AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ
ನಾಗ ಚೈತನ್ಯ-ಸಾಯಿ ಪಲ್ಲವಿ-ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 02, 2021 | 4:27 PM

Share

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ. ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಮೊಟ್ಟ ಮೊದಲ ಬಾರಿಗೆ ಸಮಂತಾ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಿಂದ ಅಕ್ಕಿನೇನಿ ಸರ್​ ನೇಮ್​ ಅನ್ನು ತೆಗೆದು ಹಾಕಿದ್ದರು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.

ಆಮಿರ್ ಖಾನ್​ ಅವರು ನಾಗ ಚೈತನ್ಯ ನಟನೆಯ ಲವ್​​ಸ್ಟೋರಿ ಸಿನಿಮಾ ಪ್ರಚಾರಕ್ಕೆ ಬಂದಿದ್ದರು. ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇರಲಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು.

ಈ ರೀತಿಯ ಘಟನೆಗಳು ನಡೆದೇ ಇದ್ದವು. ಈಗ ಸಮಂತಾ ಹಾಗೂ ನಾಗ ಚೈತನ್ಯ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಅಲ್ಲದೆ, ಈ ಸ್ಟಾರ್​ ಜೋಡಿ ಈ ರೀತಿ ಮಾಡಬಾರದಿತ್ತು ಎಂದು ಬೇಸರ ಹೊರ ಹಾಕುತ್ತಿದ್ದಾರೆ ಅಭಿಮಾನಿಗಳು. ಕೆಲವರು ‘ಲವ್​ ಸ್ಟೋರಿ’ ಸಿನಿಮಾದ ನಾಯಕಿ ಸಾಯಿ ಪಲ್ಲವಿಯನ್ನು ಮದುವೆಯಾಗುವಂತೆ ನಾಗಚೈತನ್ಯಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಅಕ್ಕಿನೇನಿ ಬಗ್ಗೆ ಹುಟ್ಟಿಕೊಂಡಿದೆ ಹೊಸದೊಂದು ಸುದ್ದಿ; ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ?

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

Published On - 4:25 pm, Sat, 2 October 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ