AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?

Samantha | Troll: ನೆಟ್ಟಿಗನ ಖಾರದ ಕಮೆಂಟ್​ ಕಂಡು ಸಮಂತಾ ಬೇಸರ ಮಾಡಿಕೊಂಡಿದ್ದಾರೆ. ಆದರೆ ಅವರು ತುಂಬ ಸಭ್ಯವಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?
ಸಮಂತಾ
TV9 Web
| Edited By: |

Updated on:Dec 22, 2021 | 2:14 PM

Share

ವೈಯಕ್ತಿಕ ಜೀವನದಲ್ಲಿ ಏನೇ ಕಿರಿಕ್​ ಇದ್ದರೂ ಕೂಡ ನಟಿ ಸಮಂತಾ (Samantha) ಅವರು ವೃತ್ತಿಜೀವನದಲ್ಲಿ ಬ್ಯಾಕ್​ ಟು ಬ್ಯಾಕ್​ ಯಶಸ್ಸು ಪಡೆಯುತ್ತಿದ್ದಾರೆ. ನಾಗ ಚೈತನ್ಯ (Naga Chaitanya) ಅವರ ಜತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ, ವಿಚ್ಛೇದನ (Divorce) ಪಡೆದುಕೊಂಡ ಬಳಿಕ ಸಮಂತಾ ಅವರಿಗೆ ಇದ್ದ ಡಿಮ್ಯಾಂಡ್​​ ಹೆಚ್ಚಿದೆ. ಇತ್ತೀಚೆಗೆ ಅವರು ಡ್ಯಾನ್ಸ್​ ಮಾಡಿದ ‘ಹು ಅಂತಿಯಾ ಮಾವ..’ ಹಾಡು ಸೂಪರ್​ ಹಿಟ್​ ಆಯಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು. ಆದರೆ ಒಂದು ವರ್ಗದ ಜನರು ಸಮಂತಾರನ್ನು ದ್ವೇಷಿಸುತ್ತಿದ್ದಾರೆ. ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಸಮಂತಾ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ (Troll) ಮಾಡಲಾಗುತ್ತಿದೆ.

ಸಮಾನ್ಯವಾಗಿ ಟ್ರೋಲ್​ಗಳಿಗೆ ಸಮಂತಾ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಕೆಲವು ಟ್ರೋಲ್​ಗಳನ್ನು ಸಿಹಿಸಿಕೊಳ್ಳುವುದು ಕಷ್ಟ. ಇತ್ತೀಚೆಗೆ ನೆಟ್ಟಿಗನೊಬ್ಬ ತುಂಬ ಖಾರವಾಗಿ ಸಮಂತಾ ಬಗ್ಗೆ ಕಮೆಂಟ್​ ಮಾಡಿದ್ದ. ಅದನ್ನು ಕಂಡು ಸಮಂತಾ ಅಭಿಮಾನಿಗಳಿಗೆ ಬೇಸರವಾಗಿದೆ. ‘ವಿಚ್ಛೇದನ ಪಡೆದು ಹಾಳಾದ ಸೆಕೆಂಡ್​ ಹ್ಯಾಂಡ್​ ಐಟಂ ಈ ಸಮಂತಾ. ಸಂಭಾವಿತ ವ್ಯಕ್ತಿಯಿಂದ ತೆರಿಗೆ ರಹಿತ 50 ಕೋಟಿ ರೂ. ಹಣವನ್ನು ದರೋಡೆ ಮಾಡಿದ್ದಾರೆ’ ಎಂದು ಆತ ಕಮೆಂಟ್​ ಮಾಡಿದ್ದಾನೆ.

ಈ ಕಮೆಂಟ್​ ಕಂಡು ಸಮಂತಾ ಬೇಸರ ಮಾಡಿಕೊಂಡಿದ್ದಾರೆ. ಆದರೆ ಅವರು ತುಂಬ ಸಭ್ಯವಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮಗೆ ದೇವರ ಆಶೀರ್ವಾದ ಸಿಗಲಿ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸಮಂತಾ ಬಗ್ಗೆ ಕೇಳಿಬಂದ ಅಂತೆ-ಕಂತೆಗಳು ಒಂದೆರಡಲ್ಲ. ಯೂಟ್ಯೂಬ್​ನಲ್ಲಿ ಅವರ ಕುರಿತು ಇಲ್ಲಸಲ್ಲದ ಅನೇಕ ಗಾಸಿಪ್​ಗಳನ್ನು ಹರಡಿಸಲಾಗಿತ್ತು. ಅವುಗಳ ವಿರುದ್ಧ ಅವರು ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದರು.

ಸಮಂತಾ ಕೈಯಲ್ಲಿ ಈಗ ಅನೇಕ ಆಫರ್​ಗಳಿವೆ. ಫಿಲಿಪ್​ ಜಾನ್​ ನಿರ್ದೇಶನದ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಇಂಗ್ಲಿಷ್​ ಸಿನಿಮಾದಲ್ಲಿ ದ್ವಿಲಿಂಗಿ​ ಮಹಿಳೆಯ ಪಾತ್ರ ಮಾಡುತ್ತಿದ್ದಾರೆ. ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಲೈಂಗಿಕ ಆಸಕ್ತಿ ಇರುವ ತಮಿಳು ಮಹಿಳೆಯಾಗಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಬಗ್ಗೆ ಅವರು ವಿಶೇಷ ಆಸಕ್ತಿ ಇಟ್ಟುಕೊಂಡಿದ್ದಾರೆ. ‘ಇದು ನನಗೆ ಹೊಸ ಪ್ರಪಂಚ. ನಾನು ಕೊನೆ ಬಾರಿಗೆ ಆಡಿಷನ್​ ನೀಡಿದ್ದು 2009ರಲ್ಲಿ ‘ಏ ಮಾಯ ಚೇಸಾವೆ’ ಚಿತ್ರಕ್ಕಾಗಿ. 12 ವರ್ಷಗಳ ಬಳಿಕ ಮತ್ತೆ ಆಡಿಷನ್​ ನೀಡಿದ್ದೇನೆ. ಮತ್ತೆ ಅದೇ ರೀತಿ ನರ್ವಸ್​ ಆಗಿದ್ದೇನೆ. ಫಿಲಿಪ್​ ಜಾನ್ ಜೊತೆ ಕೆಲಸ ಮಾಡುವುದು ತುಂಬ ಅಪರೂಪದ ಅವಕಾಶ. ಈ ಪಾತ್ರಕ್ಕೆ ಆಯ್ಕೆ ಆಗಿರುವುದು ತುಂಬ ಖುಷಿ ಆಗುತ್ತಿದೆ. ಈ ಪಯಣ ಆರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಸಮಂತಾ ಹೇಳಿದ್ದಾರೆ.​

ಇದನ್ನೂ ಓದಿ:

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

Published On - 1:38 pm, Wed, 22 December 21

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?