AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ
ಡಾ. ಸಿ.ಎಲ್​. ವೆಂಕಟ್ ಮತ್ತು ಸಮಂತಾ
TV9 Web
| Edited By: |

Updated on: Oct 24, 2021 | 4:55 PM

Share

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಾರೆ. ಇವರು ಬೇರೆ ಆಗೋಕೆ ಕಾರಣ ಏನು ಎಂಬುದು ಮಾತ್ರ ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಅಕ್ಕಿನೇನಿ ಕುಟುಂಬದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲ. ಸಮಂತಾ ಕೂಡ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಸಮಂತಾ ಬಗ್ಗೆ ವೈದ್ಯರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅವರಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದರು. ಆದರೆ, ಈಗ ವರಸೆ ಬದಲಿಸಿದ್ದಾರೆ.

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು. ಈ ವಿಚಾರದಲ್ಲಿ ಸಮಂತಾ ಸುಮ್ಮನೆ ಕೂತಿಲ್ಲ. ವೆಂಕಟ್​ ರಾವ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಯಾವಾಗ ವಿಚಾರ ಕೋರ್ಟ್​ ಮೆಟ್ಟಿಲೇರಿತೋ ಆಗ, ವೆಂಕಟ್​ ರಾವ್ ತಮ್ಮ ಮಾತು ಬದಲಿಸಿದ್ದಾರೆ.

‘ಸಮಂತಾ ನನ್ನ ಮೊಮ್ಮಗಳು ಇದ್ದಂತೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ನನ್ನ ಬೆಂಬಲ ಸದಾ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಬಂದ ಪೋಸ್ಟ್​ಗಳನ್ನು ನೋಡಿ ನಾನು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆ ನೀಡಿದೆ’ ಎಂದು ವರಸೆ ಬದಲಿಸಿದ್ದಾರೆ ಡಾ. ಸಿ.ಎಲ್​. ವೆಂಕಟ್​ ರಾವ್.

ಮಾನ ಹಾನಿ ಮಾಡಿದ ಆರೋಪದಲ್ಲಿ  ಸಮಂತಾ ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ  ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣದ​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ‘ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು’ ಎಂದು ಕೋರ್ಟ್​ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ