ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ

ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದಾಗಿನಿಂದಲೂ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ.

ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 28, 2021 | 5:48 PM

ಸಮಂತಾ ಅವರು ನಾಗ ಚೈತನ್ಯ ಅವರಿಂದ ದೂರವಾದ ನಂತರ ಸಾಕಷ್ಟು ಕಡೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ರಿಷಿಕೇಷಕ್ಕೆ ಭೇಟಿ ನೀಡಿದ್ದ ಅವರು, ಈಗ ದುಬೈಗೆ ಹಾರಿದ್ದಾರೆ. ಈ ಮೂಲಕ ದಾಂಪತ್ಯದಲ್ಲಿ ಆದ ಕಹಿ ಘಟನೆಯನ್ನು ಅವರು ಮರೆಯೋಕೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಹೆಚ್ಚು ಸಮಯ ಬೇಕು. ಈ ಮಧ್ಯೆ ಸಮಂತಾ ಅವರು ನಾಗ ಚೈತನ್ಯ ಜತೆಗಿನ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ್ದಾರೆ. ಇದನ್ನು ನೋಡಿದ ಸ್ಯಾಮ್​ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ.

ಸಮಂತಾ ಮತ್ತು ನಾಗ ಚೈತನ್ಯ ಅವರ ನಡುವೆ ಏಕಾಏಕಿ ಪ್ರೀತಿ ಹುಟ್ಟಿಲ್ಲ. ಇದಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿದ್ದರು. ಅಲ್ಲಿ ಪರಿಚಯ ಬೆಳೆದು ಅದು ಗೆಳೆತನವಾಗಿ ಮಾರ್ಪಟ್ಟು ನಂತರ ಬಹುಕಾಲ ಪ್ರೀತಿಸಿ ನಾಲ್ಕು ವರ್ಷದ ಹಿಂದೆ ಮದುವೆ ಆಗಿದ್ದರು. ಇಷ್ಟು ದೀರ್ಘ ಪಯಣದಲ್ಲಿ ಅವರು ನಾಗ ಚೈತನ್ಯ ಜತೆಗೆ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಇದರಲ್ಲಿ ಆಯ್ದ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದರು.

ಈಗ ಸಮಂತಾ ನಾಗ ಚೈತನ್ಯ ಜತೆಗೆ ಇದ್ದ ಇತ್ತೀಚಿಗಿನ ಎಲ್ಲಾ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಿಂದ ಡಿಲೀಟ್​ ಮಾಡಿದ್ದಾರೆ. ಈ ಮೂಲಕ ಅವರ ಜತೆಗಿನ ನೆನಪನ್ನು ಮರೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ಇಬ್ಬರೂ ಪರಸ್ಪರ ಫಾಲೋ ಮಾಡುತ್ತಿದ್ದಾರೆ.

ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದಾಗಿನಿಂದಲೂ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ವಿವಿಧ ರೀತಿಯ ಸಾಲುಗಳನ್ನು ಕೂಡ ಹಾಕುತ್ತಿದ್ದಾರೆ. ಇತ್ತೀಚೆಗೆ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಪೋಸ್ಟ್ ಮಾಡಿದ್ದರು. ‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 

Published On - 1:52 pm, Thu, 28 October 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ