AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

Samantha: ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಈ ಪರಿ ಹೈಪ್​ ಸೃಷ್ಟಿ ಆಗಲು ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ’ ಹಾಡು ಕೂಡ ಕಾರಣ. ಅದರ ಯಶಸ್ಸಿನಿಂದ ಸಮಂತಾ ಖುಷಿ ಆಗಿದ್ದಾರೆ.

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?
ಸಮಂತಾ
TV9 Web
| Updated By: ಮದನ್​ ಕುಮಾರ್​|

Updated on: Dec 18, 2021 | 2:11 PM

Share

ನಟಿ ಸಮಂತಾ (Samantha) ಅವರ ಚಾರ್ಮ್​ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದುಕೊಂಡ ಬಳಿಕ ಅವರ ಸಿನಿಮಾ ಆಯ್ಕೆಗಳು ಬದಲಾಗಿವೆ. ಇತ್ತೀಚೆಗಂತೂ ಅವರು ಬೋಲ್ಡ್​ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ರಿಲೀಸ್​ ಆಗಿರುವ ‘ಪುಷ್ಪ’ (Pushpa Movie) ಸಿನಿಮಾದಲ್ಲಿ ಸಮಂತಾ ಐಟಂ ಡ್ಯಾನ್ಸ್​ ಮಾಡಿದ್ದಾರೆ. ‘ಹೂ ಅಂತಿಯಾ ಮಾವ.. ಊಹೂ ಅಂತಿಯಾ ಮಾವ..’ ಹಾಡಿನಲ್ಲಿ ಅವರು ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಆ ಹಾಡಿನ ಸಾಹಿತ್ಯಕ್ಕೆ ಕೆಲವರು ತಕರಾರು ತೆಗೆದಿದ್ದರು. ಆ ವಿವಾದ ಏನೇ ಇದ್ದರೂ ಹಾಡಿನ ಕ್ರೇಜ್​ ಕಮ್ಮಿ ಆಗಿಲ್ಲ. ಚಿತ್ರಮಂದಿರಲ್ಲಿ ಈ ಹಾಡಿಗೆ ಪ್ರೇಕ್ಷಕರು ಹುಚ್ಚೆದು ಕುಣಿಯುತ್ತಿದ್ದಾರೆ. ಅದನ್ನು ಕಂಡು ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಈ ಪರಿ ಹೈಪ್​ ಸೃಷ್ಟಿ ಆಗಲು ‘ಹು ಅಂತಿಯಾ ಮಾವ ಊಹೂ ಅಂತಿಯಾ ಮಾವ’ ಹಾಡು ಕೂಡ ಪ್ರಮುಖ ಕಾರಣ. ಚಿತ್ರಮಂದಿರದಲ್ಲಿ ಈ ಹಾಡು ಬಿತ್ತರ ಆಗುತ್ತಿದ್ದಂತೆಯೇ ಜನರು ಬಿಂದಾಸ್​ ಆಗಿ ಕುಣಿಯುತ್ತಿದ್ದಾರೆ. ಆ ವಿಡಿಯೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಿಕೊಂಡಿರುವ ಸಮಂತಾ ಅವರು ‘ಇದೊಂದು ಹುಚ್ಚು’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ತಮ್ಮ ಹಾಡಿಗೆ ಇಷ್ಟೊಂದು ಸಕ್ಸಸ್​ ಸಿಕ್ಕಿದ್ದಕ್ಕೆ ಅವರಿಗೆ ಖುಷಿ ಆಗಿದೆ.

ಈ ಹಾಡಿನಲ್ಲಿದೆ ವಿವಾದಾತ್ಮಕ ಸಾಹಿತ್ಯ!

ಯಾವುದೇ ರೀತಿಯ ಮಹಿಳೆಯರನ್ನು ಕಂಡರೂ ಕೂಡ ಗಂಡಸರು ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ ಎಂಬ ಅರ್ಥ ಬರುವಂತಹ ಸಾಲುಗಳು ಈ ಹಾಡಿನಲ್ಲಿ ಇವೆ. ಅದರ ವಿರುದ್ಧ ಇತ್ತೀಚೆಗೆ ಪುರುಷರ ಸಂಘಟನೆಯೊಂದು ದೂರು ನೀಡಿತ್ತು. ಗಂಡಸರ ಬಗ್ಗೆ ಅವಹೇಳನಕಾರಿಯಾಗಿ ಹಾಡು ಬರೆಯಲಾಗಿದೆ ಎಂದು ಆರೋಪಿಸಲಾಗಿತ್ತು. ಅದೇ ಹಾಡಿಗೆ ಈಗ ಗಂಡಸರು ಹುಚ್ಚೆದ್ದು ಕುಣಿಯುತ್ತಿರುವುದು ಕಂಡು ಸಮಂತಾ ಫುಲ್​ ಖುಷ್​ ಆಗಿದ್ದಾರೆ.

ಮೊದಲ ದಿನ ‘ಪುಷ್ಪ’ ಸಿನಿಮಾ ಭಾರಿ ಕಲೆಕ್ಷನ್​ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಚಿತ್ರಕ್ಕೆ ಆದಾಯ ಹರಿದುಬಂದಿಲ್ಲ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಸಿನಿಮಾ ಪೈರಸಿ ಕಾಟಕ್ಕೆ ತುತ್ತಾಯಿತು. ಅದು ಕೂಡ ಚಿತ್ರದ ಕಲೆಕ್ಷನ್​ಗೆ ಪೆಟ್ಟು ಕೊಟ್ಟಿರುವ ಸಾಧ್ಯತೆ ಇದೆ.

ಇದನ್ನೂ ಓದಿ:

‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

ಮೊದಲ ದಿನವೇ ಲೀಕ್​ ಆಯ್ತು ರಶ್ಮಿಕಾ, ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ; ಕಲೆಕ್ಷನ್​ ಮೇಲೆ ಬೀಳಲಿದೆ ಪೆಟ್ಟು

ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಧನಯೋಗ
Daily horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಧನಯೋಗ
ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?
ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?
ಒಡಿಶಾದಲ್ಲಿ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಪರೀಕ್ಷೆ ಯಶಸ್ವಿ
ಒಡಿಶಾದಲ್ಲಿ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಪರೀಕ್ಷೆ ಯಶಸ್ವಿ
ವಿಷ್ಣು ಸಮಾಧಿ ಧ್ವಂಸ: ವಿಷಯ ತಿಳಿದಾಗ ಸುದೀಪ್ ಮೊದಲ ಪ್ರತಿಕ್ರಿಯೆ ಹೇಗಿತ್ತು
ವಿಷ್ಣು ಸಮಾಧಿ ಧ್ವಂಸ: ವಿಷಯ ತಿಳಿದಾಗ ಸುದೀಪ್ ಮೊದಲ ಪ್ರತಿಕ್ರಿಯೆ ಹೇಗಿತ್ತು
ಅನುದಾನ ಕೇಳಿದ್ರೆ ಜಾತಿ ಯಾವುದು ಅಂದ್ರು: ಸಚಿವರ ವಿರುದ್ಧ ಶಾಸಕ ಆರೋಪ
ಅನುದಾನ ಕೇಳಿದ್ರೆ ಜಾತಿ ಯಾವುದು ಅಂದ್ರು: ಸಚಿವರ ವಿರುದ್ಧ ಶಾಸಕ ಆರೋಪ
ಅಹಮದಾಬಾದ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿ ಕೊಲೆ; ತೀವ್ರಗೊಂಡ ಪ್ರತಿಭಟನೆ
ಅಹಮದಾಬಾದ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿ ಕೊಲೆ; ತೀವ್ರಗೊಂಡ ಪ್ರತಿಭಟನೆ
ಅನುದಾನದ ಕೊರತೆಯಿಂದ ನಗರದ ರಸ್ತೆ, ಕೆರೆ, ಪಾರ್ಕುಗಳು ಹಾಳಾಗಿವೆ: ವಿಶ್ವನಾಥ್
ಅನುದಾನದ ಕೊರತೆಯಿಂದ ನಗರದ ರಸ್ತೆ, ಕೆರೆ, ಪಾರ್ಕುಗಳು ಹಾಳಾಗಿವೆ: ವಿಶ್ವನಾಥ್