‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ
ಡಾ. ಸಿ.ಎಲ್​. ವೆಂಕಟ್ ಮತ್ತು ಸಮಂತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 24, 2021 | 4:55 PM

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಾರೆ. ಇವರು ಬೇರೆ ಆಗೋಕೆ ಕಾರಣ ಏನು ಎಂಬುದು ಮಾತ್ರ ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಅಕ್ಕಿನೇನಿ ಕುಟುಂಬದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲ. ಸಮಂತಾ ಕೂಡ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಸಮಂತಾ ಬಗ್ಗೆ ವೈದ್ಯರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅವರಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದರು. ಆದರೆ, ಈಗ ವರಸೆ ಬದಲಿಸಿದ್ದಾರೆ.

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು. ಈ ವಿಚಾರದಲ್ಲಿ ಸಮಂತಾ ಸುಮ್ಮನೆ ಕೂತಿಲ್ಲ. ವೆಂಕಟ್​ ರಾವ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಯಾವಾಗ ವಿಚಾರ ಕೋರ್ಟ್​ ಮೆಟ್ಟಿಲೇರಿತೋ ಆಗ, ವೆಂಕಟ್​ ರಾವ್ ತಮ್ಮ ಮಾತು ಬದಲಿಸಿದ್ದಾರೆ.

‘ಸಮಂತಾ ನನ್ನ ಮೊಮ್ಮಗಳು ಇದ್ದಂತೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ನನ್ನ ಬೆಂಬಲ ಸದಾ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಬಂದ ಪೋಸ್ಟ್​ಗಳನ್ನು ನೋಡಿ ನಾನು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆ ನೀಡಿದೆ’ ಎಂದು ವರಸೆ ಬದಲಿಸಿದ್ದಾರೆ ಡಾ. ಸಿ.ಎಲ್​. ವೆಂಕಟ್​ ರಾವ್.

ಮಾನ ಹಾನಿ ಮಾಡಿದ ಆರೋಪದಲ್ಲಿ  ಸಮಂತಾ ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ  ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣದ​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ‘ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು’ ಎಂದು ಕೋರ್ಟ್​ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್