AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

Samantha Remuneration: ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?
ಮನೋಜ್​ ಬಾಜ್​ಪೇಯ್​, ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 09, 2021 | 3:21 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಇತ್ತೀಚೆಗೆ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ವೆಬ್​ ಸೀರಿಸ್​ ನೋಡಿದ ಬಹುತೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ಸಮಂತಾ ಅಕ್ಕಿನೇನಿ, ಮನೋಜ್​ ಬಾಜಪೇಯಿ ಅವರ ನಟನೆ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಈಗ ಈ ವೆಬ್​ ಸೀರಿಸ್​ಗಾಗಿ ಕಲಾವಿದರು ಪಡೆದ ಸಂಭಾವನೆ ಎಷ್ಟು ಎನ್ನುವ ವಿಚಾರ ಬಯಲಾಗಿದೆ. ಇದನ್ನು ಕೇಳಿದ ಅಭಿಮಾನಿಗಳು ಸಾಕಷ್ಟು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ. ಮನೋಜ್ ತೆರೆಮೇಲೆ ಸಾಕಷ್ಟು ಹೊತ್ತು ಕಾಣಿಸಿಕೊಳ್ಳುತ್ತಾರೆ. ಹೀಗಾಗಿ, ಈ ವೆಬ್​ ಸೀರಿಸ್​ಗಾಗಿ ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಇವರೇ. ಮೂಲಗಳ ಪ್ರಕಾರ ಮನೋಜ್​ ಅವರಿಗೆ ಎರಡೂ ವೆಬ್​ ಸೀರಿಸ್​ ಸೇರಿ 10 ಕೋಟಿ ರೂಪಾಯಿ ನೀಡಲಾಗಿದೆಯಂತೆ.

ಇನ್ನು, ಸಮಂತಾ ಕೂಡ ಈ ವೆಬ್​ ಸೀರಿಸ್​ ಮೂಲಕ ಮೋಡಿ ಮಾಡಿದ್ದಾರೆ. ಅವರು ನಟಿಸಿರುವ ರಾಜಿ ಪಾತ್ರ ಎಲ್ಲರಿಗೂ ಇಷ್ಟವಾಗಿದೆ. ಅವರು ಈ ವೆಬ್​ ಸೀರಿಸ್​ಗಾಗಿ ಬರೋಬ್ಬರಿ 3-4 ಕೋಟಿ ರೂಪಾಯಿ ಪಡೆದಿದ್ದಾರಂತೆ. ಸಮಂತಾ ನಟನೆ ನೋಡಿದ ಅನೇಕರು ಅವರಿಗೆ ಸಂಭಾವನೆ ಕಡಿಮೆ ಆಯಿತು ಎಂದಿದ್ದಾರೆ.

ಶ್ರೀಕಾಂತ್ ತಿವಾರಿ ಪತ್ನಿ ಆಗಿ ಕಾಣಿಸಿಕೊಂಡಿರುವ ಪ್ರಿಯಾಮಣಿ (ಸುಚಿತ್ರಾ) 80 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಶರೀಫ್​ ಹಶ್ಮಿ (ಸಾಜಿದ್​) 65 ಲಕ್ಷ ರೂಪಾಯಿ, ದರ್ಶನ್ ಕುಮಾರ್ (ಜೆಕೆ)​ 1 ಕೋಟಿ ಪಡೆದಿದ್ದಾರೆ.

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್ ಜೂನ್​ 3ರ ಸಂಜೆಯಿಂದಲೇ ಪ್ರಸಾರ ಕಂಡಿತ್ತು. ಅಮೇಜಾನ್ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ಈ ವೆಬ್​ ಸೀರಿಸ್​ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಮೊದಲ ಸೀರಿಸ್​ ಯಶಸ್ವಿಯಾಗಿಸಿದ ನಿರ್ದೇಶಕ ರಾಜ್​ ಮತ್ತು ಡಿಕೆ ಎರಡನೇ ಸೀರಿಸ್​ ಕೂಡ ಯಶಸ್ವಿ ಮಾಡಿದ್ದಾರೆ. ಸೀಸನ್​ 3 ಕೂಡ ತೆರೆಗೆ ಬರುವ ಸೂಚನೆಯನ್ನು ನಿರ್ದೇಶಕರು ನೀಡಿದ್ದಾರೆ.

ಇದನ್ನೂ ಓದಿ: ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

Published On - 11:53 am, Wed, 9 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?