AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?

Samantha | Troll: ನೆಟ್ಟಿಗನ ಖಾರದ ಕಮೆಂಟ್​ ಕಂಡು ಸಮಂತಾ ಬೇಸರ ಮಾಡಿಕೊಂಡಿದ್ದಾರೆ. ಆದರೆ ಅವರು ತುಂಬ ಸಭ್ಯವಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?
ಸಮಂತಾ
TV9 Web
| Edited By: |

Updated on:Dec 22, 2021 | 2:14 PM

Share

ವೈಯಕ್ತಿಕ ಜೀವನದಲ್ಲಿ ಏನೇ ಕಿರಿಕ್​ ಇದ್ದರೂ ಕೂಡ ನಟಿ ಸಮಂತಾ (Samantha) ಅವರು ವೃತ್ತಿಜೀವನದಲ್ಲಿ ಬ್ಯಾಕ್​ ಟು ಬ್ಯಾಕ್​ ಯಶಸ್ಸು ಪಡೆಯುತ್ತಿದ್ದಾರೆ. ನಾಗ ಚೈತನ್ಯ (Naga Chaitanya) ಅವರ ಜತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ, ವಿಚ್ಛೇದನ (Divorce) ಪಡೆದುಕೊಂಡ ಬಳಿಕ ಸಮಂತಾ ಅವರಿಗೆ ಇದ್ದ ಡಿಮ್ಯಾಂಡ್​​ ಹೆಚ್ಚಿದೆ. ಇತ್ತೀಚೆಗೆ ಅವರು ಡ್ಯಾನ್ಸ್​ ಮಾಡಿದ ‘ಹು ಅಂತಿಯಾ ಮಾವ..’ ಹಾಡು ಸೂಪರ್​ ಹಿಟ್​ ಆಯಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು. ಆದರೆ ಒಂದು ವರ್ಗದ ಜನರು ಸಮಂತಾರನ್ನು ದ್ವೇಷಿಸುತ್ತಿದ್ದಾರೆ. ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಸಮಂತಾ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ (Troll) ಮಾಡಲಾಗುತ್ತಿದೆ.

ಸಮಾನ್ಯವಾಗಿ ಟ್ರೋಲ್​ಗಳಿಗೆ ಸಮಂತಾ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಕೆಲವು ಟ್ರೋಲ್​ಗಳನ್ನು ಸಿಹಿಸಿಕೊಳ್ಳುವುದು ಕಷ್ಟ. ಇತ್ತೀಚೆಗೆ ನೆಟ್ಟಿಗನೊಬ್ಬ ತುಂಬ ಖಾರವಾಗಿ ಸಮಂತಾ ಬಗ್ಗೆ ಕಮೆಂಟ್​ ಮಾಡಿದ್ದ. ಅದನ್ನು ಕಂಡು ಸಮಂತಾ ಅಭಿಮಾನಿಗಳಿಗೆ ಬೇಸರವಾಗಿದೆ. ‘ವಿಚ್ಛೇದನ ಪಡೆದು ಹಾಳಾದ ಸೆಕೆಂಡ್​ ಹ್ಯಾಂಡ್​ ಐಟಂ ಈ ಸಮಂತಾ. ಸಂಭಾವಿತ ವ್ಯಕ್ತಿಯಿಂದ ತೆರಿಗೆ ರಹಿತ 50 ಕೋಟಿ ರೂ. ಹಣವನ್ನು ದರೋಡೆ ಮಾಡಿದ್ದಾರೆ’ ಎಂದು ಆತ ಕಮೆಂಟ್​ ಮಾಡಿದ್ದಾನೆ.

ಈ ಕಮೆಂಟ್​ ಕಂಡು ಸಮಂತಾ ಬೇಸರ ಮಾಡಿಕೊಂಡಿದ್ದಾರೆ. ಆದರೆ ಅವರು ತುಂಬ ಸಭ್ಯವಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮಗೆ ದೇವರ ಆಶೀರ್ವಾದ ಸಿಗಲಿ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸಮಂತಾ ಬಗ್ಗೆ ಕೇಳಿಬಂದ ಅಂತೆ-ಕಂತೆಗಳು ಒಂದೆರಡಲ್ಲ. ಯೂಟ್ಯೂಬ್​ನಲ್ಲಿ ಅವರ ಕುರಿತು ಇಲ್ಲಸಲ್ಲದ ಅನೇಕ ಗಾಸಿಪ್​ಗಳನ್ನು ಹರಡಿಸಲಾಗಿತ್ತು. ಅವುಗಳ ವಿರುದ್ಧ ಅವರು ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದರು.

ಸಮಂತಾ ಕೈಯಲ್ಲಿ ಈಗ ಅನೇಕ ಆಫರ್​ಗಳಿವೆ. ಫಿಲಿಪ್​ ಜಾನ್​ ನಿರ್ದೇಶನದ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಇಂಗ್ಲಿಷ್​ ಸಿನಿಮಾದಲ್ಲಿ ದ್ವಿಲಿಂಗಿ​ ಮಹಿಳೆಯ ಪಾತ್ರ ಮಾಡುತ್ತಿದ್ದಾರೆ. ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಲೈಂಗಿಕ ಆಸಕ್ತಿ ಇರುವ ತಮಿಳು ಮಹಿಳೆಯಾಗಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಬಗ್ಗೆ ಅವರು ವಿಶೇಷ ಆಸಕ್ತಿ ಇಟ್ಟುಕೊಂಡಿದ್ದಾರೆ. ‘ಇದು ನನಗೆ ಹೊಸ ಪ್ರಪಂಚ. ನಾನು ಕೊನೆ ಬಾರಿಗೆ ಆಡಿಷನ್​ ನೀಡಿದ್ದು 2009ರಲ್ಲಿ ‘ಏ ಮಾಯ ಚೇಸಾವೆ’ ಚಿತ್ರಕ್ಕಾಗಿ. 12 ವರ್ಷಗಳ ಬಳಿಕ ಮತ್ತೆ ಆಡಿಷನ್​ ನೀಡಿದ್ದೇನೆ. ಮತ್ತೆ ಅದೇ ರೀತಿ ನರ್ವಸ್​ ಆಗಿದ್ದೇನೆ. ಫಿಲಿಪ್​ ಜಾನ್ ಜೊತೆ ಕೆಲಸ ಮಾಡುವುದು ತುಂಬ ಅಪರೂಪದ ಅವಕಾಶ. ಈ ಪಾತ್ರಕ್ಕೆ ಆಯ್ಕೆ ಆಗಿರುವುದು ತುಂಬ ಖುಷಿ ಆಗುತ್ತಿದೆ. ಈ ಪಯಣ ಆರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಸಮಂತಾ ಹೇಳಿದ್ದಾರೆ.​

ಇದನ್ನೂ ಓದಿ:

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

Published On - 1:38 pm, Wed, 22 December 21

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ