AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ಸಮಂತಾ ಹೊಸ ವಿಡಿಯೋ; ಅಭಿಮಾನಿಗಳು ಫಿದಾ

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ಪ್ರೋಮೋ ರಿಲೀಸ್​ ಆಗಿ ಸದ್ದು ಮಾಡುತ್ತಿದೆ. ಪಡ್ಡೆ ಹುಡುಗರಿಗೆ ನಶೆ ಏರಿಸುವಂತಿರುವ ಈ ಹಾಡಿನಲ್ಲಿ ಸಮಂತಾ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ಸಮಂತಾ ಹೊಸ ವಿಡಿಯೋ; ಅಭಿಮಾನಿಗಳು ಫಿದಾ
TV9 Web
| Edited By: |

Updated on: Dec 13, 2021 | 3:43 PM

Share

ಸದ್ಯ ಎಲ್ಲೆಲ್ಲೂ ಸಮಂತಾ ಅವರದ್ದೇ ಹವಾ. ‘ಪುಷ್ಪ’ ಸಿನಿಮಾದಲ್ಲಿ ಅವರು ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಸಖತ್​ ಹಿಟ್​ ಆಗಿದೆ. ಈ ಲಿರಿಕಲ್​ ಹಾಡನ್ನು ಬರೋಬ್ಬರಿ 2.1 ಕೋಟಿ ಜನರು ವೀಕ್ಷಣೆ ಮಾಡಿದ್ದಾರೆ. ರಿಲೀಸ್​ ಆಗಿ ಒಂದು ದಿನ ಕಳೆಯುವುದರೊಳಗೆ 10 ಮಿಲಿಯನ್​ (1 ಕೋಟಿಗೂ) ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಈ ಗೀತೆಯ ಹೆಚ್ಚುಗಾರಿಕೆ. ಇದರಿಂದಾಗಿ ‘ಪುಷ್ಪ’ ಸಿನಿಮಾದ ಹವಾ ಹೆಚ್ಚಾಗಿದೆ. ಚಿತ್ರದ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ಹೀಗಿರುವಾಗಲೇ ವಿಡಿಯೋ ಸಾಂಗ್​ನ ಪ್ರೋಮೋ ರಿಲೀಸ್​ ಮಾಡಲಾಗಿದೆ. ಇದರಲ್ಲಿ ಸಮಂತಾ ಬೋಲ್ಡ್​ ಆಗಿ ಹೆಜ್ಜೆ ಹಾಕಿದ್ದಾರೆ. ಹಾಡಿನಲ್ಲಿ ಕೇವಲ ಸಮಂತಾ ಫೋಟೋ ನೋಡಿದ್ದ ಅಭಿಮಾನಿಗಳು ಈಗ ಅವರ ಡ್ಯಾನ್ಸ್​ ಕಣ್ತುಂಬಿಕೊಂಡಿದ್ದಾರೆ.

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ಪ್ರೋಮೋ ರಿಲೀಸ್​ ಆಗಿ ಸದ್ದು ಮಾಡುತ್ತಿದೆ. ಪಡ್ಡೆ ಹುಡುಗರಿಗೆ ನಶೆ ಏರಿಸುವಂತಿರುವ ಈ ಹಾಡಿನಲ್ಲಿ ಸಮಂತಾ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ಸಾಂಗ್​ ಬಿಡುಗಡೆ ಆಗಲಿ ಎಂದು ಕಾದಿದ್ದವರ ಕುತೂಹಲ ಈಗ ಮತ್ತಷ್ಟು ಹೆಚ್ಚಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದಲ್ಲದೇ ಸಮಂತಾಗೆ ಇಂಗ್ಲಿಷ್​ ಸಿನಿಮಾಗಳಿಂದಲೂ ಆಫರ್​ ಬಂದಿದೆ. ಇತ್ತೀಚೆಗೆ ಅವರು ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಸಿನಿಮಾಗೆ ಆಯ್ಕೆಯಾದ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಆ ಚಿತ್ರಕ್ಕೆ ಖ್ಯಾತ ನಿರ್ದೇಶಕ ಫಿಲಪ್​ ಜಾನ್​ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾದಲ್ಲಿ ಸಮಂತಾ ಅವರು ದ್ವಿಲಿಂಗಿ ಪಾತ್ರ ಮಾಡಲಿದ್ದಾರೆ. ಅಂದರೆ, ಗಂಡು ಮತ್ತು ಹೆಣ್ಣು ಇಬ್ಬರಲ್ಲೂ ಲೈಂಗಿಕ ಆಸಕ್ತಿ ಹೊಂದಿರುವ ಮಹಿಳೆಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ನನ್ನ ಪ್ರಕಾರ ಆ ಬಗ್ಗೆ ಮಾತನ್ನು ಮುಗಿಸಿದ್ದೇನೆ: ವಿಚ್ಛೇದನದ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಸಮಂತಾ

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ