AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

ಸಮಂತಾ ಹಾಗೂ ನಾಗ ಚೈತನ್ಯ ಜತೆಗೆ ನಂದಿನಿ ರೆಡ್ಡಿ ಒಳ್ಳೆಯ ಫ್ರೆಂಡ್​ಶಿಪ್​ ಹೊಂದಿದ್ದಾರೆ. ಇಬ್ಬರ ನಡುವೆ ಪರಿಚಯ ಬೆಳೆದು, ಒಳ್ಳೆಯ ಬಾಂಧವ್ಯ ಮೂಡೋಕೆ ಇವರು ಪ್ರಮುಖ ಕಾರಣ ಎನ್ನುವ ಮಾತು ಕೂಡ ಇದೆ.

ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?
ಸಮಂತಾ-ನಾಗ ಚೈತನ್ಯ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 30, 2021 | 1:50 PM

Share

ಸಮಂತಾ (Samantha) ಮತ್ತು ನಾಗ ಚೈತನ್ಯ (Naga Chaitanya) ವಿಚ್ಛೇದನದಿಂದ ಸಿನಿಮಾ ಇಂಡಸ್ಟ್ರಿ ಮೇಲೂ ಪ್ರಭಾವ ಉಂಟಾಗಿದೆ. ಇವರ ಜತೆ ಸಿನಿಮಾ ಮಾಡಬೇಕು ಎಂದು ಪ್ಲ್ಯಾನ್​ ಮಾಡಿಕೊಂಡಿದ್ದ ನಿರ್ಮಾಪಕರು ಈ ಆಸೆಯನ್ನು ಕೈ ಬಿಟ್ಟಿದ್ದಾರೆ. ಇವರಿಬ್ಬರೂ ಇನ್ನು ಒಟ್ಟಾಗಿ ನಟಿಸೋಕೆ ಸಾಧ್ಯವಿಲ್ಲ. ಇಬ್ಬರ ಜತೆಯೂ ಕ್ಲೋಸ್​ ಆಗಿದ್ದ ನಿರ್ದೇಶಕರು ಸಂಕಷ್ಟ ಎದುರಿಸುವಂತಾಗಿದೆ. ತೆಲುಗಿನ ಖ್ಯಾತ ನಿರ್ದೇಶಕಿ ನಂದಿನಿ ರೆಡ್ಡಿ ಕೂಡ ಇಂಥ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅವರು ಈ ಸಮಸ್ಯೆಯಿಂದ ಹೊರ ಬರೋದು ಹೇಗೆ ಎನ್ನುವ ಗೊಂದಲದಲ್ಲಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ಜತೆಗೆ ನಂದಿನಿ ರೆಡ್ಡಿ ಒಳ್ಳೆಯ ಫ್ರೆಂಡ್​ಶಿಪ್​ ಹೊಂದಿದ್ದಾರೆ. ಇಬ್ಬರ ನಡುವೆ ಪರಿಚಯ ಬೆಳೆದು, ಒಳ್ಳೆಯ ಬಾಂಧವ್ಯ ಮೂಡೋಕೆ ಇವರು ಪ್ರಮುಖ ಕಾರಣ ಎನ್ನುವ ಮಾತು ಕೂಡ ಇದೆ. ಆದರೆ, ಈ ಬಗ್ಗೆ ಯಾರೂ ಅಧಿಕೃತವಾಗಿ ಮಾತನಾಡಿಲ್ಲ. ಸಮಂತಾ ವಿಚ್ಛೇದನ ಪಡೆದುಕೊಂಡಿರುವ ವಿಚಾರ ನಂದಿನಿಗೆ ಬೇಸರ ತರಿಸಿದೆ. ಈ ಮೊದಲು ಸಮಂತಾ ಹಾಗೂ ನಾಗ ಚೈತನ್ಯ ಒಟ್ಟಾಗಿ ಇರುತ್ತಿದ್ದರು. ಇಬ್ಬರನ್ನೂ ಒಟ್ಟಿಗೆ ಮಾತನಾಡಿಸಬಹುದಿತ್ತು. ಆದರೆ, ಈಗ ಹಾಗಲ್ಲ. ಇಬ್ಬರನ್ನೂ ಬೇರೆಬೇರೆಯಾಗಿಯೇ ಭೇಟಿ ಮಾಡಬೇಕು. ಇಷ್ಟೇ ಆಗಿದ್ದರೆ ಅವರಿಗೆ ಸಮಸ್ಯೆ ಆಗುತ್ತಿರಲಿಲ್ಲ. ಇವರ ಜತೆ ಸಿನಿಮಾ ಮಾಡೋಕೆ ಕಮಿಟ್​ ಆಗಿರುವುದು ಅವರಿಗೆ ಸಂಕಷ್ಟ ತಂದಿದೆ.

ನಂದಿನಿ ಅವರು ಸಿನಿಮಾ ಕೆಲಸವೊಂದರಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ಅವರು ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಳ್ಳಬೇಕು. ಅದು ಯಾವುದು ಎನ್ನುವ ಪ್ರಶ್ನೆ ಈಗ ಅವರನ್ನು ಕಾಡಿದೆ. ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರಿಗೂ ನಂದಿನಿ ಒಂದೊಂದು ಕಥೆ ಹೇಳಿದ್ದಾರೆ. ವೈಜಯಂತಿ ಮೂವೀಸ್​ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಮಾಡುತ್ತಿರುವ ಸಿನಿಮಾಗೆ ನಾಗ ಚೈತನ್ಯ ಹೀರೋ. ಇನ್ನು, ಎಸ್​ಆರ್​ಟಿ ಎಂಟರ್​ಟೇನ್​ಮೆಂಟ್​ ಬ್ಯಾನರ್​ ಅಡಿಯಲ್ಲಿ ಮಾಡುತ್ತಿರುವ ಚಿತ್ರಕ್ಕೆ ಸಮಂತಾ ನಾಯಕಿ. ಈ ಸಿನಿಮಾದಲ್ಲಿ ಯಾವುದನ್ನು ಮೊದಲು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಇಕ್ಕಟ್ಟಿನಲ್ಲಿ ನಂದಿನಿ ಇದ್ದಾರೆ.

ನಾಗ ಚೈತನ್ಯ ಸಿನಿಮಾವನ್ನು ಮೊದಲು ಕೈಗೆತ್ತಿಕೊಂಡರೆ ಸಮಂತಾಗೆ ಬೇಸರ ಆಗಬಹುದು. ಸಮಂತಾ ಸಿನಿಮಾವನ್ನು ಮೊದಲು ಆರಂಭಿಸಿದರೆ ನಾಗ ಚೈತನ್ಯಗೆ ಬೇಸರ ಆಗಬಹುದು. ಹೀಗಾಗಿ, ಯಾವುದನ್ನು ಮೊದಲು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಪ್ರಶ್ನೆ ಅವರನ್ನು ಕೊರೆಯುತ್ತಿದೆ. ಹೀಗಾಗಿ, ಅವರು ಇಬ್ಬರಲ್ಲಿ ಒಬ್ಬರಿಗೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಇದನ್ನೂ ಓದಿ: ವಿಚ್ಛೇದನದ ನಂತರ ಮೊದಲ ಬಾರಿಗೆ ಒಂದೇ ಕಡೆ ಕಾಣಿಸಿಕೊಂಡ ಸಮಂತಾ-ನಾಗ ಚೈತನ್ಯ; ಹೇಗಿತ್ತು ರಿಯಾಕ್ಷನ್​?

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ