AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರು ಹಾಳು ಮಾಡಲು ಪ್ರಯತ್ನಿಸಿದವರಿಗೆ ತಿರುಗೇಟು ಕೊಟ್ಟ ಸಮಂತಾ

ನಟಿ ಸಮಂತಾ ಅವರ ಬಾಳಲ್ಲಿ ನಡೆದ ಘಟನೆಗಳ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ಅವರು ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದರು. ನಾಗ ಚೈತನ್ಯ ಅವರು ಇತ್ತೀಚೆಗೆ ನಟಿ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಸಮಂತಾ ನೋವಿಗೆ ಒಳಗಾಗಿದ್ದಾರೆ.

ಹೆಸರು ಹಾಳು ಮಾಡಲು ಪ್ರಯತ್ನಿಸಿದವರಿಗೆ ತಿರುಗೇಟು ಕೊಟ್ಟ ಸಮಂತಾ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Aug 16, 2024 | 6:54 AM

Share

ನಟಿ ಸಮಂತಾ ರುತ್ ಪ್ರಭು ಬಗ್ಗೆ ಹರಿದಾಡೋ ವದಂತಿಗಳು ಒಂದೆರಡಲ್ಲ. ಇತ್ತೀಚೆಗೆ ಅವರಿಗೆ ನೋವಾಗುವಂಥ ಘಟನೆ ಒಂದು ನಡೆಯಿತು. ಅವರ ಮಾಜಿ ಪತಿ ನಾಗ ಚೈತನ್ಯ ಅವರು ಎಂಗೇಜ್​ಮೆಂಟ್ ಮಾಡಿಕೊಂಡರು. ಈ ಬೆನ್ನಲ್ಲೇ ಸಮಂತಾ ಬಗ್ಗೆ ಅಪಪ್ರಚಾರ ಮಾಡುವ ಕೆಲಸವೂ ನಡೆದಿದೆ. ಸಮಂತಾ ಅವರು ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಇದಕ್ಕೆ ಸಮಂತಾ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಪರೋಕ್ಷವಾಗಿ ಅವರು ಈ ವಿಚಾರದ ಬಗ್ಗೆ ಮಾತನಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಸಮಂತಾ ಅವರು ಹೂಡಿ ಧರಿಸಿ ಪೋಸ್ ಕೊಟ್ಟಿದ್ದಾರೆ. ಈ ಹೂಡಿ ಮೇಲೆ ಅವರು ‘ಶಾಂತಿ ಸಂಗ್ರಹಾಲಯ’ ಎಂಬರ್ಥ ಬರೋ ಸಾಲುಗಳು ಬರೆದುಕೊಂಡಿದೆ. ಇದನ್ನು ಅನೇಕರು ನಾನಾ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ಯಾರು ಎಷ್ಟೇ ವದಂತಿ ಹಬ್ಬಿಸಿದರೂ ತಾವು ಕೂಲ್ ಆಗಿ ಇರೋದಾಗಿ ಅವರು ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಪಡೆದಿದ್ದಾರೆ. ಇದರ ಜೊತೆಗೆ ಅವರಿಗೆ ಒಂದಷ್ಟು ವೈರಿಗಳು ಕೂಡ ಹುಟ್ಟಿಕೊಂಡಿದ್ದಾರೆ. ನಾಗ ಚೈತನ್ಯ ಅವರಿಂದ ದೂರಾದ ತಕ್ಷಣ ಅವರನ್ನು ಒಂದಷ್ಟು ಮಂದಿ ದ್ವೇಷಿಸೋಕೆ ಪ್ರಾರಂಭಿಸಿದ್ದಾರೆ. ಈ ದ್ವೇಷದ ಹಿಂದಿನ ಉದ್ದೇಶ ಏನು ಎಂಬುದು ಸಮಂತಾ ಫ್ಯಾನ್ಸ್​ಗೆ ಅರ್ಥ ಆಗುತ್ತಿಲ್ಲ. ಸಮಂತಾ ಬಗ್ಗೆ ಅವರು ಇಲ್ಲ-ಸಲ್ಲದ ಆರೋಪ ಹೊರಿಸುತ್ತಾ ಬರುತ್ತಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ಅವರಿಂದ ಸಮಂತಾ ಪಡೆದಿದ್ದ ಜೀವನಾಂಶ ಎಷ್ಟು ಕೋಟಿ ರೂಪಾಯಿ?

ಸಮಂತಾ ಅವರು ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯ ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿತ್ತು. ಇದರ ಹಿಂದೆ ಯಾರಿದ್ದಾರೆ? ಈ ವದಂತಿಯನ್ನು ಹಬ್ಬಿಸಿದವರು ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ. ಸಮಂತಾ ಹೆಸರನ್ನು ಹಾಳು ಮಾಡಲು ಯಾರೋ ಮಾಡಿದ ಕುತಂತ್ರ ಇದು ಎಂದು ಅನೇಕರು ಊಹಿಸಿದ್ದಾರೆ. ಸಮಂತಾ ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಇದಕ್ಕಾಗಿ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ