AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ

‘ನನ್ನ ತಾಯಿ ಹೇಳಿದ್ದರು’ ಎಂಬ ಕ್ಯಾಪ್ಷನ್​ನೊಂದಿಗೆ ಕೆಲವೊಂದು ಅಂಶಗಳನ್ನು ಸಮಂತಾ ಪಟ್ಟಿ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿರುವ ಅವರು ಅನೇಕ ವಿಚಾರಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ
ಸಮಂತಾ
TV9 Web
| Edited By: |

Updated on: Nov 02, 2021 | 11:43 AM

Share

ನಟಿ ಸಮಂತಾ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಡಿವೋರ್ಸ್​ ಮೂಲಕ ಅಧಿಕೃತವಾಗಿ ಅಂತ್ಯ ಹಾಡಿದ ಬಳಿಕ ಸಮಂತಾ ಬದುಕಿನಲ್ಲಿ ಹೊಸ ಬದಲಾವಣೆಯ ಗಾಳಿ ಬೀಸಿದೆ. ಅನೇಕ ಸ್ಥಳಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅನೇಕ ವಿಚಾರಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜನರಿಗೆ ಸ್ಫೂರ್ತಿ ತುಂಬುವಂತಹ ಮಾತುಗಳನ್ನು ಸಮಂತಾ ಆಡುತ್ತಿದ್ದಾರೆ. ಈಗ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯನ್ನು ಶೇರ್​ ಮಾಡಿಕೊಂಡಿರುವ ಕೆಲವು ಅಂಶಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

‘ನನ್ನ ತಾಯಿ ಹೇಳಿದ್ದರು’ ಎಂಬ ಕ್ಯಾಪ್ಷನ್​ನೊಂದಿಗೆ ಕೆಲವೊಂದು ಅಂಶಗಳನ್ನು ಸಮಂತಾ ಪಟ್ಟಿ ಮಾಡಿದ್ದಾರೆ. ‘ನಾನು ಸ್ಟ್ರಾಂಗ್​, ಬೇಗ ಚೇತರಿಸಿಕೊಳ್ಳುತ್ತೇನೆ. ನಾನು ಪರ್ಫೆಕ್ಟ್​ ಅಲ್ಲ. ನನ್ನತನಕ್ಕೆ ನಾನು ಪರ್ಫೆಕ್ಟ್​. ನಾನೆಂದೂ ಬಿಟ್ಟು ಕೊಡುವುದಿಲ್ಲ. ನಾನು ಪ್ರೀತಿ ಪಾತ್ರಳು. ನಾನು ಬದ್ಧತೆ ಹೊಂದಿರುವವಳು. ನಾನು ಮನುಷ್ಯಳು. ನಾನು ವಾರಿಯರ್​’ ಎಂಬ ಬರಹವುಳ್ಳ ಪೋಸ್ಟರ್​ ಅನ್ನು ಸಮಂತಾ ಶೇರ್​ ಮಾಡಿಕೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆ ಹೆಣ್ಣುಮಕ್ಕಳ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ಸಮಂತಾ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು. ‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದರು.

ನಾಗ ಚೈತನ್ಯಗೆ ವಿಚ್ಛೇದನ ನೀಡಿದ ಬಳಿಕ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ಅಲ್ಲದೇ ಹಲವು ಸ್ಥಳಗಳಿಗೆ ಅವರು ಪ್ರವಾಸ ಕೈಗೊಂಡಿದ್ದಾರೆ. ಪ್ರಕೃತಿ ಸೌಂದರ್ಯದ ತಾಣಗಳ ಜೊತೆಗೆ ಆಧ್ಯಾತ್ಮಿಕ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದಾರೆ. ಪೂಜೆ, ಹೋಮ-ಹವನ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಹಾರಿಷಿ ಮಹೇಶ್​ ಯೋಗಿ ಆಶ್ರಮದ ಧ್ಯಾನ ಕೇಂದ್ರಕ್ಕೆ ತೆರಳಿದ್ದರು. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಯಶಸ್ಸಿನ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಸದ್ಯ ಅವರು ತೆಲುಗಿನ ‘ಶಾಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಕೂಡ ಅನೌನ್ಸ್​ ಆಗಿದೆ. ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ