AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ
ನಾಗ ಚೈತನ್ಯ-ಸಾಯಿ ಪಲ್ಲವಿ-ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 02, 2021 | 4:27 PM

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ. ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಮೊಟ್ಟ ಮೊದಲ ಬಾರಿಗೆ ಸಮಂತಾ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಿಂದ ಅಕ್ಕಿನೇನಿ ಸರ್​ ನೇಮ್​ ಅನ್ನು ತೆಗೆದು ಹಾಕಿದ್ದರು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.

ಆಮಿರ್ ಖಾನ್​ ಅವರು ನಾಗ ಚೈತನ್ಯ ನಟನೆಯ ಲವ್​​ಸ್ಟೋರಿ ಸಿನಿಮಾ ಪ್ರಚಾರಕ್ಕೆ ಬಂದಿದ್ದರು. ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇರಲಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು.

ಈ ರೀತಿಯ ಘಟನೆಗಳು ನಡೆದೇ ಇದ್ದವು. ಈಗ ಸಮಂತಾ ಹಾಗೂ ನಾಗ ಚೈತನ್ಯ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಅಲ್ಲದೆ, ಈ ಸ್ಟಾರ್​ ಜೋಡಿ ಈ ರೀತಿ ಮಾಡಬಾರದಿತ್ತು ಎಂದು ಬೇಸರ ಹೊರ ಹಾಕುತ್ತಿದ್ದಾರೆ ಅಭಿಮಾನಿಗಳು. ಕೆಲವರು ‘ಲವ್​ ಸ್ಟೋರಿ’ ಸಿನಿಮಾದ ನಾಯಕಿ ಸಾಯಿ ಪಲ್ಲವಿಯನ್ನು ಮದುವೆಯಾಗುವಂತೆ ನಾಗಚೈತನ್ಯಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಅಕ್ಕಿನೇನಿ ಬಗ್ಗೆ ಹುಟ್ಟಿಕೊಂಡಿದೆ ಹೊಸದೊಂದು ಸುದ್ದಿ; ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ?

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

Published On - 4:25 pm, Sat, 2 October 21

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ