AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ರೀತಿ ಮಾಡಬಾರದಿತ್ತು’; ಹಳೆಯ ನಿರ್ಧಾರಕ್ಕೆ ಈ ಮರುಗಿದ ಸಮಂತಾ

ಸಮಂತಾ ರುತ್ ಪ್ರಭು ಅವರು ಚಿತ್ರರಂಗಕ್ಕೆ ಕಾಲಿಟ್ಟು 15 ವರ್ಷಗಳು ಪೂರ್ಣಗೊಂಡಿದ್ದು, ಅವರ ಯಶಸ್ವಿ ಹಾಗೂ ಕೆಲವು ವಿವಾದಾತ್ಮಕ ಪಾತ್ರಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ‘ಯೇ ಮಾಯ ಚೇಸಾವೆ’ ಚಿತ್ರದಿಂದ ಆರಂಭವಾದ ಅವರ ಪ್ರಯಾಣದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳಿವೆ. ಅವರು ಈಗ ‘ರಕ್ತಬ್ರಹ್ಮಾಂಡ’ ಸೀರಿಸ್​ನಲ್ಲಿ ತೊಡಗಿಸಿಕೊಂಡಿದ್ದಾರೆ.

‘ಆ ರೀತಿ ಮಾಡಬಾರದಿತ್ತು’; ಹಳೆಯ ನಿರ್ಧಾರಕ್ಕೆ ಈ ಮರುಗಿದ ಸಮಂತಾ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Mar 05, 2025 | 7:04 AM

Share

ನಟಿ ಸಮಂತಾ ರುತ್ ಪ್ರಭು ಅವರು ಚಿತ್ರರಂಗಕ್ಕೆ ಬಂದಿದ್ದು 2010ರಲ್ಲಿ. ಅವರು ಚಿತ್ರರಂಗಕ್ಕೆ ಕಾಲಿಟ್ಟು 15 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈ ಪೈಕಿ ಕೆಲವು ನಟನೆಗೆ ಆದ್ಯತೆ ಇರೋ ಸಿನಿಮಾಗಳಾದರೆ, ಇನ್ನೂ ಕೆಲವರು ಗ್ಲಾಮರಸ್ ಪಾತ್ರಗಳು. ಆದರೆ, ಈ ರೀತಿಯ ಪಾತ್ರಗಳನ್ನು ಮಾಡಬಾರದಿತ್ತು ಎಂದು ಸಮಂತಾ ಅವರು ಈಗ ಮರುಗಿದ್ದಾರೆ.

‘ಇದು ಒತ್ತಡದಿಂದ ಕೂಡಿತ್ತು. ಏಕೆಂದರೆ ನಾನು ಪ್ರತಿ ಚಿತ್ರದ ಯಶಸ್ಸಿಗೆ ನನ್ನ ಸ್ವಾಭಿಮಾನವನ್ನು ಕಟ್ಟಿಕೊಂಡಿದ್ದೇನೆ. ಯಶಸ್ಸನ್ನು ನಾನು ನಿರ್ಧರಿಸೋಕೆ ಸಾಧ್ಯವಿಲ್ಲ. ಪ್ರತಿ ಶುಕ್ರವಾರ ಆತಂಕ ಆಗುತ್ತಿತ್ತು. ಬಾಕ್ಸ್ ಆಫೀಸ್​ ಮೇಲೆ ನನ್ನ ಯಶಸ್ಸು ನಿರ್ಧಾರ ಆಗುತ್ತಿತ್ತು. ಈಗ ಹಾಗಿಲ್ಲ. ನಾನು ಸ್ಪಷ್ಟ ದೃಷ್ಟಿಕೋನ ಹೊಂದಿದ್ದೇನೆ’ ಎಂದಿದ್ದಾರೆ ಅವರು.

‘ನಾನು ಕೆಲವು ಪಾತ್ರಗಳಿಗೆ ಹೊಂದಿಕೊಳ್ಳಲು ಹೆಣಗಾಡುತ್ತಿದ್ದೆ. ಆದಾಗ್ಯೂ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದೆ. ನಾನು ಈಗ ಆ ಸಿನಿಮಾಗಳನ್ನು ನೋಡಿದಾಗ ನನ್ನ ಪಾತ್ರಗಳು ನನಗೆ ಹಾಸ್ಯಾಸ್ಪದವಾಗಿ ಕಾಣುತ್ತವೆ. ಆ ಸಿನಿಮಾಗಳನ್ನು ಮಾಡಬಾರದಿತ್ತು’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
‘ಅಸೂಯೆಗೆ ನನ್ನಲ್ಲಿ ಜಾಗವಿಲ್ಲ’; ಮಾಜಿ ಪತಿಯ ಮದುವೆ ಬಗ್ಗೆ ಸಮಂತಾ ಮಾತು
Image
ಕದ್ದುಮುಚ್ಚಿ ಡೇಟಿಂಗ್ ಮಾಡೋದು ನಿಲ್ಲಿಸಿದ ಸಮಂತಾ? ಓಪನ್ ಆಗಿ ಸುತ್ತಾಟ
Image
‘ಮುಂದಿನ 6 ತಿಂಗಳು ನಗುತ್ತಾ ಇರುತ್ತೇನೆ’; ಅಭಿಮಾನಿಗಳಿಗಾಗಿ ಸಮಂತಾ ಪೋಸ್ಟ್
Image
2025ರಲ್ಲಿ ಸಮಂತಾ 2ನೇ ಮದುವೆ, ತಾಯಿ ಆಗುವ ಸೂಚನೆ ನೀಡಿದ ನಟಿ

ಸಮಂತಾ ಅವರು ನಟಿಸಿದ್ದು, ‘ಯೇ ಮಾಯ ಚೇಸಾವೆ’ ಸಮಂತಾ ನಟಿಸಿದ ಮೊದಲ ಸಿನಿಮಾ. ಆ ಬಳಿಕ ಅವರು ‘ಬೃಂದಾವನಂ’, ‘ದೂಕುಡು’, ‘ಅತ್ತಾರಿಟಿಕಿ ದಾರೇದಿ’ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರಗಳಲ್ಲಿ ಅವರು ನಟಿಸಿ ಗಮನ ಸೆಳೆದರು.

ಇದನ್ನೂ ಓದಿ: ಸಮಂತಾಗೆ ಈ ಸಿನಿಮಾ ನಟಿಯರು ಬಲು ಅಚ್ಚುಮೆಚ್ಚು, ನಟಿಯರ ಯಾವ ಸಿನಿಮಾ ಹೆಚ್ಚು ಇಷ್ಟ?

ಸಮಂತಾ ಅವರು 2023ರಲ್ಲಿ ‘ಶಾಂಕುಂತಲಂ’ ಹಾಗೂ ‘ಖುಷಿ’ ಚಿತ್ರಗಳಲ್ಲಿ ನಟಿಸಿದರು. ಈ ಪೈಕಿ ‘ಖುಷಿ’ ಸಿನಿಮಾ ಕೊಂಚ ಮೆಚ್ಚುಗೆ ಪಡೆಯಿತು. ಅಲ್ಲದೆ, ‘ಸಿಟಾಡೆಲ್’ ಸೀರಿಸ್​ನಲ್ಲೂ ಅವರು ನಟಿಸಿದ್ದಾರೆ. ‘ರಕ್ತಬ್ರಹ್ಮಾಂಡ: ದಿ ಬ್ಲಡಿ ಕಿಂಗ್​ಡಮ್’ ವೆಬ್ ಸೀರಿಸ್​ನಲ್ಲಿ ಅವರು ನಟಿಸುತ್ತಿದ್ದಾರೆ. ರಾಜ್ ಮತ್ತು ಡಿಕೆ ಈ ಸಿನಿಮಾನ ನಿರ್ದೇಶನ ಮಾಡುತ್ತಿದ್ದಾರೆ.  ಇನ್ನು, ರಾಜ್ ಜೊತೆ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಮಾತೂ ಇದೆ. ಆದರೆ, ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ