AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

Samantha: ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಈ ಪರಿ ಹೈಪ್​ ಸೃಷ್ಟಿ ಆಗಲು ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ’ ಹಾಡು ಕೂಡ ಕಾರಣ. ಅದರ ಯಶಸ್ಸಿನಿಂದ ಸಮಂತಾ ಖುಷಿ ಆಗಿದ್ದಾರೆ.

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?
ಸಮಂತಾ
TV9 Web
| Edited By: |

Updated on: Dec 18, 2021 | 2:11 PM

Share

ನಟಿ ಸಮಂತಾ (Samantha) ಅವರ ಚಾರ್ಮ್​ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದುಕೊಂಡ ಬಳಿಕ ಅವರ ಸಿನಿಮಾ ಆಯ್ಕೆಗಳು ಬದಲಾಗಿವೆ. ಇತ್ತೀಚೆಗಂತೂ ಅವರು ಬೋಲ್ಡ್​ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ರಿಲೀಸ್​ ಆಗಿರುವ ‘ಪುಷ್ಪ’ (Pushpa Movie) ಸಿನಿಮಾದಲ್ಲಿ ಸಮಂತಾ ಐಟಂ ಡ್ಯಾನ್ಸ್​ ಮಾಡಿದ್ದಾರೆ. ‘ಹೂ ಅಂತಿಯಾ ಮಾವ.. ಊಹೂ ಅಂತಿಯಾ ಮಾವ..’ ಹಾಡಿನಲ್ಲಿ ಅವರು ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಆ ಹಾಡಿನ ಸಾಹಿತ್ಯಕ್ಕೆ ಕೆಲವರು ತಕರಾರು ತೆಗೆದಿದ್ದರು. ಆ ವಿವಾದ ಏನೇ ಇದ್ದರೂ ಹಾಡಿನ ಕ್ರೇಜ್​ ಕಮ್ಮಿ ಆಗಿಲ್ಲ. ಚಿತ್ರಮಂದಿರಲ್ಲಿ ಈ ಹಾಡಿಗೆ ಪ್ರೇಕ್ಷಕರು ಹುಚ್ಚೆದು ಕುಣಿಯುತ್ತಿದ್ದಾರೆ. ಅದನ್ನು ಕಂಡು ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಈ ಪರಿ ಹೈಪ್​ ಸೃಷ್ಟಿ ಆಗಲು ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ’ ಹಾಡು ಕೂಡ ಪ್ರಮುಖ ಕಾರಣ. ಚಿತ್ರಮಂದಿರದಲ್ಲಿ ಈ ಹಾಡು ಬಿತ್ತರ ಆಗುತ್ತಿದ್ದಂತೆಯೇ ಜನರು ಬಿಂದಾಸ್​ ಆಗಿ ಕುಣಿಯುತ್ತಿದ್ದಾರೆ. ಆ ವಿಡಿಯೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಿಕೊಂಡಿರುವ ಸಮಂತಾ ಅವರು ‘ಇದೊಂದು ಹುಚ್ಚು’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ತಮ್ಮ ಹಾಡಿಗೆ ಇಷ್ಟೊಂದು ಸಕ್ಸಸ್​ ಸಿಕ್ಕಿದ್ದಕ್ಕೆ ಅವರಿಗೆ ಖುಷಿ ಆಗಿದೆ.

ಈ ಹಾಡಿನಲ್ಲಿದೆ ವಿವಾದಾತ್ಮಕ ಸಾಹಿತ್ಯ!

ಯಾವುದೇ ರೀತಿಯ ಮಹಿಳೆಯರನ್ನು ಕಂಡರೂ ಕೂಡ ಗಂಡಸರು ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ ಎಂಬ ಅರ್ಥ ಬರುವಂತಹ ಸಾಲುಗಳು ಈ ಹಾಡಿನಲ್ಲಿ ಇವೆ. ಅದರ ವಿರುದ್ಧ ಇತ್ತೀಚೆಗೆ ಪುರುಷರ ಸಂಘಟನೆಯೊಂದು ದೂರು ನೀಡಿತ್ತು. ಗಂಡಸರ ಬಗ್ಗೆ ಅವಹೇಳನಕಾರಿಯಾಗಿ ಹಾಡು ಬರೆಯಲಾಗಿದೆ ಎಂದು ಆರೋಪಿಸಲಾಗಿತ್ತು. ಅದೇ ಹಾಡಿಗೆ ಈಗ ಗಂಡಸರು ಹುಚ್ಚೆದ್ದು ಕುಣಿಯುತ್ತಿರುವುದು ಕಂಡು ಸಮಂತಾ ಫುಲ್​ ಖುಷ್​ ಆಗಿದ್ದಾರೆ.

ಮೊದಲ ದಿನ ‘ಪುಷ್ಪ’ ಸಿನಿಮಾ ಭಾರಿ ಕಲೆಕ್ಷನ್​ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಚಿತ್ರಕ್ಕೆ ಆದಾಯ ಹರಿದುಬಂದಿಲ್ಲ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಸಿನಿಮಾ ಪೈರಸಿ ಕಾಟಕ್ಕೆ ತುತ್ತಾಯಿತು. ಅದು ಕೂಡ ಚಿತ್ರದ ಕಲೆಕ್ಷನ್​ಗೆ ಪೆಟ್ಟು ಕೊಟ್ಟಿರುವ ಸಾಧ್ಯತೆ ಇದೆ.

ಇದನ್ನೂ ಓದಿ:

‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

ಮೊದಲ ದಿನವೇ ಲೀಕ್​ ಆಯ್ತು ರಶ್ಮಿಕಾ, ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ; ಕಲೆಕ್ಷನ್​ ಮೇಲೆ ಬೀಳಲಿದೆ ಪೆಟ್ಟು

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು