AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ

ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದಾಗಿನಿಂದಲೂ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ.

ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 28, 2021 | 5:48 PM

ಸಮಂತಾ ಅವರು ನಾಗ ಚೈತನ್ಯ ಅವರಿಂದ ದೂರವಾದ ನಂತರ ಸಾಕಷ್ಟು ಕಡೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ರಿಷಿಕೇಷಕ್ಕೆ ಭೇಟಿ ನೀಡಿದ್ದ ಅವರು, ಈಗ ದುಬೈಗೆ ಹಾರಿದ್ದಾರೆ. ಈ ಮೂಲಕ ದಾಂಪತ್ಯದಲ್ಲಿ ಆದ ಕಹಿ ಘಟನೆಯನ್ನು ಅವರು ಮರೆಯೋಕೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಹೆಚ್ಚು ಸಮಯ ಬೇಕು. ಈ ಮಧ್ಯೆ ಸಮಂತಾ ಅವರು ನಾಗ ಚೈತನ್ಯ ಜತೆಗಿನ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ್ದಾರೆ. ಇದನ್ನು ನೋಡಿದ ಸ್ಯಾಮ್​ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ.

ಸಮಂತಾ ಮತ್ತು ನಾಗ ಚೈತನ್ಯ ಅವರ ನಡುವೆ ಏಕಾಏಕಿ ಪ್ರೀತಿ ಹುಟ್ಟಿಲ್ಲ. ಇದಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿದ್ದರು. ಅಲ್ಲಿ ಪರಿಚಯ ಬೆಳೆದು ಅದು ಗೆಳೆತನವಾಗಿ ಮಾರ್ಪಟ್ಟು ನಂತರ ಬಹುಕಾಲ ಪ್ರೀತಿಸಿ ನಾಲ್ಕು ವರ್ಷದ ಹಿಂದೆ ಮದುವೆ ಆಗಿದ್ದರು. ಇಷ್ಟು ದೀರ್ಘ ಪಯಣದಲ್ಲಿ ಅವರು ನಾಗ ಚೈತನ್ಯ ಜತೆಗೆ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಇದರಲ್ಲಿ ಆಯ್ದ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದರು.

ಈಗ ಸಮಂತಾ ನಾಗ ಚೈತನ್ಯ ಜತೆಗೆ ಇದ್ದ ಇತ್ತೀಚಿಗಿನ ಎಲ್ಲಾ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಿಂದ ಡಿಲೀಟ್​ ಮಾಡಿದ್ದಾರೆ. ಈ ಮೂಲಕ ಅವರ ಜತೆಗಿನ ನೆನಪನ್ನು ಮರೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ಇಬ್ಬರೂ ಪರಸ್ಪರ ಫಾಲೋ ಮಾಡುತ್ತಿದ್ದಾರೆ.

ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದಾಗಿನಿಂದಲೂ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ವಿವಿಧ ರೀತಿಯ ಸಾಲುಗಳನ್ನು ಕೂಡ ಹಾಕುತ್ತಿದ್ದಾರೆ. ಇತ್ತೀಚೆಗೆ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಪೋಸ್ಟ್ ಮಾಡಿದ್ದರು. ‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 

Published On - 1:52 pm, Thu, 28 October 21

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ