ ಒಂದೇ ಕಡೆ ಸೇರಿದ್ದರೂ ಕೂಡ ಒಬ್ಬರನ್ನೊಬ್ಬರು ಭೇಟಿ ಮಾಡಿಲ್ಲ. ಇಬ್ಬರೂ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕಾರು ಹತ್ತಿ ಮನೆಗೆ ತೆರಳಿದ್ದಾರೆ ಎಂದು ವರದಿ ಆಗಿದೆ. ಸಮಂತಾ ಹಾಗೂ ನಾಗ ಚೈತನ್ಯ ಒಟ್ಟಾಗಿ ಸೇರಿ ಮಾತುಕತೆ ನಡೆಸಬೇಕಿತ್ತು ಎನ್ನುವ ಅಭಿಪ್ರಾಯ ಅಭಿಮಾನಿ ವಲಯದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

Samantha: ಗರ್ಲ್ಸ್​ ಗ್ಯಾಂಗ್​ ಜತೆ ಸಮಂತಾ ಗೋವಾ ಟ್ರಿಪ್​; ವೈರಲ್​ ಆಯ್ತು ಫೋಟೋ

Published On - 5:08 pm, Tue, 28 December 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ