AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ
ನಾಗ ಚೈತನ್ಯ-ಸಾಯಿ ಪಲ್ಲವಿ-ಸಮಂತಾ
TV9 Web
| Edited By: |

Updated on:Oct 02, 2021 | 4:27 PM

Share

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ. ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಮೊಟ್ಟ ಮೊದಲ ಬಾರಿಗೆ ಸಮಂತಾ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಿಂದ ಅಕ್ಕಿನೇನಿ ಸರ್​ ನೇಮ್​ ಅನ್ನು ತೆಗೆದು ಹಾಕಿದ್ದರು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.

ಆಮಿರ್ ಖಾನ್​ ಅವರು ನಾಗ ಚೈತನ್ಯ ನಟನೆಯ ಲವ್​​ಸ್ಟೋರಿ ಸಿನಿಮಾ ಪ್ರಚಾರಕ್ಕೆ ಬಂದಿದ್ದರು. ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇರಲಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು.

ಈ ರೀತಿಯ ಘಟನೆಗಳು ನಡೆದೇ ಇದ್ದವು. ಈಗ ಸಮಂತಾ ಹಾಗೂ ನಾಗ ಚೈತನ್ಯ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಅಲ್ಲದೆ, ಈ ಸ್ಟಾರ್​ ಜೋಡಿ ಈ ರೀತಿ ಮಾಡಬಾರದಿತ್ತು ಎಂದು ಬೇಸರ ಹೊರ ಹಾಕುತ್ತಿದ್ದಾರೆ ಅಭಿಮಾನಿಗಳು. ಕೆಲವರು ‘ಲವ್​ ಸ್ಟೋರಿ’ ಸಿನಿಮಾದ ನಾಯಕಿ ಸಾಯಿ ಪಲ್ಲವಿಯನ್ನು ಮದುವೆಯಾಗುವಂತೆ ನಾಗಚೈತನ್ಯಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಅಕ್ಕಿನೇನಿ ಬಗ್ಗೆ ಹುಟ್ಟಿಕೊಂಡಿದೆ ಹೊಸದೊಂದು ಸುದ್ದಿ; ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ?

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

Published On - 4:25 pm, Sat, 2 October 21

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ