AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 

ಸಮಂತಾ ಅಕ್ಕಿನೆನಿ ವಿಚ್ಛೇದನ ಘೋಷಣೆ ಮಾಡಿದಾಗಿನಿಂದಲೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ.

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 
ಸಮಂತಾ
TV9 Web
| Edited By: |

Updated on:Oct 27, 2021 | 6:51 PM

Share

ಸಮಂತಾ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಬೀಸಿದೆ. ನಾಗ ಚೈತನ್ಯ ಮತ್ತು ಸಮಂತಾ ಇಬ್ಬರೂ ದೂರವಾಗಿದ್ದಾರೆ. ಇದಾದ ಕೆಲವೇ ದಿನಕ್ಕೆ ಅವರು ರಿಷಿಕೇಷಕ್ಕೆ ಭೇಟಿ ನೀಡಿದ್ದರು. ಈಗ ಸಮಂತಾ ದುಬೈಗೆ ತೆರಳಿದ್ದಾರೆ. ಸುತ್ತಾಟ ನಡೆಸುವ ಮೂಲಕ ತಮಗಾದ ನೋವನ್ನು ಮರೆಯೋಕೆ ಅವರು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಸಮಂತಾ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಮಾತನಾಡಿದ್ದಾರೆ. ಈ ಪೋಸ್ಟ್​ ಸಾಕಷ್ಟು ವೈರಲ್​ ಆಗುತ್ತಿದೆ. ಅನೇಕರು ಸಮಂತಾ ಅವರನ್ನು ಬೆಂಬಲಿಸಿದ್ದಾರೆ.

ಸಮಂತಾ ವಿಚ್ಛೇದನ ಘೋಷಣೆ ಮಾಡಿದಾಗಿನಿಂದಲೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ವಿವಿಧ ರೀತಿಯ ಸಾಲುಗಳನ್ನು ಕೂಡ ಹಾಕುತ್ತಿದ್ದಾರೆ. ಈಗ ಸಮಂತಾ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಪೋಸ್ಟ್ ಮಾಡಿದ್ದಾರೆ.

‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದಾರೆ.

ನಟಿ ಸಮಂತಾ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಿ ಎಷ್ಟು ಸುಳ್ಳು, ಎಷ್ಟು ನಿಜ ಎಂಬುದು ತಿಳಿದಿಲ್ಲ. ನಾಗ ಚೈತನ್ಯ ಜೊತೆಗಿನ ಕಿರಿಕ್​, ವಿಚ್ಛೇದನ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಬಣ್ಣಬಣ್ಣದ ಗಾಸಿಪ್​ಗಳು ಕೇಳಿಬಂದಿದ್ದು ಸಮಂತಾಗೆ ನಿಜಕ್ಕೂ ಬೇಸರ ಮೂಡಿಸಿದೆ. ಹಾಗಾಗಿ ಸಮಂತಾ ಕಾನೂನು ಸಮರ ಸಾರಿದ್ದಾರೆ. ತಮ್ಮ ವಿರುದ್ಧ ಮಾನಹಾನಿ ಆಗುವಂತಹ ಮಾಹಿತಿಯನ್ನು ಪ್ರಸಾರ ಮಾಡಿದ ಯೂಟ್ಯೂಬರ್​ಗಳ ಮೇಲೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ನ್ಯಾಯಾಲಯದಲ್ಲಿ ಸಮಂತಾಗೆ ಹಿನ್ನಡೆ ಆಗಿತ್ತು. ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ ಸಮಂತಾ ಈ ಮೊಕದ್ದಮೆ ಹೂಡಿದ್ದಾರೆ. ಅಲ್ಲದೇ ಈ ಕೇಸ್​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

Published On - 6:28 pm, Wed, 27 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?