AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ
ಡಾ. ಸಿ.ಎಲ್​. ವೆಂಕಟ್ ಮತ್ತು ಸಮಂತಾ
TV9 Web
| Edited By: |

Updated on: Oct 24, 2021 | 4:55 PM

Share

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಾರೆ. ಇವರು ಬೇರೆ ಆಗೋಕೆ ಕಾರಣ ಏನು ಎಂಬುದು ಮಾತ್ರ ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಅಕ್ಕಿನೇನಿ ಕುಟುಂಬದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲ. ಸಮಂತಾ ಕೂಡ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಸಮಂತಾ ಬಗ್ಗೆ ವೈದ್ಯರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅವರಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದರು. ಆದರೆ, ಈಗ ವರಸೆ ಬದಲಿಸಿದ್ದಾರೆ.

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು. ಈ ವಿಚಾರದಲ್ಲಿ ಸಮಂತಾ ಸುಮ್ಮನೆ ಕೂತಿಲ್ಲ. ವೆಂಕಟ್​ ರಾವ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಯಾವಾಗ ವಿಚಾರ ಕೋರ್ಟ್​ ಮೆಟ್ಟಿಲೇರಿತೋ ಆಗ, ವೆಂಕಟ್​ ರಾವ್ ತಮ್ಮ ಮಾತು ಬದಲಿಸಿದ್ದಾರೆ.

‘ಸಮಂತಾ ನನ್ನ ಮೊಮ್ಮಗಳು ಇದ್ದಂತೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ನನ್ನ ಬೆಂಬಲ ಸದಾ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಬಂದ ಪೋಸ್ಟ್​ಗಳನ್ನು ನೋಡಿ ನಾನು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆ ನೀಡಿದೆ’ ಎಂದು ವರಸೆ ಬದಲಿಸಿದ್ದಾರೆ ಡಾ. ಸಿ.ಎಲ್​. ವೆಂಕಟ್​ ರಾವ್.

ಮಾನ ಹಾನಿ ಮಾಡಿದ ಆರೋಪದಲ್ಲಿ  ಸಮಂತಾ ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ  ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣದ​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ‘ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು’ ಎಂದು ಕೋರ್ಟ್​ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ