AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ

ಸಮಂತಾ ಜೀವನ ಈಗ ಸಂಪೂರ್ಣವಾಗಿ ಬದಲಾಗಿದೆ. ಅವರ ಆದ್ಯತೆಗಳು ಬದಲಾಗಿವೆ. ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರದಲ್ಲಿ ಅವರು ಸುಮ್ಮನೆ ಬೇಸರ ಮಾಡಿಕೊಂಡು ಕೂತಿಲ್ಲ. ಸುತ್ತಾಟ ನಡೆಸುತ್ತಾ, ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿ ಎಲ್ಲವನ್ನೂ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ.

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 05, 2022 | 11:45 AM

Share

ಸಮಂತಾ (Samantha) ಅವರು ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ವಿಚ್ಛೇದನದ ನಂತರದಲ್ಲಿ ಸಮಂತಾ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದರ ಜತೆಗೆ ಗೆಳೆಯರ ಜತೆಯೂ ಸಮಂತಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ದೇಶ, ವಿದೇಶದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ಪ್ರಯುಕ್ತ ಗೆಳೆಯರ ಜತೆ ಅವರು ಗೋವಾಗೆ ತೆರಳಿದ್ದರು. ಅವರು ಈಗ ಅವರ ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ವಿಶೇಷವಾಗಿ ಬರೆದುಕೊಂಡಿದ್ದಾರೆ.

ಸಮಂತಾ ಜೀವನ ಈಗ ಸಂಪೂರ್ಣವಾಗಿ ಬದಲಾಗಿದೆ. ಅವರ ಆದ್ಯತೆಗಳು ಬದಲಾಗಿವೆ. ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರದಲ್ಲಿ ಅವರು ಸುಮ್ಮನೆ ಬೇಸರ ಮಾಡಿಕೊಂಡು ಕೂತಿಲ್ಲ. ಸುತ್ತಾಟ ನಡೆಸುತ್ತಾ, ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿ ಎಲ್ಲವನ್ನೂ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಗೆಳೆಯರ ಜತೆ ಸಮಂತಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

ವೆನ್ನೆಲ್ಲಾ ಕಿಶೋರ್​ ಹಾಗೂ ರಾಹುಲ್​ ರವೀಂದ್ರ ಜತೆ ಸಮಂತಾ ಹರಟೆ ಹೊಡೆಯುತ್ತಾ ಕೂತಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ, ‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’ ಎಂದು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ವೈರಲ್​ ಆಗಿದೆ. ಸಮಂತಾ ಅವರ ಖುಷಿಯನ್ನು ನೋಡಿ ಅಭಿಮಾನಿಗಳು ಸಂತಸಪಟ್ಟಿದ್ದಾರೆ.

ರಾಹುಲ್​ ರವೀಂದ್ರ ಅವರು ನಟ. ಸಮಂತಾ ಆಪ್ತ ಗೆಳತಿ ಚಿನ್ಮಯ್​ ಪ್ರಸಾದ್​ ಅವರ ಪತಿ. ಹೀಗಾಗಿ, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ವೆನ್ನೆಲ್ಲಾ ಕಿಶೋರ್​ ಟಾಲಿವುಡ್​ನ ಖ್ಯಾತ ಕಾಮಿಡಿಯನ್​. ಸಮಂತಾ ಹಾಗೂ ಕಿಶೋರ್​ ನಡುವೆ ಒಳ್ಳೆಯ ಗೆಳೆತನ ಇದೆ.

ಸಿನಿಮಾ ವಿಚಾರದಲ್ಲಿ ಸಮಂತಾ ಬಗ್ಗೆ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿದೆ. ಜ್ಯೂ.ಎನ್​ಟಿಆರ್​, ಮಹೇಶ್​ ಬಾಬು ಮುಂದಿನ ಸಿನಿಮಾಗೆ ಸಮಂತಾ ನಾಯಕಿ ಎನ್ನಲಾಗಿದೆ. ಅಮೇಜಾನ್​ ಪ್ರೈಮ್​ನಲ್ಲಿ ಸಿದ್ಧವಾಗುತ್ತಿರುವ ವೆಬ್​ ಸೀರಿಸ್​ನಲ್ಲಿ ಸಮಂತಾ ನಟಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ರಾಜ್​ ಮತ್ತು ಡಿಕೆ ನಿರ್ದೇಶನ ಇರಲಿದೆಯಂತೆ. ಇದಲ್ಲದೆ, ಹಲವು ಸಿನಿಮಾಗಳ ಕೆಲಸಗಳು ಪ್ರಗತಿಯಲ್ಲಿವೆ. ಸಮಂತಾ ಬೇಡಿಕೆ ದಿನಕಳೆದಂತೆ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​