AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?

ಸಮಂತಾ ವಿಚ್ಛೇದನ ಪಡೆದುಕೊಂಡ ನಂತರದಲ್ಲಿ ಅನೇಕರು ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರಿಗೆ ಅಬಾರ್ಷನ್​ ಆಗಿತ್ತು, ಸಮಂತಾಗೆ ಬೇರೆಯವರ ಜತೆ ಸಂಬಂಧ ಇತ್ತು ಎಂಬಿತ್ಯಾದಿ ಸುದ್ದಿಗಳನ್ನು ಹಬ್ಬಿಸುವ ಕುತಂತ್ರ ನಡೆದಿತ್ತು.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?
ಸಮಂತಾ
TV9 Web
| Edited By: |

Updated on: Oct 21, 2021 | 6:37 PM

Share

ಸಮಂತಾ ಅವರು ವೈಯಕ್ತಿಕ ವಿಚಾರದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ನಾಗ ಚೈತನ್ಯ ಜತೆ ವಿಚ್ಛೇದನ ಪಡೆದುಕೊಂಡ ವಿಚಾರದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಒಂದೆರಡಲ್ಲ. ಆದರೆ, ಕೆಲವರು ತೀರಾ ಕೆಳಮಟ್ಟಕ್ಕೆ ಇಳಿದು ಸಮಂತಾ ಹೆಸರು ಕೆಡಿಸುವ ಪ್ರಯತ್ನ ಮಾಡಿದ್ದರು. ಇದಕ್ಕೆ ಈಗ ಸಮಂತಾ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ಅನೇಕರಿಗೆ ನಡುಕ ಹುಟ್ಟಿಸಿದೆ.

ಸಮಂತಾ ವಿಚ್ಛೇದನ ಪಡೆದುಕೊಂಡ ನಂತರದಲ್ಲಿ ಅನೇಕರು ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರಿಗೆ ಅಬಾರ್ಷನ್​ ಆಗಿತ್ತು, ಸಮಂತಾಗೆ ಬೇರೆಯವರ ಜತೆ ಸಂಬಂಧ ಇತ್ತು ಎಂಬಿತ್ಯಾದಿ ಸುದ್ದಿಗಳನ್ನು ಹಬ್ಬಿಸುವ ಕುತಂತ್ರ ನಡೆದಿತ್ತು. ಆದರೆ, ಸಮಂತಾ ಈ ವಿಚಾರದಲ್ಲಿ ಸುಮ್ಮನೆ ಕೂತಿಲ್ಲ. ಅವರ ಕಡೆಯಿಂದ ಖಡಕ್​ ಆಗಿಯೇ ಇದಕ್ಕೆಲ್ಲ ಉತ್ತರ ಬಂದಿತ್ತು. ಆದರೂ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ನಡೆದೇ ಇತ್ತು. ಇದು ಸಮಂತಾ ಅಸಮಾಧಾನಕ್ಕೆ ಕಾರಣವಾಗಿದೆ.

ಸಮಂತಾ ಪರ ವಕೀಲರು ಈಗ ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ಬಗ್ಗೆ ಅತೀ ಕೆಟ್ಟದಾಗಿ ಸುದ್ದಿ ಮಾಡಿದ ಮೂರು ಯೂಟ್ಯೂಬ್​ ಚಾನೆಲ್​ಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಒಂದೊಮ್ಮೆ ಇದು ಸಾಬೀತಾದರೆ, ಈ ಯೂಟ್ಯೂಬ್​ ಚಾನೆಲ್​ಗಳು ಸಮಂತಾಗೆ ದೊಡ್ಡ ಮೊತ್ತದ ಹಣ ಪಾವತಿ ಮಾಡಬೇಕಿದೆ. ಸದ್ಯ, ಇದರಿಂದ ಅನೇಕರಿಗೆ ನಡುಕ ಹುಟ್ಟಿದೆ.

ಸಮಂತಾ ಸದ್ಯ ರಿಷಿಕೇಶ ಪ್ರವಾಸದಲ್ಲಿದ್ದಾರೆ. ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ’ ಎಂದು ಬರೆದುಕೊಂಡಿರುವ ಫಲಕದ ಚಿತ್ರವನ್ನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಇತ್ತೀಚೆಗೆ ಪೋಸ್ಟ್ ಹಾಕಿದ್ದ ಸಮಂತಾ, ‘ನನ್ನ ವೈಯಕ್ತಿಕ ವಿಚಾರಕ್ಕೆ ನೀವು ಸ್ಪಂದಿಸಿರುವುದು ಖುಷಿ ನೀಡಿದೆ. ವದಂತಿಗಳ ವಿಚಾರದಲ್ಲಿ ನೀವು ನನ್ನ ಪರವಾಗಿ ನಿಂತಿರುವುದಕ್ಕೆ ಧನ್ಯವಾದಗಳು. ನನಗೆ ಬೇರೆ ಸಂಬಂಧವಿದೆ, ನಾನು ಮಕ್ಕಳನ್ನು ಪಡೆಯಲು ಬಯಸಲಿಲ್ಲ, ನಾನು ಅವಕಾಶವಾದಿ ಮತ್ತು ನಾನು ಗರ್ಭಪಾತ ಮಾಡಿಸಿಕೊಂಡಿದ್ದೇನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ವಿಚ್ಛೇದನ ಎನ್ನುವುದು ನೋವಿನ ಪ್ರಕ್ರಿಯೆ. ಇದು ಗುಣವಾಗಲು ಸಮಯ ನೀಡಿ. ಆದರೆ ನಾನು ಒಂದು ಪ್ರಾಮಿಸ್​ ಮಾಡುತ್ತೇನೆ. ಈ ರೀತಿಯ ದಾಳಿಯಿಂಧ ನನ್ನನ್ನು ಮುರಿಯಲು ಸಾಧ್ಯವಿಲ್ಲ’ ಎಂದು ಸಮಂತಾ ಬರೆದುಕೊಂಡಿದ್ದರು.

ಇದನ್ನೂ ಓದಿ: Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ