AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ

‘ನನ್ನ ತಾಯಿ ಹೇಳಿದ್ದರು’ ಎಂಬ ಕ್ಯಾಪ್ಷನ್​ನೊಂದಿಗೆ ಕೆಲವೊಂದು ಅಂಶಗಳನ್ನು ಸಮಂತಾ ಪಟ್ಟಿ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿರುವ ಅವರು ಅನೇಕ ವಿಚಾರಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ
ಸಮಂತಾ
TV9 Web
| Edited By: |

Updated on: Nov 02, 2021 | 11:43 AM

Share

ನಟಿ ಸಮಂತಾ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಡಿವೋರ್ಸ್​ ಮೂಲಕ ಅಧಿಕೃತವಾಗಿ ಅಂತ್ಯ ಹಾಡಿದ ಬಳಿಕ ಸಮಂತಾ ಬದುಕಿನಲ್ಲಿ ಹೊಸ ಬದಲಾವಣೆಯ ಗಾಳಿ ಬೀಸಿದೆ. ಅನೇಕ ಸ್ಥಳಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅನೇಕ ವಿಚಾರಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜನರಿಗೆ ಸ್ಫೂರ್ತಿ ತುಂಬುವಂತಹ ಮಾತುಗಳನ್ನು ಸಮಂತಾ ಆಡುತ್ತಿದ್ದಾರೆ. ಈಗ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯನ್ನು ಶೇರ್​ ಮಾಡಿಕೊಂಡಿರುವ ಕೆಲವು ಅಂಶಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

‘ನನ್ನ ತಾಯಿ ಹೇಳಿದ್ದರು’ ಎಂಬ ಕ್ಯಾಪ್ಷನ್​ನೊಂದಿಗೆ ಕೆಲವೊಂದು ಅಂಶಗಳನ್ನು ಸಮಂತಾ ಪಟ್ಟಿ ಮಾಡಿದ್ದಾರೆ. ‘ನಾನು ಸ್ಟ್ರಾಂಗ್​, ಬೇಗ ಚೇತರಿಸಿಕೊಳ್ಳುತ್ತೇನೆ. ನಾನು ಪರ್ಫೆಕ್ಟ್​ ಅಲ್ಲ. ನನ್ನತನಕ್ಕೆ ನಾನು ಪರ್ಫೆಕ್ಟ್​. ನಾನೆಂದೂ ಬಿಟ್ಟು ಕೊಡುವುದಿಲ್ಲ. ನಾನು ಪ್ರೀತಿ ಪಾತ್ರಳು. ನಾನು ಬದ್ಧತೆ ಹೊಂದಿರುವವಳು. ನಾನು ಮನುಷ್ಯಳು. ನಾನು ವಾರಿಯರ್​’ ಎಂಬ ಬರಹವುಳ್ಳ ಪೋಸ್ಟರ್​ ಅನ್ನು ಸಮಂತಾ ಶೇರ್​ ಮಾಡಿಕೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆ ಹೆಣ್ಣುಮಕ್ಕಳ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ಸಮಂತಾ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು. ‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದರು.

ನಾಗ ಚೈತನ್ಯಗೆ ವಿಚ್ಛೇದನ ನೀಡಿದ ಬಳಿಕ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ಅಲ್ಲದೇ ಹಲವು ಸ್ಥಳಗಳಿಗೆ ಅವರು ಪ್ರವಾಸ ಕೈಗೊಂಡಿದ್ದಾರೆ. ಪ್ರಕೃತಿ ಸೌಂದರ್ಯದ ತಾಣಗಳ ಜೊತೆಗೆ ಆಧ್ಯಾತ್ಮಿಕ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದಾರೆ. ಪೂಜೆ, ಹೋಮ-ಹವನ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಹಾರಿಷಿ ಮಹೇಶ್​ ಯೋಗಿ ಆಶ್ರಮದ ಧ್ಯಾನ ಕೇಂದ್ರಕ್ಕೆ ತೆರಳಿದ್ದರು. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಯಶಸ್ಸಿನ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಸದ್ಯ ಅವರು ತೆಲುಗಿನ ‘ಶಾಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಕೂಡ ಅನೌನ್ಸ್​ ಆಗಿದೆ. ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ