‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ

ಸಮಂತಾ ಜೀವನ ಈಗ ಸಂಪೂರ್ಣವಾಗಿ ಬದಲಾಗಿದೆ. ಅವರ ಆದ್ಯತೆಗಳು ಬದಲಾಗಿವೆ. ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರದಲ್ಲಿ ಅವರು ಸುಮ್ಮನೆ ಬೇಸರ ಮಾಡಿಕೊಂಡು ಕೂತಿಲ್ಲ. ಸುತ್ತಾಟ ನಡೆಸುತ್ತಾ, ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿ ಎಲ್ಲವನ್ನೂ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ.

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 05, 2022 | 11:45 AM

ಸಮಂತಾ (Samantha) ಅವರು ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ವಿಚ್ಛೇದನದ ನಂತರದಲ್ಲಿ ಸಮಂತಾ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದರ ಜತೆಗೆ ಗೆಳೆಯರ ಜತೆಯೂ ಸಮಂತಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ದೇಶ, ವಿದೇಶದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ಪ್ರಯುಕ್ತ ಗೆಳೆಯರ ಜತೆ ಅವರು ಗೋವಾಗೆ ತೆರಳಿದ್ದರು. ಅವರು ಈಗ ಅವರ ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ವಿಶೇಷವಾಗಿ ಬರೆದುಕೊಂಡಿದ್ದಾರೆ.

ಸಮಂತಾ ಜೀವನ ಈಗ ಸಂಪೂರ್ಣವಾಗಿ ಬದಲಾಗಿದೆ. ಅವರ ಆದ್ಯತೆಗಳು ಬದಲಾಗಿವೆ. ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರದಲ್ಲಿ ಅವರು ಸುಮ್ಮನೆ ಬೇಸರ ಮಾಡಿಕೊಂಡು ಕೂತಿಲ್ಲ. ಸುತ್ತಾಟ ನಡೆಸುತ್ತಾ, ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿ ಎಲ್ಲವನ್ನೂ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಗೆಳೆಯರ ಜತೆ ಸಮಂತಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

ವೆನ್ನೆಲ್ಲಾ ಕಿಶೋರ್​ ಹಾಗೂ ರಾಹುಲ್​ ರವೀಂದ್ರ ಜತೆ ಸಮಂತಾ ಹರಟೆ ಹೊಡೆಯುತ್ತಾ ಕೂತಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ, ‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’ ಎಂದು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ವೈರಲ್​ ಆಗಿದೆ. ಸಮಂತಾ ಅವರ ಖುಷಿಯನ್ನು ನೋಡಿ ಅಭಿಮಾನಿಗಳು ಸಂತಸಪಟ್ಟಿದ್ದಾರೆ.

ರಾಹುಲ್​ ರವೀಂದ್ರ ಅವರು ನಟ. ಸಮಂತಾ ಆಪ್ತ ಗೆಳತಿ ಚಿನ್ಮಯ್​ ಪ್ರಸಾದ್​ ಅವರ ಪತಿ. ಹೀಗಾಗಿ, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ವೆನ್ನೆಲ್ಲಾ ಕಿಶೋರ್​ ಟಾಲಿವುಡ್​ನ ಖ್ಯಾತ ಕಾಮಿಡಿಯನ್​. ಸಮಂತಾ ಹಾಗೂ ಕಿಶೋರ್​ ನಡುವೆ ಒಳ್ಳೆಯ ಗೆಳೆತನ ಇದೆ.

ಸಿನಿಮಾ ವಿಚಾರದಲ್ಲಿ ಸಮಂತಾ ಬಗ್ಗೆ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿದೆ. ಜ್ಯೂ.ಎನ್​ಟಿಆರ್​, ಮಹೇಶ್​ ಬಾಬು ಮುಂದಿನ ಸಿನಿಮಾಗೆ ಸಮಂತಾ ನಾಯಕಿ ಎನ್ನಲಾಗಿದೆ. ಅಮೇಜಾನ್​ ಪ್ರೈಮ್​ನಲ್ಲಿ ಸಿದ್ಧವಾಗುತ್ತಿರುವ ವೆಬ್​ ಸೀರಿಸ್​ನಲ್ಲಿ ಸಮಂತಾ ನಟಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ರಾಜ್​ ಮತ್ತು ಡಿಕೆ ನಿರ್ದೇಶನ ಇರಲಿದೆಯಂತೆ. ಇದಲ್ಲದೆ, ಹಲವು ಸಿನಿಮಾಗಳ ಕೆಲಸಗಳು ಪ್ರಗತಿಯಲ್ಲಿವೆ. ಸಮಂತಾ ಬೇಡಿಕೆ ದಿನಕಳೆದಂತೆ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ