Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ

ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ತಮ್ಮದೇ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅನೇಕರು ಸಮಂತಾ ಬಗ್ಗೆ ಟೀಕೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಅವರು ಕೂಲ್ ಆಗಿಯೇ ಉತ್ತರ ನೀಡುತ್ತಿದ್ದಾರೆ.

‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ
ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 27, 2022 | 6:59 PM

ನಟಿ ಸಮಂತಾ ಅವರು (Samantha) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ವಿಚ್ಛೇದನದ ಬಳಿಕ ಅವರು ಸಂಪೂರ್ಣ ಸಮಯವನ್ನು ಗೆಳೆಯರು ಹಾಗೂ ಪ್ರಾಣಿಗಳ ಜತೆ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಪೋಸ್ಟ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಸಮಂತಾ ಅವರು ಇನ್​ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ ಶ್ವಾನದ ಫೋಟೋಗಳನ್ನು ಹಾಕುವುದು ಹೆಚ್ಚಿದೆ. ಇದೇ ವಿಚಾರಕ್ಕೆ ಸಮಂತಾ ಅವರನ್ನು ಟೀಕೆ ಮಾಡಲಾಗಿದೆ. ನಟಿ ಈ ವಿಚಾರಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ.

ಸಮಂತಾ ಅವರು ಕಳೆದ ವರ್ಷ ನಾಗ ಚೈತನ್ಯ ಜತೆಗೆ ವಿಚ್ಛೇದನ ಪಡೆದರು. ಅಕ್ಟೋಬರ್ ತಿಂಗಳಲ್ಲಿ ಈ ಬಗ್ಗೆ ಘೋಷಣೆ ಮಾಡಲಾಯಿತು. ಪ್ರೀತಿಸಿ ಮದುವೆ ಆದ ಇವರು ಬೇರೆ ಆಗುತ್ತಿರುವ ವಿಚಾರ ಅನೇಕರಿಗೆ ನಿಜಕ್ಕೂ ಶಾಕ್ ನೀಡಿತ್ತು. ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ತಮ್ಮದೇ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅನೇಕರು ಸಮಂತಾ ಬಗ್ಗೆ ಟೀಕೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಅವರು ಕೂಲ್ ಆಗಿಯೇ ಉತ್ತರ ನೀಡುತ್ತಿದ್ದಾರೆ.

ಇದನ್ನೂ ಓದಿ
Image
ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Happy Birthday Samantha: ಅಭಿಮಾನಿಗಳು ಸಮಂತಾಗೆ ಫಿದಾ ಆಗಲು ಈ ಚಿತ್ರಗಳೇ ಕಾರಣ..
Image
Samantha: ಸಮಂತಾ ಸ್ಟೈಲ್​ಗಿಲ್ಲ ಸರಿಸಾಟಿ; ಬಗೆಬಗೆಯ ಫ್ಯಾಶನ್ ಅವತಾರದಲ್ಲಿ ಮಿಂಚುವ ನಟಿ- ಫೋಟೋಗಳು ಇಲ್ಲಿವೆ

ಸಮಂತಾ ಅವರು ಶ್ವಾನದ ಜತೆಗೆ ಹೆಚ್ಚು ಸಮಯ ಕಳೆಯುತ್ತಿರುವ ಬಗ್ಗೆ ಅಭಿಮಾನಿಯೋರ್ವ ವ್ಯಂಗ್ಯವಾಡಿದ್ದ. ‘ನಾಯಿ ಮತ್ತು ಬೆಕ್ಕುಗಳ ಜತೆ ಸಮಂತಾ ಒಂಟಿಯಾಗಿ ಸಾಯುತ್ತಾಳೆ’ ಎಂದು ಬರೆದುಕೊಂಡಿದ್ದ. ಇದಕ್ಕೆ ಸಮಂತಾ ಸಿಟ್ಟು ಮಾಡಿಕೊಳ್ಳಲಿಲ್ಲ. ಬದಲಿಗೆ ‘ನಾನು ಅದೃಷ್ಟಶಾಲಿ ಎಂದುಕೊಳ್ಳುತ್ತೇನೆ’ ಎಂದಷ್ಟೇ ಹೇಳಿದ್ದಾರೆ. ಸಮಂತಾ ಉತ್ತರಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಸಮಂತಾ ಇತ್ತೀಚೆಗೆ ‘ಖುಷಿ’ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸುತ್ತಿದ್ದಾರೆ. ಶೂಟಿಂಗ್ ವೇಳೆ ಕಾರು ನೀರಿಗೆ ಬಿದ್ದಿದೆ, ಸಮಂತಾ ಹಾಗೂ ವಿಜಯ್​ಗೆ ಗಾಯಗಳಾಗಿವೆ ಎಂದು ವರದಿ ಆಗಿತ್ತು. ಆದರೆ, ಈ ವರದಿ ಸುಳ್ಳು ಎಂಬುದು ನಂತರ ತಿಳಿದು ಬಂದಿತ್ತು. ಸದ್ಯ, ‘ಖುಷಿ’ ಸಿನಿಮಾದ ಒಂದು ಹಂತದ ಶೂಟಿಂಗ್ ಮಾತ್ರ ಮುಗಿದಿದೆ. ಇದಲ್ಲದೆ, ಹಲವು ಸಿನಿಮಾ ಕೆಲಸಗಳಲ್ಲಿ ಸಮಂತಾ ಬ್ಯುಸಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..