AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ತುಂಬಾನೇ ಮುಗ್ಧ ಎಂದು ಹೊಗಳಿದ್ದ ಸಮಂತಾ; ವೈರಲ್​ ಆಗುತ್ತಿದೆ ಹಳೆಯ ವಿಡಿಯೋ

ಸಮಂತಾ ಹಾಗೂ ನಾಗ ಚೈತನ್ಯ ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದವರು. ಇಬ್ಬರ ನಡುವೆ ಒಳ್ಳೆಯ ಆಪ್ತತೆ ಇತ್ತು ಆದರೆ, ಅವರು ವಿಚ್ಛೇದನ ಪಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ನಾಗ ಚೈತನ್ಯ ತುಂಬಾನೇ ಮುಗ್ಧ ಎಂದು ಹೊಗಳಿದ್ದ ಸಮಂತಾ; ವೈರಲ್​ ಆಗುತ್ತಿದೆ ಹಳೆಯ ವಿಡಿಯೋ
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 20, 2022 | 3:24 PM

Share

ನಾಗ ಚೈತನ್ಯ (Naga Chaitanya) ಹಾಗೂ ಸಮಂತಾ (Samantha) ವಿಚ್ಛೇದನ ಪಡೆದಿರುವ ವಿಚಾರ ಅನೇಕರಿಗೆ ಬೇಸರ ತಂದಿದೆ. ಇಬ್ಬರೂ ಬೇರೆ ಆಗಿ ತಮ್ಮದೇ ಜಗತ್ತಿನಲ್ಲಿ ಬ್ಯುಸಿ ಆಗಿದ್ದಾರೆ. ಈ ಮೂಲಕ ಹಳೆಯ ಘಟನೆಯನ್ನು ಮರೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಅಭಿಮಾನಿಗಳಿಗೆ ಇದನ್ನು ಮರೆಯೋಕೆ ಸಾಧ್ಯವಾಗುತ್ತಿಲ್ಲ. ಸಮಂತಾ ಹಾಗೂ ನಾಗ ಚೈತನ್ಯ ಹೊಸ ಪೋಸ್ಟ್ ಹಾಕಿದರೆ ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬರುತ್ತವೆ. ಮತ್ತೆ ಇಬ್ಬರೂ ಒಂದಾಗುವಂತೆ ಅನೇಕರು ಬೇಡಿಕೆ ಇಡುತ್ತಾರೆ. ಇದರ ಜತೆಗೆ ಸಮಂತಾ ಅವರು ಈ ಮೊದಲು ನಾಗ ಚೈತನ್ಯ ಬಗ್ಗೆ ಹೇಳಿಕೊಂಡ ಮಾತುಗಳನ್ನು ಫ್ಯಾನ್ಸ್​ ಮೆಲುಕು ಹಾಕುತ್ತಿದ್ದಾರೆ. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್​ ಆಗಿದೆ.

ಸಮಂತಾ ಹಾಗೂ ನಾಗ ಚೈತನ್ಯ ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದವರು. ಇಬ್ಬರ ನಡುವೆ ಒಳ್ಳೆಯ ಆಪ್ತತೆ ಇತ್ತು ಆದರೆ, ಅವರು ವಿಚ್ಛೇದನ ಪಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ‘ನಂಬರ್​ 1. ಯಾರಿ ವಿತ್​ ರಾಣಾ’ ಶೋನಲ್ಲಿ ಸಮಂತಾ ಪಾಲ್ಗೊಂಡಿದ್ದರು. ಈ ವೇಳೆ ಅವರು ನಾಗ ಚೈತನ್ಯ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಸಮಂತಾ ಫಿಟ್​​ನೆಸ್​ಗೆ ಹೆಚ್ಚು ಒತ್ತು ಕೊಡುತ್ತಾರೆ. ಸದಾ ಜಿಮ್​ನಲ್ಲಿ ಅವರು ಸಮಯ ಕಳೆಯುತ್ತಾರೆ. ಅವರಿಗೆ ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ಇದೆ. ಹಾಗಾದರೆ, ಸಮಂತಾಗೆ ಫಿಟ್​ನೆಸ್​ಗೆ ಸ್ಫೂರ್ತಿ ಯಾರು ಎಂದು ಕೇಳಿದ ಪ್ರಶ್ನೆಗೆ ಅವರು ನಾಗ ಚೈತನ್ಯ ಹೆಸರನ್ನು ಹೇಳಿದ್ದರು. ಇದರ ಜತೆಗೆ ರಾಣಾ ಮತ್ತೊಂದು ಪ್ರಶ್ನೆ ಕೇಳಿದ್ದರು. ಇದಕ್ಕೂ ಅವರು ನಾಗ ಚೈತನ್ಯ ಅವರ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದರು.

‘ಟಾಲಿವುಡ್​ ಇಂಡಸ್ಟ್ರಿಯಲ್ಲಿ ಅತ್ಯಂತ ಮುಗ್ಧ ಹೀರೋ ಯಾರು? ಆ ಬಿರುದನ್ನು ಯಾರಿಗೆ ಕೊಡ್ತೀರಿ’ ಎಂದು ರಾಣಾ ಅವರು ಕೇಳಿದರು. ಇದಕ್ಕೆ ಉತ್ತರಿಸಿದ್ದ ಸಮಂತಾ, ನಾಗ ಚೈತನ್ಯ ಅವರ ಹೆಸರನ್ನು ಹೇಳಿದ್ದರು. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನ್ನೂ ಓದಿ: Samantha: ವಿಚ್ಛೇದನದ ಬಳಿಕ ಮೊದಲ ಬಾರಿಗೆ ಸಮಂತಾರನ್ನು ಹೊಗಳಿದ ನಾಗ ಚೈತನ್ಯ

‘ಹೂ ಅಂತೀಯಾ ಮಾವ..’ ಹಾಡಿಗಾಗಿ ಸಮಂತಾಗೆ 5 ಕೋಟಿ ರೂ. ಸಂಭಾವನೆ? ಅಷ್ಟು ದುಬಾರಿ ಯಾಕೆ?

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ