AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಕಾ ನೀನು ಅತ್ಯಂತ ಸುಂದರ ವಧು’; ಶೋಭಿತಾ ಬಗ್ಗೆ ಕಮೆಂಟ್ ಮಾಡಿದ ಸಮಂತಾ

ಶೋಭಿತಾ ಹಾಗೂ ನಾಗ ಚೈತನ್ಯ ವಿವಾಹದ ಬಗ್ಗೆ ಕೆಲವು ವದಂತಿ ಹಬ್ಬಿದ್ದವು. ಆ ಪೈಕಿ ಇವರ ಮದುವೆ ಆಲ್ಬಂನ ಶೂಟ್ ಮಾಡಲು ನೆಟ್​ಫ್ಲಿಕ್ಸ್​ನವರಿಗೆ ಹಕ್ಕನ್ನು ನೀಡಿದ್ದಾರೆ ಎಂದು ವರದಿ ಆಗಿತ್ತು. ಇದನ್ನು ಈ ಜೋಡಿ ಅಲ್ಲಗಳೆದಿದ್ದರು.

‘ಅಕ್ಕಾ ನೀನು ಅತ್ಯಂತ ಸುಂದರ ವಧು’; ಶೋಭಿತಾ ಬಗ್ಗೆ ಕಮೆಂಟ್ ಮಾಡಿದ ಸಮಂತಾ
ಶೋಭಿತಾ ಕುಟುಂಬ
ರಾಜೇಶ್ ದುಗ್ಗುಮನೆ
|

Updated on:Dec 04, 2024 | 11:55 AM

Share

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಅವರ ವಿವಾಹ ಇಂದು (ಡಿಸೆಂಬರ್ 4) ನೆರವೇರುತ್ತಿದೆ. ಅದ್ದೂರಿಯಾಗಿ ಇವರ ವಿವಾಹ ಅನ್ನಪೂರ್ಣ ಸ್ಟುಡಿಯೋದಲ್ಲಿ ನೆರವೇರುತ್ತಿದೆ. ಈ ಸ್ಟುಡಿಯೋ ಅಕ್ಕಿನೇನಿ ನಾಗಾರ್ಜುನ ಒಡೆತನದಲ್ಲಿ ಇದೆ. ಇವರ ಮದುವೆ ಬಗ್ಗೆ ಸಮಂತಾ ಅವರು ಯಾವುದೇ ಕಮೆಂಟ್ ಮಾಡಿಲ್ಲ. ಆದರೆ, ಈಗ ಸಮಂತಾ ಅವರ ಬಗ್ಗೆ ಮಾತನಾಡಿದ್ದಾರೆ. ಹಾಗಂತ ಇದು ನಾಗ ಚೈತನ್ಯ ಅವರ ಮಾಜಿ ಪತ್ನಿ ಸಮಂತಾ ಅಲ್ಲ.

ಮದುವೆಗೂ ಮುನ್ನದ ಕೆಲವು ಶಾಸ್ತ್ರ ನೆರವೇರಿದೆ. ಈ ಫೋಟೋ ಹಂಚಿಕೊಂಡಿರೋ ಅವರ ಸಹೋದರಿ ಸಮಂತಾ ಧುಲಿಪಾಲ್ , ‘ಅತ್ಯಂತ ಪ್ರಭಾವಶಾಲಿ ವ್ಯಕ್ತಿ. ಅತ್ಯಂತ ಸುಂದರ ಮದುವೆ ಹುಡುಗಿಗೆ ಚಿಯರ್ಸ್. ನಿಮಗೆ ಪ್ರೀತಿ ಅಕ್ಕ’ ಎಂದು ಕರೆದಿರೋ ಅವರು #SoChay ಹ್ಯಾಶ್​ಟ್ಯಾಗ್ ಹಾಕಿದ್ದಾರೆ. ಶೋಭಿತಾ ಅವರು ಶಾಸ್ತ್ರೋಕ್ತವಾಗಿ ವಿವಾಹ ಆಗುತ್ತಿದ್ದಾರೆ. ಅವರು ಈ ಮೊದಲು ಅರಿಶಿಣ ಶಾಸ್ತ್ರ, ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ಶೋಭಿತಾ ಹಾಗೂ ನಾಗ ಚೈತನ್ಯ ವಿವಾಹದ ಬಗ್ಗೆ ಕೆಲವು ವದಂತಿ ಹಬ್ಬಿದ್ದವು. ಆ ಪೈಕಿ ಇವರ ಮದುವೆ ಆಲ್ಬಂನ ಶೂಟ್ ಮಾಡಲು ನೆಟ್​ಫ್ಲಿಕ್ಸ್​ನವರಿಗೆ ಹಕ್ಕನ್ನು ನೀಡಿದ್ದಾರೆ ಎಂದು ವರದಿ ಆಗಿತ್ತು. ಇದನ್ನು ಈ ಜೋಡಿ ಅಲ್ಲಗಳೆದಿದ್ದರು. ನಾವು ಆ ರೀತಿ ಮಾಡಿಲ್ಲ ಎಂದು ಜೋಡಿ ಹೇಳಿಕೊಂಡಿತ್ತು. ಹೀಗಾಗಿ, ಮದುವೆಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಇಂದೇ ಹೊರ ಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಮಂತಾ, ಕೀರ್ತಿ ಸುರೇಶ್, ರಕುಲ್​ಗೆ ಮೋಸ ಮಾಡಿದ ಯುವಕನ ಬಂಧನ

ಸಮಂತಾ ಜೊತೆ ಬೇರ್ಪಟ್ಟ ನಂತರ ನಾಗ ಚೈತನ್ಯ ಒಟ್ಟಾಗಿ ಇದ್ದರು. ಇವರ ಮಧ್ಯೆ ಹೇಗೆ ಪರಿಚಯ ಬೆಳೆಯಿತು ಎಂಬುದು ತಿಳಿದಿಲ್ಲ. ಆದರೆ, ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆಯಿತು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ಇವರು ಈಗ ವಿವಾಹ ಆಗುತ್ತಿದ್ದಾರೆ. ಆಪ್ತರು ಹಾಗೂ ಕುಟುಂಬದವರು ಮದುವೆಗೆ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:54 am, Wed, 4 December 24

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ