AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ

ಬ್ಯಾಕ್​ ಟು ಬ್ಯಾಕ್​ ಹಿಟ್​ ಕೊಟ್ಟ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಬಾಲಿವುಡ್​ ನಟ ಶಾರುಖ್​ ಖಾನ್​ ಜತೆ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು.

ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ
ಸಮಂತಾ
TV9 Web
| Edited By: |

Updated on: Oct 28, 2021 | 7:32 AM

Share

ಸಮಂತಾ ಸದ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದ ಹೊರತಾಗಿಯೂ ಅವರು ಸಿನಿಮಾ ಕೆಲಸಗಳನ್ನು ಬಿಟ್ಟಿಲ್ಲ. ಚಿತ್ರರಂಗದ ಬಗ್ಗೆ ಅವರು ಸಾಕಷ್ಟು ಗಮನ ಹರಿಸುತ್ತಿದ್ದಾರೆ. ಈ ಮಧ್ಯೆ, ಸಮಂತಾ ಅವರಿಗೆ ತಪ್ಪಿ ಹೋಗಿದ್ದ ಆಫರ್​ ಒಂದು ಮರಳಿ ಸಿಕ್ಕಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಬ್ಯಾಕ್​ ಟು ಬ್ಯಾಕ್​ ಹಿಟ್​ ಕೊಟ್ಟ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಬಾಲಿವುಡ್​ ನಟ ಶಾರುಖ್​ ಖಾನ್​ ಜತೆ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರಾ ನಾಯಕಿ. ಆದರೆ ಅವರಿಗಿಂತಲೂ ಮುಂಚೆ ಸಮಂತಾಗೆ ಆಫರ್ ನೀಡಲಾಗಿತ್ತು. ನಟನೆಗೆ ಕೊಂಚ ಬ್ರೇಕ್​ ನೀಡಿ ನಾಗ ಚೈತನ್ಯ ಜೊತೆ ಮಗು ಪಡೆಯಬೇಕು ಎಂದು ಸಮಂತಾ ಪ್ಲ್ಯಾನ್​ ಮಾಡಿಕೊಂಡಿದ್ದರು. ಈ ಕಾರಣಕ್ಕೆ ಅವರು ಶಾರುಖ್​ ಸಿನಿಮಾ ಆಫರ್​ ರಿಜೆಕ್ಟ್​ ಮಾಡಿದ್ದರು. ಆದರೆ, ಆ ಸಂದರ್ಭದಲ್ಲೇ ಅವರ ಕುಟುಂಬದಲ್ಲಿ ಬಿರುಗಾಳಿ ಬೀಸಿತ್ತು. ಸಮಂತಾ ಮತ್ತು ನಾಗ ಚೈತನ್ಯ ಬೇರಾದರು. ಸಮಂತಾಗೆ ಈ ಆಫರ್​ ತಪ್ಪೋಕೆ ನಾಗ ಚೈತನ್ಯ ಅವರೇ ನೇರ ಕಾರಣ ಎಂದು ಅನೇಕರು ದೂರಿದ್ದರು. ಅಚ್ಚರಿ ಎಂಬಂತೆ ಈಗ ಈ ಆಫರ್ ಮರಳಿ ಸಮಂತಾ ಬಳಿ ಬಂದಿದೆ.

ಎಲ್ಲರಿಗೂ ಗೊತ್ತಿರುವಂತೆ ನಯನತಾರಾಗೆ ಶೀಘ್ರವೇ ಮದುವೆ ಆಗುತ್ತಿದೆ. ಬಹುಕಾಲದ ಗೆಳೆಯ, ನಿರ್ದೇಶಕ ವಿಘ್ನೇಶ್​ ಶಿವನ್​ ಜತೆ ಅವರು ಹಸೆಮಣೆ ಏರುತ್ತಿದ್ದಾರೆ. ಇದಕ್ಕೆ ಅವರು ತಯಾರಿ ಆಂಭಿಸಿದ್ದಾರೆ. ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಶೂಟಿಂಗ್​ ಮುಗಿದ ನಂತರ ನಯನತಾರಾ ಹಸೆಮಣೆ ಏರಬೇಕಿತ್ತು. ಆದರೆ, ಶಾರುಖ್​ ಖಾನ್​ ಮಗ ಆರ್ಯನ್ ಖಾನ್​ ಅವರನ್ನು ಜೈಲಿನಿಂದ ಹೊರ ತರುವ ಪ್ರಯತ್ನದಲ್ಲಿದ್ದಾರೆ. ಈ ಕಾರಣದಿಂದ ಅವರು ಶೂಟಿಂಗ್​ ಸೆಟ್​ಗೆ ಬರುತ್ತಿಲ್ಲ. ಇದರಿಂದ ಶೂಟಿಂಗ್​ ವಿಳಂಬವಾಗಿದೆ. ಈ ಕಾರಣಕ್ಕೆ ನಯನತಾರಾ ಸಿನಿಮಾದಿಂದ ಹೊರ ನಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ, ನಿರ್ದೇಶಕರು ಮರಳಿ ಸಮಂತಾ ಬಳಿಯೇ ತೆರಳಿದ್ದಾರೆ. ಸಮಂತಾ ಮರುಮಾತಿಲ್ಲದೆ ಈ ಆಫರ್​ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್