AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ
ಡಾ. ಸಿ.ಎಲ್​. ವೆಂಕಟ್ ಮತ್ತು ಸಮಂತಾ
TV9 Web
| Edited By: |

Updated on: Oct 24, 2021 | 4:55 PM

Share

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಾರೆ. ಇವರು ಬೇರೆ ಆಗೋಕೆ ಕಾರಣ ಏನು ಎಂಬುದು ಮಾತ್ರ ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಅಕ್ಕಿನೇನಿ ಕುಟುಂಬದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲ. ಸಮಂತಾ ಕೂಡ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಸಮಂತಾ ಬಗ್ಗೆ ವೈದ್ಯರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅವರಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದರು. ಆದರೆ, ಈಗ ವರಸೆ ಬದಲಿಸಿದ್ದಾರೆ.

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು. ಈ ವಿಚಾರದಲ್ಲಿ ಸಮಂತಾ ಸುಮ್ಮನೆ ಕೂತಿಲ್ಲ. ವೆಂಕಟ್​ ರಾವ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಯಾವಾಗ ವಿಚಾರ ಕೋರ್ಟ್​ ಮೆಟ್ಟಿಲೇರಿತೋ ಆಗ, ವೆಂಕಟ್​ ರಾವ್ ತಮ್ಮ ಮಾತು ಬದಲಿಸಿದ್ದಾರೆ.

‘ಸಮಂತಾ ನನ್ನ ಮೊಮ್ಮಗಳು ಇದ್ದಂತೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ನನ್ನ ಬೆಂಬಲ ಸದಾ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಬಂದ ಪೋಸ್ಟ್​ಗಳನ್ನು ನೋಡಿ ನಾನು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆ ನೀಡಿದೆ’ ಎಂದು ವರಸೆ ಬದಲಿಸಿದ್ದಾರೆ ಡಾ. ಸಿ.ಎಲ್​. ವೆಂಕಟ್​ ರಾವ್.

ಮಾನ ಹಾನಿ ಮಾಡಿದ ಆರೋಪದಲ್ಲಿ  ಸಮಂತಾ ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ  ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣದ​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ‘ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು’ ಎಂದು ಕೋರ್ಟ್​ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ