AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ

ಸಮಂತಾ ಜೀವನ ಈಗ ಸಂಪೂರ್ಣವಾಗಿ ಬದಲಾಗಿದೆ. ಅವರ ಆದ್ಯತೆಗಳು ಬದಲಾಗಿವೆ. ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರದಲ್ಲಿ ಅವರು ಸುಮ್ಮನೆ ಬೇಸರ ಮಾಡಿಕೊಂಡು ಕೂತಿಲ್ಲ. ಸುತ್ತಾಟ ನಡೆಸುತ್ತಾ, ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿ ಎಲ್ಲವನ್ನೂ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ.

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ
TV9 Web
| Edited By: |

Updated on: Jan 05, 2022 | 11:45 AM

Share

ಸಮಂತಾ (Samantha) ಅವರು ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ವಿಚ್ಛೇದನದ ನಂತರದಲ್ಲಿ ಸಮಂತಾ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದರ ಜತೆಗೆ ಗೆಳೆಯರ ಜತೆಯೂ ಸಮಂತಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ದೇಶ, ವಿದೇಶದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ಪ್ರಯುಕ್ತ ಗೆಳೆಯರ ಜತೆ ಅವರು ಗೋವಾಗೆ ತೆರಳಿದ್ದರು. ಅವರು ಈಗ ಅವರ ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ವಿಶೇಷವಾಗಿ ಬರೆದುಕೊಂಡಿದ್ದಾರೆ.

ಸಮಂತಾ ಜೀವನ ಈಗ ಸಂಪೂರ್ಣವಾಗಿ ಬದಲಾಗಿದೆ. ಅವರ ಆದ್ಯತೆಗಳು ಬದಲಾಗಿವೆ. ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರದಲ್ಲಿ ಅವರು ಸುಮ್ಮನೆ ಬೇಸರ ಮಾಡಿಕೊಂಡು ಕೂತಿಲ್ಲ. ಸುತ್ತಾಟ ನಡೆಸುತ್ತಾ, ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿ ಎಲ್ಲವನ್ನೂ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಗೆಳೆಯರ ಜತೆ ಸಮಂತಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

ವೆನ್ನೆಲ್ಲಾ ಕಿಶೋರ್​ ಹಾಗೂ ರಾಹುಲ್​ ರವೀಂದ್ರ ಜತೆ ಸಮಂತಾ ಹರಟೆ ಹೊಡೆಯುತ್ತಾ ಕೂತಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ, ‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’ ಎಂದು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ವೈರಲ್​ ಆಗಿದೆ. ಸಮಂತಾ ಅವರ ಖುಷಿಯನ್ನು ನೋಡಿ ಅಭಿಮಾನಿಗಳು ಸಂತಸಪಟ್ಟಿದ್ದಾರೆ.

ರಾಹುಲ್​ ರವೀಂದ್ರ ಅವರು ನಟ. ಸಮಂತಾ ಆಪ್ತ ಗೆಳತಿ ಚಿನ್ಮಯ್​ ಪ್ರಸಾದ್​ ಅವರ ಪತಿ. ಹೀಗಾಗಿ, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ವೆನ್ನೆಲ್ಲಾ ಕಿಶೋರ್​ ಟಾಲಿವುಡ್​ನ ಖ್ಯಾತ ಕಾಮಿಡಿಯನ್​. ಸಮಂತಾ ಹಾಗೂ ಕಿಶೋರ್​ ನಡುವೆ ಒಳ್ಳೆಯ ಗೆಳೆತನ ಇದೆ.

ಸಿನಿಮಾ ವಿಚಾರದಲ್ಲಿ ಸಮಂತಾ ಬಗ್ಗೆ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿದೆ. ಜ್ಯೂ.ಎನ್​ಟಿಆರ್​, ಮಹೇಶ್​ ಬಾಬು ಮುಂದಿನ ಸಿನಿಮಾಗೆ ಸಮಂತಾ ನಾಯಕಿ ಎನ್ನಲಾಗಿದೆ. ಅಮೇಜಾನ್​ ಪ್ರೈಮ್​ನಲ್ಲಿ ಸಿದ್ಧವಾಗುತ್ತಿರುವ ವೆಬ್​ ಸೀರಿಸ್​ನಲ್ಲಿ ಸಮಂತಾ ನಟಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ರಾಜ್​ ಮತ್ತು ಡಿಕೆ ನಿರ್ದೇಶನ ಇರಲಿದೆಯಂತೆ. ಇದಲ್ಲದೆ, ಹಲವು ಸಿನಿಮಾಗಳ ಕೆಲಸಗಳು ಪ್ರಗತಿಯಲ್ಲಿವೆ. ಸಮಂತಾ ಬೇಡಿಕೆ ದಿನಕಳೆದಂತೆ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ