AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ಸಮಂತಾ ಹೊಸ ವಿಡಿಯೋ; ಅಭಿಮಾನಿಗಳು ಫಿದಾ

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ಪ್ರೋಮೋ ರಿಲೀಸ್​ ಆಗಿ ಸದ್ದು ಮಾಡುತ್ತಿದೆ. ಪಡ್ಡೆ ಹುಡುಗರಿಗೆ ನಶೆ ಏರಿಸುವಂತಿರುವ ಈ ಹಾಡಿನಲ್ಲಿ ಸಮಂತಾ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ಸಮಂತಾ ಹೊಸ ವಿಡಿಯೋ; ಅಭಿಮಾನಿಗಳು ಫಿದಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 13, 2021 | 3:43 PM

Share

ಸದ್ಯ ಎಲ್ಲೆಲ್ಲೂ ಸಮಂತಾ ಅವರದ್ದೇ ಹವಾ. ‘ಪುಷ್ಪ’ ಸಿನಿಮಾದಲ್ಲಿ ಅವರು ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಸಖತ್​ ಹಿಟ್​ ಆಗಿದೆ. ಈ ಲಿರಿಕಲ್​ ಹಾಡನ್ನು ಬರೋಬ್ಬರಿ 2.1 ಕೋಟಿ ಜನರು ವೀಕ್ಷಣೆ ಮಾಡಿದ್ದಾರೆ. ರಿಲೀಸ್​ ಆಗಿ ಒಂದು ದಿನ ಕಳೆಯುವುದರೊಳಗೆ 10 ಮಿಲಿಯನ್​ (1 ಕೋಟಿಗೂ) ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಈ ಗೀತೆಯ ಹೆಚ್ಚುಗಾರಿಕೆ. ಇದರಿಂದಾಗಿ ‘ಪುಷ್ಪ’ ಸಿನಿಮಾದ ಹವಾ ಹೆಚ್ಚಾಗಿದೆ. ಚಿತ್ರದ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ಹೀಗಿರುವಾಗಲೇ ವಿಡಿಯೋ ಸಾಂಗ್​ನ ಪ್ರೋಮೋ ರಿಲೀಸ್​ ಮಾಡಲಾಗಿದೆ. ಇದರಲ್ಲಿ ಸಮಂತಾ ಬೋಲ್ಡ್​ ಆಗಿ ಹೆಜ್ಜೆ ಹಾಕಿದ್ದಾರೆ. ಹಾಡಿನಲ್ಲಿ ಕೇವಲ ಸಮಂತಾ ಫೋಟೋ ನೋಡಿದ್ದ ಅಭಿಮಾನಿಗಳು ಈಗ ಅವರ ಡ್ಯಾನ್ಸ್​ ಕಣ್ತುಂಬಿಕೊಂಡಿದ್ದಾರೆ.

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ಪ್ರೋಮೋ ರಿಲೀಸ್​ ಆಗಿ ಸದ್ದು ಮಾಡುತ್ತಿದೆ. ಪಡ್ಡೆ ಹುಡುಗರಿಗೆ ನಶೆ ಏರಿಸುವಂತಿರುವ ಈ ಹಾಡಿನಲ್ಲಿ ಸಮಂತಾ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ಸಾಂಗ್​ ಬಿಡುಗಡೆ ಆಗಲಿ ಎಂದು ಕಾದಿದ್ದವರ ಕುತೂಹಲ ಈಗ ಮತ್ತಷ್ಟು ಹೆಚ್ಚಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದಲ್ಲದೇ ಸಮಂತಾಗೆ ಇಂಗ್ಲಿಷ್​ ಸಿನಿಮಾಗಳಿಂದಲೂ ಆಫರ್​ ಬಂದಿದೆ. ಇತ್ತೀಚೆಗೆ ಅವರು ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಸಿನಿಮಾಗೆ ಆಯ್ಕೆಯಾದ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಆ ಚಿತ್ರಕ್ಕೆ ಖ್ಯಾತ ನಿರ್ದೇಶಕ ಫಿಲಪ್​ ಜಾನ್​ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾದಲ್ಲಿ ಸಮಂತಾ ಅವರು ದ್ವಿಲಿಂಗಿ ಪಾತ್ರ ಮಾಡಲಿದ್ದಾರೆ. ಅಂದರೆ, ಗಂಡು ಮತ್ತು ಹೆಣ್ಣು ಇಬ್ಬರಲ್ಲೂ ಲೈಂಗಿಕ ಆಸಕ್ತಿ ಹೊಂದಿರುವ ಮಹಿಳೆಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ನನ್ನ ಪ್ರಕಾರ ಆ ಬಗ್ಗೆ ಮಾತನ್ನು ಮುಗಿಸಿದ್ದೇನೆ: ವಿಚ್ಛೇದನದ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಸಮಂತಾ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ