AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರು ಹಾಳು ಮಾಡಲು ಪ್ರಯತ್ನಿಸಿದವರಿಗೆ ತಿರುಗೇಟು ಕೊಟ್ಟ ಸಮಂತಾ

ನಟಿ ಸಮಂತಾ ಅವರ ಬಾಳಲ್ಲಿ ನಡೆದ ಘಟನೆಗಳ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ಅವರು ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದರು. ನಾಗ ಚೈತನ್ಯ ಅವರು ಇತ್ತೀಚೆಗೆ ನಟಿ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಸಮಂತಾ ನೋವಿಗೆ ಒಳಗಾಗಿದ್ದಾರೆ.

ಹೆಸರು ಹಾಳು ಮಾಡಲು ಪ್ರಯತ್ನಿಸಿದವರಿಗೆ ತಿರುಗೇಟು ಕೊಟ್ಟ ಸಮಂತಾ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Aug 16, 2024 | 6:54 AM

Share

ನಟಿ ಸಮಂತಾ ರುತ್ ಪ್ರಭು ಬಗ್ಗೆ ಹರಿದಾಡೋ ವದಂತಿಗಳು ಒಂದೆರಡಲ್ಲ. ಇತ್ತೀಚೆಗೆ ಅವರಿಗೆ ನೋವಾಗುವಂಥ ಘಟನೆ ಒಂದು ನಡೆಯಿತು. ಅವರ ಮಾಜಿ ಪತಿ ನಾಗ ಚೈತನ್ಯ ಅವರು ಎಂಗೇಜ್​ಮೆಂಟ್ ಮಾಡಿಕೊಂಡರು. ಈ ಬೆನ್ನಲ್ಲೇ ಸಮಂತಾ ಬಗ್ಗೆ ಅಪಪ್ರಚಾರ ಮಾಡುವ ಕೆಲಸವೂ ನಡೆದಿದೆ. ಸಮಂತಾ ಅವರು ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಇದಕ್ಕೆ ಸಮಂತಾ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಪರೋಕ್ಷವಾಗಿ ಅವರು ಈ ವಿಚಾರದ ಬಗ್ಗೆ ಮಾತನಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಸಮಂತಾ ಅವರು ಹೂಡಿ ಧರಿಸಿ ಪೋಸ್ ಕೊಟ್ಟಿದ್ದಾರೆ. ಈ ಹೂಡಿ ಮೇಲೆ ಅವರು ‘ಶಾಂತಿ ಸಂಗ್ರಹಾಲಯ’ ಎಂಬರ್ಥ ಬರೋ ಸಾಲುಗಳು ಬರೆದುಕೊಂಡಿದೆ. ಇದನ್ನು ಅನೇಕರು ನಾನಾ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ಯಾರು ಎಷ್ಟೇ ವದಂತಿ ಹಬ್ಬಿಸಿದರೂ ತಾವು ಕೂಲ್ ಆಗಿ ಇರೋದಾಗಿ ಅವರು ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಪಡೆದಿದ್ದಾರೆ. ಇದರ ಜೊತೆಗೆ ಅವರಿಗೆ ಒಂದಷ್ಟು ವೈರಿಗಳು ಕೂಡ ಹುಟ್ಟಿಕೊಂಡಿದ್ದಾರೆ. ನಾಗ ಚೈತನ್ಯ ಅವರಿಂದ ದೂರಾದ ತಕ್ಷಣ ಅವರನ್ನು ಒಂದಷ್ಟು ಮಂದಿ ದ್ವೇಷಿಸೋಕೆ ಪ್ರಾರಂಭಿಸಿದ್ದಾರೆ. ಈ ದ್ವೇಷದ ಹಿಂದಿನ ಉದ್ದೇಶ ಏನು ಎಂಬುದು ಸಮಂತಾ ಫ್ಯಾನ್ಸ್​ಗೆ ಅರ್ಥ ಆಗುತ್ತಿಲ್ಲ. ಸಮಂತಾ ಬಗ್ಗೆ ಅವರು ಇಲ್ಲ-ಸಲ್ಲದ ಆರೋಪ ಹೊರಿಸುತ್ತಾ ಬರುತ್ತಿದ್ದಾರೆ.

ಇದನ್ನೂ ಓದಿ: ನಾಗ ಚೈತನ್ಯ ಅವರಿಂದ ಸಮಂತಾ ಪಡೆದಿದ್ದ ಜೀವನಾಂಶ ಎಷ್ಟು ಕೋಟಿ ರೂಪಾಯಿ?

ಸಮಂತಾ ಅವರು ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯ ನಿರ್ದೇಶಕ ರಾಜ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿತ್ತು. ಇದರ ಹಿಂದೆ ಯಾರಿದ್ದಾರೆ? ಈ ವದಂತಿಯನ್ನು ಹಬ್ಬಿಸಿದವರು ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ. ಸಮಂತಾ ಹೆಸರನ್ನು ಹಾಳು ಮಾಡಲು ಯಾರೋ ಮಾಡಿದ ಕುತಂತ್ರ ಇದು ಎಂದು ಅನೇಕರು ಊಹಿಸಿದ್ದಾರೆ. ಸಮಂತಾ ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಇದಕ್ಕಾಗಿ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ