AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ, ಶೋಭಿತಾ ಧುಲಿಪಾಲ ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​

ಕಳೆದೊಂದು ವರ್ಷದಿಂದ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ಅವರ ಸಂಬಂಧದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇದೆ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ ಮತ್ತೆ ಅವರಿಬ್ಬರು ಜೊತೆಯಾಗಿರುವ ಫೋಟೋ ವೈರಲ್​ ಆಗಿದೆ. ಯುರೋಪ್​ನಲ್ಲಿ ಅವರಿಬ್ಬರು ಎಂಜಾಯ್​ ಮಾಡುತ್ತಿದ್ದಾರೆ.

ನಾಗ ಚೈತನ್ಯ, ಶೋಭಿತಾ ಧುಲಿಪಾಲ ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​
ನಾಗ ಚೈತನ್ಯ, ಶೋಭಿತಾ ಧುಲಿಪಾಲ
ಮದನ್​ ಕುಮಾರ್​
|

Updated on: May 31, 2024 | 6:52 PM

Share

ನಟ ನಾಗ ಚೈತನ್ಯ (Naga Chaitanya) ಮತ್ತು ನಟಿ ಸಮಂತಾ ರುತ್​ ಪ್ರಭು ಅವರು ವಿಚ್ಛೇದನ ಪಡೆದಿದ್ದು ಬೇಸರದ ಸಂಗತಿ. ಅವರಿಬ್ಬರು ದೂರಾಗಿದ್ದಕ್ಕೆ ಕಾರಣ ಏನು ಎಂಬುದು ಸದ್ಯಕ್ಕಂತೂ ನಿಗೂಢವಾಗಿಯೇ ಉಳಿದುಕೊಂಡಿದೆ. ಡಿವೋರ್ಸ್​ ಪಡೆದ ಬಳಿಕ ಸಮಂತಾ (Samantha) ಅವರು ಸಿಂಗಲ್​ ಆಗಿದ್ದಾರೆ. ಆದರೆ ನಾಗ ಚೈತನ್ಯ ಅವರು ಏಕಾಂಗಿ ಆಗಿಲ್ಲ. ಅವರ ಜೀವನದಲ್ಲಿ ಬೇರೆ ನಟಿಯ ಎಂಟ್ರಿ ಆಗಿದೆ. ನಟಿ ಶೋಭಿತಾ ಧುಲಿಪಾಲ (Sobhita Dhulipala) ಜೊತೆ ಅವರು ಆಗಾಗ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂಬ ಗುಮಾನಿ ಇದೆ. ಈಗ ಶೋಭಿತಾ ಧುಲಿಪಾಲ ಮತ್ತು ನಾಗ ಚೈತನ್ಯ ಅವರು ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​ ಆಗಿದೆ.

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರ ನಡುವೆ ಆಪ್ತತೆ ಬೆಳೆದಿದೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ತಮ್ಮ ಸಂಬಂಧದ ಬಗ್ಗೆ ಓಪನ್​ ಆಗಿ ಇನ್ನೂ ಮಾತನಾಡಿಲ್ಲ. ತಮ್ಮಿಬ್ಬರ ನಡುವೆ ಇರುವ ಸಂಬಂಧ ಏನು ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ. ಹಾಗಿದ್ದರೂ ಕೂಡ ಪರಸ್ಪರ ಡೇಟಿಂಗ್​ ಮಾಡುತ್ತಿದ್ದಾರೆ. ಆಗಾಗ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಶೋಭಿತಾ ಧುಲಿಪಾಲ ಅವರು ಹಿಂದಿ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರಿಗೆ 31 ವರ್ಷ ವಯಸ್ಸು. ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್​ ಪಡೆದ ಬಳಿಕ ನಾಗ ಚೈತನ್ಯ ಜೊತೆ ಶೋಭಿತಾ ಧುಲಿಪಾಲ ಹೆಸರು ತಳುಕು ಹಾಕಿಕೊಂಡಿತು. ವಿದೇಶದ ಹೋಟೆಲ್​ಗಳಲ್ಲಿ ಅವರಿಬ್ಬರು ಜೊತೆಯಾಗಿ ಕಾಲ ಕಳೆದಿರುವುದಕ್ಕೆ ಸಾಕ್ಷಿ ಕೂಡ ಸಿಕ್ಕಿದೆ.

ಇದನ್ನೂ ಓದಿ; ನಾಗ ಚೈತನ್ಯ ಮಾಡಿದ ಪರಸ್ತ್ರೀ ಸಹವಾಸದಿಂದಲೇ ಸಮಂತಾ ವಿಚ್ಛೇದನ? ವೈರಲ್​ ವಿಡಿಯೋ ಸಾಕ್ಷಿ

ಕೆಲವು ತಿಂಗಳ ಹಿಂದೆ ಲಂಡನ್​ನ ರೆಸ್ಟೋರೆಂಟ್​ವೊಂದರಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ಒಟ್ಟಿಗೆ ಇದ್ದಿದ್ದು ಜಗಜ್ಜಾಹೀರಾಯಿತು. ಆದರೂ ಸಹ ಅವರಿಬ್ಬರು ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿಲ್ಲ. ನಾಗ ಚೈತನ್ಯ ಅವರಿಗೆ ‘ಧೂತ’ ವೆಬ್​ ಸಿರೀಸ್​ ಮೂಲಕ ಗೆಲುವು ಸಿಕ್ಕಿದೆ. ‘ತಂಡೇಲ್​’ ಸಿನಿಮಾದ ಬಿಡುಗಡೆಯಾಗಿ ಅವರು ಕಾದಿದ್ದಾರೆ. ಆ ಸಿನಿಮಾದಲ್ಲಿ ಅವರು ಸಾಯಿ ಪಲ್ಲವಿ ಜೊತೆ ನಟಿಸಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾಗೆ ಭರ್ಜರಿ ಡಿಮ್ಯಾಂಡ್​ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?