AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

Samantha Remuneration: ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?
ಮನೋಜ್​ ಬಾಜ್​ಪೇಯ್​, ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 09, 2021 | 3:21 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಇತ್ತೀಚೆಗೆ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ವೆಬ್​ ಸೀರಿಸ್​ ನೋಡಿದ ಬಹುತೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ಸಮಂತಾ ಅಕ್ಕಿನೇನಿ, ಮನೋಜ್​ ಬಾಜಪೇಯಿ ಅವರ ನಟನೆ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಈಗ ಈ ವೆಬ್​ ಸೀರಿಸ್​ಗಾಗಿ ಕಲಾವಿದರು ಪಡೆದ ಸಂಭಾವನೆ ಎಷ್ಟು ಎನ್ನುವ ವಿಚಾರ ಬಯಲಾಗಿದೆ. ಇದನ್ನು ಕೇಳಿದ ಅಭಿಮಾನಿಗಳು ಸಾಕಷ್ಟು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ. ಮನೋಜ್ ತೆರೆಮೇಲೆ ಸಾಕಷ್ಟು ಹೊತ್ತು ಕಾಣಿಸಿಕೊಳ್ಳುತ್ತಾರೆ. ಹೀಗಾಗಿ, ಈ ವೆಬ್​ ಸೀರಿಸ್​ಗಾಗಿ ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಇವರೇ. ಮೂಲಗಳ ಪ್ರಕಾರ ಮನೋಜ್​ ಅವರಿಗೆ ಎರಡೂ ವೆಬ್​ ಸೀರಿಸ್​ ಸೇರಿ 10 ಕೋಟಿ ರೂಪಾಯಿ ನೀಡಲಾಗಿದೆಯಂತೆ.

ಇನ್ನು, ಸಮಂತಾ ಕೂಡ ಈ ವೆಬ್​ ಸೀರಿಸ್​ ಮೂಲಕ ಮೋಡಿ ಮಾಡಿದ್ದಾರೆ. ಅವರು ನಟಿಸಿರುವ ರಾಜಿ ಪಾತ್ರ ಎಲ್ಲರಿಗೂ ಇಷ್ಟವಾಗಿದೆ. ಅವರು ಈ ವೆಬ್​ ಸೀರಿಸ್​ಗಾಗಿ ಬರೋಬ್ಬರಿ 3-4 ಕೋಟಿ ರೂಪಾಯಿ ಪಡೆದಿದ್ದಾರಂತೆ. ಸಮಂತಾ ನಟನೆ ನೋಡಿದ ಅನೇಕರು ಅವರಿಗೆ ಸಂಭಾವನೆ ಕಡಿಮೆ ಆಯಿತು ಎಂದಿದ್ದಾರೆ.

ಶ್ರೀಕಾಂತ್ ತಿವಾರಿ ಪತ್ನಿ ಆಗಿ ಕಾಣಿಸಿಕೊಂಡಿರುವ ಪ್ರಿಯಾಮಣಿ (ಸುಚಿತ್ರಾ) 80 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಶರೀಫ್​ ಹಶ್ಮಿ (ಸಾಜಿದ್​) 65 ಲಕ್ಷ ರೂಪಾಯಿ, ದರ್ಶನ್ ಕುಮಾರ್ (ಜೆಕೆ)​ 1 ಕೋಟಿ ಪಡೆದಿದ್ದಾರೆ.

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್ ಜೂನ್​ 3ರ ಸಂಜೆಯಿಂದಲೇ ಪ್ರಸಾರ ಕಂಡಿತ್ತು. ಅಮೇಜಾನ್ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ಈ ವೆಬ್​ ಸೀರಿಸ್​ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಮೊದಲ ಸೀರಿಸ್​ ಯಶಸ್ವಿಯಾಗಿಸಿದ ನಿರ್ದೇಶಕ ರಾಜ್​ ಮತ್ತು ಡಿಕೆ ಎರಡನೇ ಸೀರಿಸ್​ ಕೂಡ ಯಶಸ್ವಿ ಮಾಡಿದ್ದಾರೆ. ಸೀಸನ್​ 3 ಕೂಡ ತೆರೆಗೆ ಬರುವ ಸೂಚನೆಯನ್ನು ನಿರ್ದೇಶಕರು ನೀಡಿದ್ದಾರೆ.

ಇದನ್ನೂ ಓದಿ: ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

Published On - 11:53 am, Wed, 9 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!