AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಮತ್ತೆ ಅನಾರೋಗ್ಯವೇ?

Samantha: ನಟಿ ಸಮಂತಾ ಆಮ್ಲಜನಕ ನಳಿಕೆ ಹಾಕಿಕೊಂಡಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಮಂತಾಗೆ ಮತ್ತೆ ಅನಾರೋಗ್ಯ ಕಾಡುತ್ತಿದೆಯೇ ಎಂದು ಅಭಿಮಾನಿಗಳು ಆತಂಕಿತರಾಗಿದ್ದಾರೆ.

Samantha: ಸಮಂತಾಗೆ ಮತ್ತೆ ಅನಾರೋಗ್ಯವೇ?
ಸಮಂತಾ
ಮಂಜುನಾಥ ಸಿ.
|

Updated on: Apr 27, 2023 | 6:02 PM

Share

ಸಮಂತಾಗೆ (Samantha) ಆರೋಗ್ಯ ಸರಿಯಿಲ್ಲ ಎಂಬ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಿರುವೆ. ಅನಾರೋಗ್ಯದ ನಡುವೆಯೇ ಯಶೋಧ ಸಿನಿಮಾದ ಚಿತ್ರೀಕರಣ (Shooting) ಮುಗಿಸಿದ್ದ ನಟಿ ಸಮಂತಾ ಆ ಬಳಿಕ ಆಸ್ಪತ್ರೆಗೆ (Health) ದಾಖಲಾಗಿ ಚಿಕಿತ್ಸೆ, ವಿಶ್ರಾಂತಿಗಳ ಬಳಿಕ ಚೇತರಿಸಿಕೊಂಡಿದ್ದರು. ಅದಾದ ಬಳಿಕ ಇತ್ತೀಚೆಗೆ ಶಾಕುಂತಲಂ ಸಿನಿಮಾದ ಪ್ರಚಾರ ಸಂದರ್ಭದಲ್ಲಿಯೂ ಸಮಂತಾಗೆ ಮತ್ತೆ ಅನಾರೋಗ್ಯ ಕಾಡಿತ್ತು. ಇದೀಗ ಸಮಂತಾ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಚಿತ್ರದಲ್ಲಿ ಸಮಂತಾ ಮುಖಕ್ಕೆ ಆಮ್ಲಜನಕದ ಮಾಸ್ಕ್ ಹಾಕಿಕೊಂಡಿದ್ದಾರೆ. ಸಮಂತಾಗೆ ಮತ್ತೆ ಅನಾರೋಗ್ಯ ಕಾಡುತ್ತಿದೆಯೇ ಎಂದು ಅಭಿಮಾನಿಗಳು ಆತಂಕಿತರಾಗಿದ್ದಾರೆ. ಆದರೆ ಅಂಥಹದ್ದೇನೂ ಆಗಿಲ್ಲ.

ಸಮಂತಾ ಆಮ್ಲಜನಕದ ಮಾಸ್ಕ್ ಹಾಕಿಕೊಂಡಿರುವುದು ಅನಾರೋಗ್ಯದ ಕಾರಣಕ್ಕಲ್ಲ ಬದಲಿಗೆ ಆರೋಗ್ಯ ಸುಧಾರಣೆಯ ಕಾರಣಕ್ಕೆ. ಪದೇ ಅನಾರೋಗ್ಯಕ್ಕೆ ಈಡಾಗುವ ಸಮಂತಾ, ದೇಹದ ರೋಗನಿರೋಧಕ ಶಕ್ತಿ ಹೆಚ್ಚು ಮಾಡಿಕೊಳ್ಳಲು ಹಾಗೂ ದೇಹದಲ್ಲಿರುಬಹುದಾದ ಇನ್​ಫೆಕ್ಷನ್ ಅನ್ನು ದೂರ ಮಾಡಿಕೊಳ್ಳಲು ಚಿಕತ್ಸೆಯೊಂದನ್ನು ಪಡೆದುಕೊಳ್ಳುತ್ತಿದ್ದಾರೆ. ಅದರ ಭಾಗವಾಗಿಯೇ ಆಕ್ಸಿಜನ್ ಮಾಸ್ಕ್ ಹಾಕಿಕೊಂಡಿದ್ದಾರೆ.

ಸಮಂತಾ ಪ್ರಸ್ತುತ ಎಚ್​ಬೋಟ್ ಥೆರಪಿ ಅಥವಾ ಹೈಪರ್ ಬ್ಯಾರಿಕ್ ಥೆರಪಿಗೆ ಒಳಗಾಗಿದ್ದಾರೆ. ಈ ಚಿಕಿತ್ಸಾ ವಿಧಾನದಲ್ಲಿ ಆಮ್ಲಜನಕವನ್ನು ನಿರ್ದಿಷ್ಟ ಒತ್ತಡದಲ್ಲಿ ಮೂಗು, ಬಾಯಿಯ ಮೂಲಕ ದೇಹದ ಒಳಕ್ಕೆ ಹರಿಸಲಾಗುತ್ತದೆ. ಇದು ದೇಹದಲ್ಲಿನ ಜೀವಕೋಶಗಳಿಗೆ ಶಕ್ತಿ ತುಂಬಿ ರೋಗನಿರೋಧಕ ಶಕ್ತಿಯನ್ನು ಉಲ್ಬಣಗೊಳಿಸುತ್ತದೆ. ಹಾಗೂ ದೇಹದ ಒಳಗೆ ಇರಬಹುದಾದ ಸೋಂಕನ್ನು ಗುಣಪಡಿಸುತ್ತದೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗೆ ಸಮಂತಾ ಈಡಾಗಿದ್ದರು. ಅವರಿಗೆ ಮಯೋಸಿಟ್ಸ್ ಹೆಸರಿನ ಸಮಸ್ಯೆ ಕಾಣಿಸಿಕೊಂಡಿತ್ತು. ಇದು ತೀವ್ರ ಬಲಹೀನತೆಯನ್ನು ರೋಗಿಗೆ ತರುತ್ತದೆ. ಸಣ್ಣ ಕೆಲಸವನ್ನೂ ತನ್ನಂತಾನೆ ಮಾಡಿಕೊಳ್ಳಲಾಗುವುದಿಲ್ಲ. ಚೇರು ಎಳೆಯುವುದು, ಲೋಟ ಎತ್ತುವುದಕ್ಕೂ ಆಗದ ಸ್ಥಿತಿ ನಿರ್ಮಾಣವಾಗುತ್ತದೆ. ನಟಿ ಸಮಂತಾ ಈ ರೀತಿಯ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಆದರೆ ಸತತ ಚಿಕಿತ್ಸೆ, ವಿಶ್ರಾಂತಿಯ ಬಳಿಕ ಸಮಸ್ಯೆಯಿಂದ ಹೊರಬಂದರು.

ಇದನ್ನೂ ಓದಿ:ಸೌಂದರ್ಯ ಉದಾಹರಣೆ ನೀಡಿ ಸಮಂತಾಗೆ ಟಾಂಗ್ ಕೊಟ್ಟ ಚಿಟ್ಟಿಬಾಬು, ಕರ್ಣ ಕೇಶದ ಬಗ್ಗೆಯೂ ಮಾತು

ಶಾಕುಂತಲಂ ಸಿನಿಮಾದ ಪ್ರಚಾರದ ಸಮಯದಲ್ಲಿ ತಾವು ಮಯೋಸಿಟ್ಸ್ ನಿಂದ ಬಹುತೇಕ ಗುಣವಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತು, ಇದರಿಂದ ಕೊನೆಯ ಹಂತದಲ್ಲಿ ಪ್ರಚಾರದಿಂದ ಸಮಂತಾ ದೂರ ಉಳಿಯಬೇಕಾಯಿತು. ಆದರೆ ಶೀಘ್ರವಾಗಿ ಚೇತರಿಸಿಕೊಂಡ ಸಮಂತಾ ಲಂಡನ್​ಗೆ ತೆರಳಿ ಸಿಟಾಡೆಲ್ ವೆಬ್ ಸರಣಿಯ ಪ್ರೀಮಿಯರ್ ಶೋನಲ್ಲಿ ಭಾಗವಹಿಸಿದರು.

ಸಮಂತಾ ಹಲವು ಸಿನಿಮಾಗಳನ್ನು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರು ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಯಶೋಧ ಹಾಗೂ ಶಾಕುಂತಲಂ ಸಿನಿಮಾಗಳು ಒಂದರ ಹಿಂದೊಂದು ಬಿಡುಗಡೆ ಆಗಿ ಫ್ಲಾಪ್ ಆಗಿವೆ. ಇದೀಗ ವಿಜಯ್ ದೇವರಕೊಂಡ ಜೊತೆಗೆ ಖುಷಿ ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದಾರೆ. ಇದರ ಜೊತೆಗೆ ಸಿಟಾಡೆಲ್​ ವೆಬ್ ಸರಣಿಯ ಹಿಂದಿ ಆವೃತ್ತಿಯಲ್ಲಿಯೂ ನಟಿಸುತ್ತಿದ್ದಾರೆ. ಇವುಗಳ ಬಳಿಕ ಒಂದು ಹಿಂದಿ ಸಿನಿಮಾ ಹಾಗೂ ಒಂದು ಇಂಗ್ಲೀಷ್ ಸಿನಿಮಾದಲ್ಲಿ ಸಮಂತಾ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ