AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ

ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ತಮ್ಮದೇ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅನೇಕರು ಸಮಂತಾ ಬಗ್ಗೆ ಟೀಕೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಅವರು ಕೂಲ್ ಆಗಿಯೇ ಉತ್ತರ ನೀಡುತ್ತಿದ್ದಾರೆ.

‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 27, 2022 | 6:59 PM

Share

ನಟಿ ಸಮಂತಾ ಅವರು (Samantha) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ವಿಚ್ಛೇದನದ ಬಳಿಕ ಅವರು ಸಂಪೂರ್ಣ ಸಮಯವನ್ನು ಗೆಳೆಯರು ಹಾಗೂ ಪ್ರಾಣಿಗಳ ಜತೆ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಪೋಸ್ಟ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಸಮಂತಾ ಅವರು ಇನ್​ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ ಶ್ವಾನದ ಫೋಟೋಗಳನ್ನು ಹಾಕುವುದು ಹೆಚ್ಚಿದೆ. ಇದೇ ವಿಚಾರಕ್ಕೆ ಸಮಂತಾ ಅವರನ್ನು ಟೀಕೆ ಮಾಡಲಾಗಿದೆ. ನಟಿ ಈ ವಿಚಾರಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ.

ಸಮಂತಾ ಅವರು ಕಳೆದ ವರ್ಷ ನಾಗ ಚೈತನ್ಯ ಜತೆಗೆ ವಿಚ್ಛೇದನ ಪಡೆದರು. ಅಕ್ಟೋಬರ್ ತಿಂಗಳಲ್ಲಿ ಈ ಬಗ್ಗೆ ಘೋಷಣೆ ಮಾಡಲಾಯಿತು. ಪ್ರೀತಿಸಿ ಮದುವೆ ಆದ ಇವರು ಬೇರೆ ಆಗುತ್ತಿರುವ ವಿಚಾರ ಅನೇಕರಿಗೆ ನಿಜಕ್ಕೂ ಶಾಕ್ ನೀಡಿತ್ತು. ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ತಮ್ಮದೇ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅನೇಕರು ಸಮಂತಾ ಬಗ್ಗೆ ಟೀಕೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಅವರು ಕೂಲ್ ಆಗಿಯೇ ಉತ್ತರ ನೀಡುತ್ತಿದ್ದಾರೆ.

ಇದನ್ನೂ ಓದಿ
Image
ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Happy Birthday Samantha: ಅಭಿಮಾನಿಗಳು ಸಮಂತಾಗೆ ಫಿದಾ ಆಗಲು ಈ ಚಿತ್ರಗಳೇ ಕಾರಣ..
Image
Samantha: ಸಮಂತಾ ಸ್ಟೈಲ್​ಗಿಲ್ಲ ಸರಿಸಾಟಿ; ಬಗೆಬಗೆಯ ಫ್ಯಾಶನ್ ಅವತಾರದಲ್ಲಿ ಮಿಂಚುವ ನಟಿ- ಫೋಟೋಗಳು ಇಲ್ಲಿವೆ

ಸಮಂತಾ ಅವರು ಶ್ವಾನದ ಜತೆಗೆ ಹೆಚ್ಚು ಸಮಯ ಕಳೆಯುತ್ತಿರುವ ಬಗ್ಗೆ ಅಭಿಮಾನಿಯೋರ್ವ ವ್ಯಂಗ್ಯವಾಡಿದ್ದ. ‘ನಾಯಿ ಮತ್ತು ಬೆಕ್ಕುಗಳ ಜತೆ ಸಮಂತಾ ಒಂಟಿಯಾಗಿ ಸಾಯುತ್ತಾಳೆ’ ಎಂದು ಬರೆದುಕೊಂಡಿದ್ದ. ಇದಕ್ಕೆ ಸಮಂತಾ ಸಿಟ್ಟು ಮಾಡಿಕೊಳ್ಳಲಿಲ್ಲ. ಬದಲಿಗೆ ‘ನಾನು ಅದೃಷ್ಟಶಾಲಿ ಎಂದುಕೊಳ್ಳುತ್ತೇನೆ’ ಎಂದಷ್ಟೇ ಹೇಳಿದ್ದಾರೆ. ಸಮಂತಾ ಉತ್ತರಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಸಮಂತಾ ಇತ್ತೀಚೆಗೆ ‘ಖುಷಿ’ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸುತ್ತಿದ್ದಾರೆ. ಶೂಟಿಂಗ್ ವೇಳೆ ಕಾರು ನೀರಿಗೆ ಬಿದ್ದಿದೆ, ಸಮಂತಾ ಹಾಗೂ ವಿಜಯ್​ಗೆ ಗಾಯಗಳಾಗಿವೆ ಎಂದು ವರದಿ ಆಗಿತ್ತು. ಆದರೆ, ಈ ವರದಿ ಸುಳ್ಳು ಎಂಬುದು ನಂತರ ತಿಳಿದು ಬಂದಿತ್ತು. ಸದ್ಯ, ‘ಖುಷಿ’ ಸಿನಿಮಾದ ಒಂದು ಹಂತದ ಶೂಟಿಂಗ್ ಮಾತ್ರ ಮುಗಿದಿದೆ. ಇದಲ್ಲದೆ, ಹಲವು ಸಿನಿಮಾ ಕೆಲಸಗಳಲ್ಲಿ ಸಮಂತಾ ಬ್ಯುಸಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?