AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

Samantha Remuneration: ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?
ಮನೋಜ್​ ಬಾಜ್​ಪೇಯ್​, ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 09, 2021 | 3:21 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಇತ್ತೀಚೆಗೆ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ವೆಬ್​ ಸೀರಿಸ್​ ನೋಡಿದ ಬಹುತೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ಸಮಂತಾ ಅಕ್ಕಿನೇನಿ, ಮನೋಜ್​ ಬಾಜಪೇಯಿ ಅವರ ನಟನೆ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಈಗ ಈ ವೆಬ್​ ಸೀರಿಸ್​ಗಾಗಿ ಕಲಾವಿದರು ಪಡೆದ ಸಂಭಾವನೆ ಎಷ್ಟು ಎನ್ನುವ ವಿಚಾರ ಬಯಲಾಗಿದೆ. ಇದನ್ನು ಕೇಳಿದ ಅಭಿಮಾನಿಗಳು ಸಾಕಷ್ಟು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ. ಮನೋಜ್ ತೆರೆಮೇಲೆ ಸಾಕಷ್ಟು ಹೊತ್ತು ಕಾಣಿಸಿಕೊಳ್ಳುತ್ತಾರೆ. ಹೀಗಾಗಿ, ಈ ವೆಬ್​ ಸೀರಿಸ್​ಗಾಗಿ ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಇವರೇ. ಮೂಲಗಳ ಪ್ರಕಾರ ಮನೋಜ್​ ಅವರಿಗೆ ಎರಡೂ ವೆಬ್​ ಸೀರಿಸ್​ ಸೇರಿ 10 ಕೋಟಿ ರೂಪಾಯಿ ನೀಡಲಾಗಿದೆಯಂತೆ.

ಇನ್ನು, ಸಮಂತಾ ಕೂಡ ಈ ವೆಬ್​ ಸೀರಿಸ್​ ಮೂಲಕ ಮೋಡಿ ಮಾಡಿದ್ದಾರೆ. ಅವರು ನಟಿಸಿರುವ ರಾಜಿ ಪಾತ್ರ ಎಲ್ಲರಿಗೂ ಇಷ್ಟವಾಗಿದೆ. ಅವರು ಈ ವೆಬ್​ ಸೀರಿಸ್​ಗಾಗಿ ಬರೋಬ್ಬರಿ 3-4 ಕೋಟಿ ರೂಪಾಯಿ ಪಡೆದಿದ್ದಾರಂತೆ. ಸಮಂತಾ ನಟನೆ ನೋಡಿದ ಅನೇಕರು ಅವರಿಗೆ ಸಂಭಾವನೆ ಕಡಿಮೆ ಆಯಿತು ಎಂದಿದ್ದಾರೆ.

ಶ್ರೀಕಾಂತ್ ತಿವಾರಿ ಪತ್ನಿ ಆಗಿ ಕಾಣಿಸಿಕೊಂಡಿರುವ ಪ್ರಿಯಾಮಣಿ (ಸುಚಿತ್ರಾ) 80 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಶರೀಫ್​ ಹಶ್ಮಿ (ಸಾಜಿದ್​) 65 ಲಕ್ಷ ರೂಪಾಯಿ, ದರ್ಶನ್ ಕುಮಾರ್ (ಜೆಕೆ)​ 1 ಕೋಟಿ ಪಡೆದಿದ್ದಾರೆ.

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್ ಜೂನ್​ 3ರ ಸಂಜೆಯಿಂದಲೇ ಪ್ರಸಾರ ಕಂಡಿತ್ತು. ಅಮೇಜಾನ್ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ಈ ವೆಬ್​ ಸೀರಿಸ್​ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಮೊದಲ ಸೀರಿಸ್​ ಯಶಸ್ವಿಯಾಗಿಸಿದ ನಿರ್ದೇಶಕ ರಾಜ್​ ಮತ್ತು ಡಿಕೆ ಎರಡನೇ ಸೀರಿಸ್​ ಕೂಡ ಯಶಸ್ವಿ ಮಾಡಿದ್ದಾರೆ. ಸೀಸನ್​ 3 ಕೂಡ ತೆರೆಗೆ ಬರುವ ಸೂಚನೆಯನ್ನು ನಿರ್ದೇಶಕರು ನೀಡಿದ್ದಾರೆ.

ಇದನ್ನೂ ಓದಿ: ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

Published On - 11:53 am, Wed, 9 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ