AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸದ್ದು ಮಾಡಿದ ಸಮಂತಾ; ಒಂದು ಗಂಟೆಯಲ್ಲಿ 20 ಲಕ್ಷ ವೀಕ್ಷಣೆ ಕಂಡ ವಿಡಿಯೋ ಸಾಂಗ್​

‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ವಿಡಿಯೋ ಸಾಂಗ್ ರಿಲೀಸ್​​ ಆಗಿ ಸದ್ದು ಮಾಡುತ್ತಿದೆ.

ಮತ್ತೆ ಸದ್ದು ಮಾಡಿದ ಸಮಂತಾ; ಒಂದು ಗಂಟೆಯಲ್ಲಿ 20 ಲಕ್ಷ ವೀಕ್ಷಣೆ ಕಂಡ ವಿಡಿಯೋ ಸಾಂಗ್​
ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 07, 2022 | 7:20 PM

ಸದ್ಯ ಎಲ್ಲೆಲ್ಲೂ ಸಮಂತಾ (Samantha) ಅವರದ್ದೇ ಹವಾ. ‘ಪುಷ್ಪ’ ಸಿನಿಮಾದಲ್ಲಿ ಅವರು ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಸಖತ್​ ಹಿಟ್​ ಆಗಿದೆ. 12 ಕೋಟಿಗೂ ಅಧಿಕ ಜನರು ಇದನ್ನು ವೀಕ್ಷಣೆ ಮಾಡಿರುವುದು ಈ ಲಿರಿಕಲ್​ ಹಾಡಿನ ಹೆಚ್ಚುಗಾರಿಕೆ. ಈ ಹಾಡಿನಿಂದ ‘ಪುಷ್ಪ’ ಸಿನಿಮಾದ ಹವಾ ಹೆಚ್ಚಾಗಿತ್ತು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಈಗ ಈ ಹಾಡಿನ ವಿಡಿಯೋ ಸಾಂಗ್​ ರಿಲೀಸ್​ ಮಾಡಲಾಗಿದೆ. ಈಗ ಸಮಂತಾ ಡ್ಯಾನ್ಸ್​​ಅನ್ನು ಸಂಪೂರ್ಣವಾಗಿ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ.

‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ವಿಡಿಯೋ ಸಾಂಗ್ ರಿಲೀಸ್​​ ಆಗಿ ಸದ್ದು ಮಾಡುತ್ತಿದೆ. ಪಡ್ಡೆ ಹುಡುಗರಿಗೆ ನಶೆ ಏರಿಸುವಂತಿರುವ ಈ ವಿಡಿಯೋ ಸಾಂಗ್​​ನಲ್ಲಿ ಸಮಂತಾ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ಸಾಂಗ್​ ಬಿಡುಗಡೆ ಆಗಿ ಕೇವಲ ಒಂದು ಗಂಟೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಅವರಿಗೆ ಇಷ್ಟು ದೊಡ್ಡ ಸಂಭಾವನೆ ಕೊಟ್ಟಿದ್ದಕ್ಕೂ ಸಾರ್ಥಕ ಎನ್ನುವ ಮಾತು ಅಭಿಮಾನಿಗ ವಲಯದಿಂದ ಕೇಳಿ ಬರುತ್ತಿದೆ.

‘ಊ ಅಂಟಾವಾ ಮಾವ ಊಊ ಅಂಟಾವಾ ಮಾವ’ ಹಾಡಿನಲ್ಲಿ ಗಂಡಸರ ಕುರಿತು ಸಾಹಿತ್ಯ ಬರೆಯಲಾಗಿದೆ. ಹುಡುಗಿಯರನ್ನು ನೋಡಿದಾಗ ಗಂಡಸರು ಯಾವ ರೀತಿ ವರ್ತಿಸುತ್ತಾರೆ ಎಂಬುದನ್ನು ಇದರಲ್ಲಿ ವಿವರಿಸಲಾಗಿದೆ. ಗಂಡಸರೆಲ್ಲರೂ ಕಾಮುಕ ಬುದ್ಧಿಯವರು ಎಂಬರ್ಥ ಬರುವ ರೀತಿಯಲ್ಲಿ ಈ ಹಾಡಿನ ಸಾಹಿತ್ಯ ಇದೆ ಎಂದು ಕೆಲವರು ಆರೋಪಿಸಿದ್ದಾರೆ. ಹಾಗಾಗಿ, ಆಂಧ್ರ ಪ್ರದೇಶದಲ್ಲಿ ಪುರುಷರ ಸಂಘಟನೆಯೊಂದು ‘ಪುಷ್ಪ’ ಚಿತ್ರತಂಡದ ವಿರುದ್ಧ ಕೇಸ್​ ದಾಖಲಿಸಿತ್ತು.

ಇದನ್ನೂ ಓದಿ: ‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ 

Samantha: ‘ಹೂ ಅಂತೀಯಾ ಮಾವ..’ ಡ್ಯಾನ್ಸ್​ ಹಿಂದಿನ ಕಷ್ಟವನ್ನು ವಿಡಿಯೋ ಮೂಲಕ ವಿವರಿಸಿದ ಸಮಂತಾ  

ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!